ಗೆದ್ದು ನಿದ್ದೆ ಮಾಡೋದೆ ಗದ್ದಿಗೌಡ್ರ ಕೆಲಸ: ಸಚಿವ ಶಿವಾನಂದ ಪಾಟೀಲ

KannadaprabhaNewsNetwork |  
Published : May 05, 2024, 02:06 AM IST
 ಫೋಟೋ: 4ಜಿಎಲ್ಡಿ1- ಗುಳೇದಗುಡ್ಡದ ಶೆಟ್ಟರ ಪಪೂ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೇಸ್ ಕಾರ್ಯಕರ್ತರ, ಮತದಾರರ ಸಭೆಯಲ್ಲಿ ಸಚಿವ ಶಿವಾನಂದ ಪಾಟೀಲ ಮಾತನಾಡಿದರು.  | Kannada Prabha

ಸಾರಾಂಶ

ಮೋದಿ 10 ಸಲಾ ಗೆದ್ದ ಬಂದರೂ, ಬಾಗಲಕೋಟೆಯಲ್ಲಿ ಮಾತ್ರ ಈ ಬಾರಿ ಕಾಂಗ್ರೆಸ್ ಗೆಲ್ಲೋದು ನೂರಕ್ಕೆ ನೂರು ಸತ್ಯ ಎಂದು ಸಚಿವ ಶಿವಾನಂದ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡಪ್ರಭವಾರ್ತೆ ಗುಳೇದಗುಡ್ಡ

ಮೋದಿ 10 ಸಲಾ ಗೆದ್ದ ಬಂದರೂ, ಬಾಗಲಕೋಟೆಯಲ್ಲಿ ಮಾತ್ರ ಈ ಬಾರಿ ಕಾಂಗ್ರೆಸ್ ಗೆಲ್ಲೋದು ನೂರಕ್ಕೆ ನೂರು ಸತ್ಯ ಎಂದು ಸಚಿವ ಶಿವಾನಂದ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

ಶುಕ್ರವಾರ ಪಟ್ಟಣದ ಎಸ್.ಆರ್.ಶೆಟ್ಟರ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ. ಈ ಬಾರಿ ಮೋದಿ ನೋಡಿ ಮತ ಕೊಡೋದಿಲ್ಲ. ನಾವು ಪಕ್ಷ ನೋಡಿ, ಮುಖ ನೋಡಿ ವೋಟು ಹಾಕಿ ಎಂದು ಕೇಳಂಗಿಲ್ಲ. ನಿಮ್ಮ ಕೆಲಸವನ್ನು ಯಾರ ಮಾಡ್ತಾರ ಅವರಿಗೆ ವೋಟು ಹಾಕ್ರಿ ಅಂತ ಕೇಳ್ತಿವಿ ಎಂದರು.ಗದ್ದಿಗೌಡರು ಏನು ಕೆಲಸ ಮಾಡಿದ್ದಾರೆಂದು ವೋಟು ಹಾಕುತ್ತೀರಿ?. ಇನ್ನೊಬ್ರ ಹೆಸರಿನ ಮೇಲೆ ಆರಿಸಿ ಬರೋದು, ಬಂದ ಮೇಲೆ ನಿದ್ದಿ ಮಾಡೋದೆ ಅವರ ಕೆಲ್ಸಾ ಎಂದು ವ್ಯಂಗ್ಯವಾಡಿದರು.

ಕಿವಿ ಹಿಂಡಿ ಕೇಳ್ತಾರ:

₹ 4 ಲಕ್ಷ 36 ಸಾವಿರ ಕೋಟಿ ಜಿಎಸ್ಟಿ ಹಣ ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ ಹೋಗುತ್ತೆ. ಕರ್ನಾಟಕದ 28 ಲೋಕಸಭಾ ಸದಸ್ಯರೊಳಗೆ 26 ಜನ ಬಿಜೆಪಿಯವರೇ ಇದ್ದಾರೆ. ಸಾವಿರ ಕೋಟಿ ಪರಿಹಾರ ಕೇಳಿ ಅಂದರೆ, ಒಬ್ಬ ಸದಸ್ಯನೂ ತುಟಿ ಪಿಟಕ್ ಅನ್ನಲಿಲ್ಲ. ಈ ಬಾರಿ ಬಾಗಲಕೋಟೆ ಬಿಜಾಪುರದಲ್ಲಿ ಬದಲಾವಣೆ ಮಾಡಿದರೆ ನಮ್ಮ ಸದಸ್ಯರು ಮೋದಿಯವರ ಕಿವಿ ಹಿಂಡಿ ಕೇಳುತ್ತಾರೆ ಎಂದು ಹೇಳಿದರು.

ಬರಗಾಲ ಬಂದಾಗ ನಾವು 100 ದಿನಾ ನರೇಗಾ ಕೆಲಸ ಕೊಡತಿದ್ದೆವು. ಈ ಸಲಾ ಬರಗಾಲ ಬಂದರೂ ಮೋದಿಯವ್ರು ನರೇಗಾ ಯೋಜನೆ ನಿಲ್ಲಿಸಿದ್ದಾರೆ. ಕೇಂದ್ರದಾಗ ಈ ಬಾರಿ ನಮ್ಮ ಸರ್ಕಾರ ಬಂದ್ರ ನರೇಗಾ ಕೆಲಸದ ದಿನ 150 ದಿನಕ್ಕೆ ಹೆಚ್ಚಿಸಿ ₹ 400 ಕೂಲಿ ಕೊಡ್ತಿವಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜೆಡಿಎಸ್ ತೊರೆದ 20ಕ್ಕೂ ಹೆಚ್ಚು ಮುಸ್ಲಿಂ ಯುವಕರು ಕಾಂಗ್ರೆಸ್ ಸೇರ್ಪಡೆಗೊಂಡರು. ಅವರಿಗೆ ಶಿವಾನಂದ ಪಾಟೀಲ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.

ವೇದಿಕೆ ಮೇಲೆ ಹೊಳಬಸು ಶೆಟ್ಟರ್, ಮಹೇಶ ಹೊಸಗೌಡರ, ರಾಜು ತಾಪಡಿತಾ, ಹನಮಂತಗೌಡ ಯಕ್ಕಪ್ಪನವರ, ನಾಗೇಶ ಪಾಗಿ, ರಫೀಕ್ ಕಲ್ಬುರ್ಗಿ, ಎಂ.ಬಿ.ಹಂಗರಗಿ, ಅಮಾತೆಪ್ಪ ಕೊಪ್ಪಳ, ನೇಕಾರ ಜಿಲ್ಲಾ ಮುಖಂಡ ಚಂದ್ರಕಾಂತ ಶೇಖಾ, ಶ್ರೀಕಾಂತ ಹುನಗುಂದ, ಶಶಿಕಾಂತ ಊದಗಟ್ಟಿ, ಮಲ್ಲಣ್ಣ ಯಲಿಗಾರ ಸೇರಿದಂತೆ ಇನ್ನಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರದಿಂದ ಯಲ್ಲಮ್ಮನಗುಡ್ಡಕ್ಕೆ ₹118 ಅನುದಾನ
ಮಡಿಕೇರಿಯ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮ