ಕನ್ನಡಪ್ರಭ ವಾರ್ತೆ ಹೊನ್ನಾಳಿ
ಸೋಮವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25 ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ ಘಟಕ 1, 2, ಯುವ ರೆಡ್ ಕ್ರಾಸ್, ರೇಂಜರ್ಸ.ರೋವರ್ಸ ಘಟಕಗಳ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ಗೈಡ್ಲೈನ್ ಪ್ರಕಾರ ನಾವು ಒಂದೂವರೆ ತಿಂಗಳು ಹಿಂದೆ ಇದ್ದೇವೆ. ಹೀಗಾಗಿ, ಪರೀಕ್ಷೆಗಳನ್ನು ಮುಂದೂಡಲು ಸಾಧ್ಯವಿಲ್ಲ. ಮುಂದೂಡಿದರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಎನ್ಇಪಿಯಂತೆ ಎಸ್ಇಪಿನಲ್ಲೂ ಕೌಶಲ್ಯಕ್ಕೆ ಹೆಚ್ಚು ಉತ್ತೇಜನ ಕೊಡಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಶಿಸ್ತಿನಿಂದ, ಶ್ರದ್ಧೆಯಿಂದ ಹೆಚ್ಚು ಹೆಚ್ಚು ಅಭ್ಯಾಸ ಮಾಡುವ ಮೂಲಕ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದರು.ಕರ್ನಾಟಕ ಕಾಲೇಜು ಮತ್ತು ವಿ.ವಿ. ಅಧ್ಯಾಪಕರ ಸಂಘದ ಮಾಜಿ ಅಧ್ಯಕ್ಷ ಪ್ರೊ. ಸಿ.ಎಚ್. ಮುರುಗೇಂದ್ರಪ್ಪ ಮಾತನಾಡಿ, ಜಿಲ್ಲೆಗೆ ದಾವಣಗೆರೆ ವಿವಿ ತರಲು, ಸ್ಥಾಪನೆ ಮಾಡಲು ಸಾಕಷ್ಟು ಹೋರಾಟಗಳನ್ನು ಮಾಡಲಾಗಿದೆ. ಕುವೆಂಪು ವಿ.ವಿ.ಗಿಂತ ಈಗ ದಾವಣಗೆರೆ ವಿ.ವಿ.ಯಲ್ಲಿ ಹೆಚ್ಚು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಸುಮಾರು 30 ವರ್ಷಗಳ ಕಾಲ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಪರವಾಗಿ ಹೋರಾಟ ಮಾಡಿದ್ದೇನೆ ಎಂದರು.
ನಾನು ವಿವಿಧ ಕನ್ನಡ ದಿನಪತ್ರಿಕೆಗಳನ್ನು ಓದಿ ಬೆಳೆದವನು. ನಿಮಗೆ ಬೇಕಾದ ಎಲ್ಲ ವಿಷಯಗಳು ಇದರಲ್ಲಿವೆ. ಕನಿಷ್ಠ ಅರ್ಧ ಗಂಟೆ ಸಮಯ ಮೀಸಲಿಟ್ಟು, ಪತ್ರಿಕೆಗಳನ್ನು ಓದಿದರೆ, ನಿಮಗೆ ಐಎಎಸ್, ಐಪಿಎಸ್ನಂತಹ ಪರೀಕ್ಷೆ ಬರೆಯಲು ಆತ್ಮವಿಶ್ವಾಸ ಬರುತ್ತದೆ ಎಂದರು.
ಕಾಲೇಜಿನಿಂದ ವರ್ಗಾವಣೆಗೊಂಡ ಅಧ್ಯಾಪಕರುಗಳನ್ನು ಸನ್ಮಾನಿಸಲಾಯಿತು. 25 ಬಾರಿ ರಕ್ತದಾನ ಮಾಡಿದ ಎನ್.ಕೆ. ಆಂಜನೇಯ ಅವರನ್ನು ಸನ್ಮಾನಿಸಲಾಯಿತು. ಪ್ರೊ. ಹರಾಳು ಮಹಾಬಲೇಶ್ವರ ಎಲ್ಲರಿಗೂ ವಂದನೆ ಸಲ್ಲಿಸಿದರು.
ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25ನೇ ಸಾಲಿನ ವಿವಿಧ ಘಟಕಗಳ ಉದ್ಘಾಟನೆ ಸಮಾರಂಭವನ್ನು ದಾವಣಗೆರೆ ವಿ.ವಿ. ಕುಲಸಚಿವ ಪ್ರೊ. ಸಿ.ಕೆ. ರಮೇಶ್ ಉದ್ಘಾಟಿಸಿದರು.