ಗಜೇಂದ್ರಗಡ ಪುರಸಭೆಯಿಂದ ಬೀದಿ ನಾಯಿಗಳ ಕಾರ್ಯಾಚರಣೆ

KannadaprabhaNewsNetwork |  
Published : May 18, 2025, 01:08 AM IST
ಗಜೇಂದ್ರಗಡ ಪಟ್ಟಣದಲ್ಲಿ ಪುರಸಭೆಯಿಂದ ನಡೆದ ಬೀದಿ ನಾಯಿಗಳ ಕಾರ್ಯಾಚರಣೆ | Kannada Prabha

ಸಾರಾಂಶ

ಗಜೇಂದ್ರಗಡ ಪಟ್ಟಣದಲ್ಲಿ ಇತ್ತೀಚೆಗೆ ಬೀದಿ ನಾಯಿಗಳ ದಾಳಿಯಿಂದ ಮಹಿಳೆ ಅಸುನೀಗಿದ ಆರೋಪದ ಹಿನ್ನೆಲೆ ಸ್ಥಳೀಯ ಪುರಸಭೆ ಬೀದಿ ನಾಯಿಗಳನ್ನು ಹಿಡಿಯುವ ಕಾರ್ಯಾಚರಣೆ ನಡೆಸಿ ೨೦೦ಕ್ಕೂ ಅಧಿಕ ಬೀದಿ ನಾಯಿಗಳನ್ನು ದೂರದ ಗುಡ್ಡದಲ್ಲಿ ಬಿಟ್ಟು ಬಂದಿದ್ದಾರೆ.

ಗಜೇಂದ್ರಗಡ: ಪಟ್ಟಣದಲ್ಲಿ ಇತ್ತೀಚೆಗೆ ಬೀದಿ ನಾಯಿಗಳ ದಾಳಿಯಿಂದ ಮಹಿಳೆ ಅಸುನೀಗಿದ ಆರೋಪದ ಹಿನ್ನೆಲೆ ಸ್ಥಳೀಯ ಪುರಸಭೆ ಬೀದಿ ನಾಯಿಗಳನ್ನು ಹಿಡಿಯುವ ಕಾರ್ಯಾಚರಣೆ ನಡೆಸಿ ೨೦೦ಕ್ಕೂ ಅಧಿಕ ಬೀದಿ ನಾಯಿಗಳನ್ನು ದೂರದ ಗುಡ್ಡದಲ್ಲಿ ಬಿಟ್ಟು ಬಂದಿದ್ದಾರೆ.

ಪಟ್ಟಣದಲ್ಲಿ ಬೀದಿ ದನ ಹಾಗೂ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಸಾರ್ವಜನಿಕರು, ಕೆಲ ಸಂಘಟನೆ ಮುಖಂಡರು ಅನೇಕ ಬಾರಿ ಮೌಖಿಕವಾಗಿ ಹಾಗೂ ಮನವಿ ನೀಡಿದರೂ ಸಹ ಪುರಸಭೆ ಬೀದಿ ನಾಯಿ ಹಾಗೂ ಬೀದಿ ದನಗಳನ್ನು ಮಾಲಿಕರು ಕಟ್ಟಿ ಹಾಕಿಕೊಳ್ಳದಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಕುರಿತು ಪ್ರಚಾರ ನಡೆಸಿ ಕಾಟಾಚಾರಕ್ಕೆ ಕಾರ್ಯಾಚರಣೆ ನಡೆಸುತ್ತಾರೆ ಎನ್ನುವ ಆರೋಪಗಳಿದ್ದವು. ಆದರೆ ಬೀದಿ ನಾಯಿಗಳ ದಾಳಿಗೆ ಮಹಿಳೆ ಅಸುನೀಗಿದ ಆರೋಪ ಹಿನ್ನೆಲೆ ಎಚ್ಚೆತ್ತುಕೊಂಡ ಪುರಸಭೆ ಮೈಸೂರಿನ ಪರಿಣಿತ ೮ ಜನರ ತಂಡದಿಂದ ಬೀದಿ ದನಗಳ ಕಾರ್ಯಾಚರಣೆಗೆ ಮುಂದಾಗಿದ್ದು ಸಾರ್ವಜನಿಕರಿಂದ ಪ್ರಶಂಸೆ ಜತೆಗೆ ಅಲ್ಲಲ್ಲಿ ಅಧಿಕಾರಿಗಳಿಗೆ ಕಿರಿಕಿರಿ ಉಂಟಾಗುತ್ತಿದೆ.

ಪಟ್ಟಣದ ಜೋಡು ರಸ್ತೆ, ಅಗಸಿ, ಹೀರೆಬಜಾರ, ಗೌಳಿಗಲ್ಲಿ, ನಾಲಗಾರ ಓಣಿ ಸೇರಿ ಅನೇಕ ಬಡಾವಣೆಗಳಲ್ಲಿ ಬೀದಿ ನಾಯಿಗಳು, ಬೀದಿ ದನಗಳ ಹಾವಳಿಯಿಂದ ಜನತೆ ಬೇಸತ್ತಿದ್ದಾರೆ. ಪರಿಣಾಮ ಜೋಡು ರಸ್ತೆ, ಮೈಸೂರ ಮಠದ ಬಳಿ ಸಂಜೆ ಬೀದಿ ದನಗಳ ಕಾಳಗ ಆರಂಭವಾದರೆ ಸಾರ್ವಜನಿಕರು ಪ್ರಾಣ ಭಯದಲ್ಲಿ ಸಂಚರಿಸುವ ದುಸ್ಥಿತಿಯಿದೆ. ಇತ್ತ ದ್ವೀಚಕ್ರ ವಾಹನ ಸವಾರರು ಹಾಗೂ ಮಕ್ಕಳ ಮೇಲೆ ಎರಗುವ ಬೀದಿ ನಾಯಿಗಳ ದಾಳಿಗೆ ಮುಕ್ತಿ ಯಾವಾಗ ಎಂಬ ಪ್ರಶ್ನೆಗಳಿಗೆ ಉತ್ತರ ದೊರೆತಿದ್ದು ಶುಕ್ರವಾರ ಹಿಡಿದ ೧೦೨ ಬೀದಿ ನಾಯಿಗಳನ್ನು ಹಾಗೂ ಶನಿವಾರ ಸೆರೆ ಹಿಡಿದ ೯೨ ಬೀದಿ ನಾಯಿಗಳನ್ನು ದಟ್ಟವಾದ ಗುಡ್ಡದಲ್ಲಿ ಬಿಟ್ಟು ಬಂದಿದ್ದಾರೆ. ಈಗ ಪುರಸಭೆ ಅಧಿಕಾರಿಗಳು ಬೀದಿ ನಾಯಿಗಳ ಕಾರ್ಯಾಚರಣೆಗೆ ಮುಂದಾದಂತೆ ಬೀದಿ ದನಗಳ ಕಾರ್ಯಾಚರಣೆಗೆ ಮುಂದಾಗಬೇಕು ಎಂಬ ಆಗ್ರಹಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.

ಪಟ್ಟಣದಲ್ಲಿ ಬೀದಿ ನಾಯಿಗಳ ಕಾರ್ಯಾಚರಣೆ ಕೈಗೊಂಡಿದ್ದು, ೨೦೦ಕ್ಕೂ ಅಧಿಕ ನಾಯಿಗಳನ್ನು ಸೆರೆಹಿಡಿಯಲಾಗಿದೆ. ಭಾನುವಾರ ಸಹ ಕಾರ್ಯಾಚರಣೆ ನಡೆಸುತ್ತಿದ್ದು ಸಾಕು ನಾಯಿಗಳಿಗೆ ಬೆಲ್ಟ್ ಹಾಕಿ ಮನೆಯ ಕಂಪೌಂಡನಲ್ಲಿ ಕಟ್ಟಿಹಾಕಬೇಕು.ಸಾರ್ವಜನಿಕರಿಗೆ ತೊಂದರೆ ನೀಡುವ ಬೀದಿ ನಾಯಿಗಳನ್ನು ಹಿಡಿದು ಬೇರೆಡೆ ಬಿಟ್ಟು ಬರಲು ಕಾರ್ಯಾಚರಣೆ ಕೈಗೊಂಡಿದ್ದೇವೆ ಪುರಸಭೆ ಕಿರಿಯ ಆರೋಗ್ಯ ನಿರೀಕ್ಷಕ ಶಿವಕುಮಾರ ಇಲಾಳ ಹೇಳಿದರು.

ಪಟ್ಟಣದಲ್ಲಿ ಬೀದಿ ನಾಯಿಗಳು ಸೇರಿದಂತೆ ಸಾರ್ವಜನಿಕರಿಗೆ ತೊಂದರೆ ನೀಡುವ ಪ್ರಾಣಿಗಳ ಕಾರ್ಯಾಚರಣೆ ನಡೆಸುವುದಾಗಿ ಜಾಗೃತಿ ಮೂಡಿಸಿಸುವುದರ ಜತೆಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಾರ್ಯಾಚರಣೆ ನಡೆಸುವಂತೆ ಸೂಚಿಸಿದ್ದೇನೆ. ಸಾರ್ವಜನಿಕರು ಅಧಿಕಾರಿಗಳಿಗೆ ಸಹಕಾರ ನೀಡಬೇಕು ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಧಿವೇಶನ ಮುಗಿದ ಬಳಿಕ ಡಿಕೆಶಿಗೆ ಶುಭಸುದ್ದಿ : ಇಕ್ಬಾಲ್
ಬೆಳಗಾವೀಲೂ ‘ಕೈ’ ಡಿನ್ನರ್‌ ಸಭೆಗೆ ಬಿವೈವಿ ಕಿಡಿ