ಮನಸೂರೆಗೊಂಡ ಸ್ವರಾಲಯ ಸಾಂಸ್ಕೃತಿಕ ಹಬ್ಬ

KannadaprabhaNewsNetwork |  
Published : Jul 12, 2024, 01:32 AM IST
35 | Kannada Prabha

ಸಾರಾಂಶ

ಸಂಗೀತ ಶಿಕ್ಷಕಿ ವಿದುಷಿ ಆರ್. ಲಲಿತಾ ಉದ್ಘಾಟಿಸಿದರು. ಮುಖ್ಯಅತಿಥಿಯಾಗಿ ಸಂಗೀತ ಶಿಕ್ಷಕಿ ವಿದುಷಿ ಸುಬ್ಬಲಕ್ಷ್ಮಿ ಭಾಗವಹಿಸಿದ್ದರು

ಕನ್ನಡಪ್ರಭ ವಾರ್ತೆ ಮೈಸೂರು

ನಗರದ ಆದಿಚುಂಚನಗಿರಿ ರಸ್ತೆಯಲ್ಲಿರುವ ಗಾನಭಾರತಿಯಲ್ಲಿ ರಾಮಕೃಷ್ಣನಗರದಲ್ಲಿರುವ ಸ್ವರಾಲಯ ಸಂಗೀತ ಸಂಸ್ಥೆ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಇವರ ಸಹಯೋಗದೊಂದಿಗೆ ಸಾಂಸ್ಕೃತಿಕ ಹಬ್ಬ-2024 ಭಾಗ-2 ಅನ್ನು ಆಚರಿಸಿತು.

ಸಂಗೀತ ಶಿಕ್ಷಕಿ ವಿದುಷಿ ಆರ್. ಲಲಿತಾ ಉದ್ಘಾಟಿಸಿದರು. ಮುಖ್ಯಅತಿಥಿಯಾಗಿ ಸಂಗೀತ ಶಿಕ್ಷಕಿ ವಿದುಷಿ ಸುಬ್ಬಲಕ್ಷ್ಮಿ ಭಾಗವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ಸಂಗೀತ ಶಿಕ್ಷಕಿ ವಿದುಷಿ ವಿಜಯಲಕ್ಷ್ಮಿ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಸ್ವರಾಲಯ ಸಂಗೀತ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷೆ ಹಾಗೂ ಸಂಗೀತ ಶಿಕ್ಷಕಿ ವಿದುಷಿ ಸುಮಾ ಹರಿನಾಥ್ ವಹಿಸಿದ್ದರು.

ಮೈಸೂರಿನ ನಾದವಿದ್ಯಾಲಯ ಅಕಾಡೆಮಿ ಆಫ್ ಮ್ಯೂಸಿಕ್ ಅಂಡ್ ಡ್ಯಾನ್ಸ್‌ನ ಸಂಸ್ಥಾಪಕ ಅಧ್ಯಕ್ಷ ವಿದ್ವಾನ್ ನವೀನ್ ಎಂ.ಎಸ್. ಅಂದಗಾರ್ ಅವರನ್ನು ಸನ್ಮಾನಿಸಲಾಯಿತು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚಾಮರಾಜನಗರ ಶ್ರೀ ಶಾರದಾ ನೃತ್ಯ ಕಲಾಶಾಲೆಯ ನಾಟ್ಯ ವಿದ್ವಾನ್ ವಿ. ಮಹೇಶ್ ಮತ್ತು ತಂಡದವರಿಂದ ನೃತ್ಯ ಸಂಭ್ರಮ ಸಭಿಕರ ಕಣ್ಮನ ಸೆಳೆಯಿತು. ತದ ನಂತರ ದಾಸರ ಪದಗಳ ಗಾಯನವನ್ನು ವಿದುಷಿ ಪದ್ಮ ಅವರ ನಿರ್ದೇಶನದಲ್ಲಿ ವಿ. ಸುಕೃತಿ ಮತ್ತು ವೃಂದದವರಿಂದ ಪ್ರಸ್ತುತಪಡಿಸಲಾಯಿತು. ಪಿಟೀಲಿನಲ್ಲಿ ವಿದ್ವಾನ್ ಎಂ.ಆರ್. ಶ್ರೀಕಾಂತ್, ಮೃದಂಗದಲ್ಲಿ ವಿದ್ವಾನ್ ಎಂ.ಆರ್. ಉದಯಕುಮಾರ್ ಸಹಕಾರ ನೀಡಿದರು.

ಸಂಸ್ಥೆಯ ಕಾರ್ಯದರ್ಶಿ ಎಚ್.ಎಸ್. ಶ್ರೀಕಾಂತಾಮಣಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ