ನಗರದ ರಸ್ತೆಬದಿಗಳಲ್ಲಿ ಗಣಪಣನ ದರ್ಬಾರು

KannadaprabhaNewsNetwork |  
Published : Sep 03, 2024, 01:42 AM IST
ಪೋಟೋ೦೨ಸಿಎಲ್‌ಕೆ೩ ಚಳ್ಳಕೆರೆ ನಗರದ ಚಿತ್ರದುರ್ಗ ರಸ್ತೆಯಲ್ಲಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳು ಬಂದಿಳಿದಿರುವುದು. | Kannada Prabha

ಸಾರಾಂಶ

ನಗರ ಸೇರಿದಂತೆ ತಾಲೂಕಿನಾದ್ಯಂತ ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮ ಸಡಗರಗಳಿಂದ ಆಚರಿಸಲು ಸಿದ್ದತೆಗಳು ಭರದಿಂದ ಸಾಗಿವೆ. ಪ್ರಸ್ತುತ ವರ್ಷವೂ ಸಹ ರಾಜ್ಯದ ಬೇರೆ, ಬೇರೆ ಜಿಲ್ಲೆಗಳಿಂದ ವಿವಿಧ ಆಕೃತಿಯ, ಬಣ್ಣ, ಬಣ್ಣದ ಗಣೇಶನ ಮೂರ್ತಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ರಾರಾಜಿಸುತ್ತಿದ್ದು, ಭಕ್ತರು ಗಣೇಶನ ಮೂರ್ತಿಯನ್ನು ಖರೀದಿಸಲು ಸಿದ್ಧತೆ ನಡೆಸಿದ್ದಾರೆ.

ಕನ್ನಡಪ್ರಭವಾರ್ತೆ ಚಳ್ಳಕೆರೆ: ನಗರ ಸೇರಿದಂತೆ ತಾಲೂಕಿನಾದ್ಯಂತ ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮ ಸಡಗರಗಳಿಂದ ಆಚರಿಸಲು ಸಿದ್ದತೆಗಳು ಭರದಿಂದ ಸಾಗಿವೆ. ಪ್ರಸ್ತುತ ವರ್ಷವೂ ಸಹ ರಾಜ್ಯದ ಬೇರೆ, ಬೇರೆ ಜಿಲ್ಲೆಗಳಿಂದ ವಿವಿಧ ಆಕೃತಿಯ, ಬಣ್ಣ, ಬಣ್ಣದ ಗಣೇಶನ ಮೂರ್ತಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ರಾರಾಜಿಸುತ್ತಿದ್ದು, ಭಕ್ತರು ಗಣೇಶನ ಮೂರ್ತಿಯನ್ನು ಖರೀದಿಸಲು ಸಿದ್ಧತೆ ನಡೆಸಿದ್ದಾರೆ.

ನಗರದ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಗಣೇಶನ ಪ್ರತಿಮೆಗಳನ್ನು ಲಾರಿಯಿಂದ ಕೆಳಗೆ ಇಳಿಸಿ ಸಾಲಾಗಿ ಜೋಡಿಸಿ, ಸುಲಭವಾಗಿ ಜನರು ಗಣೇಶನ ಪ್ರತಿಮೆಯನ್ನು ಖರೀದಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಒಂದೆರಡು ದಿನಗಳಲ್ಲಿ ಹೆಚ್ಚಿನ ಪ್ರಮಾಣದ ಗಣೇಶ ಮೂರ್ತಿಗಳು ಆಗಮಿಸುವ ನಿರೀಕ್ಷೆ ಇದ್ದು, ಈ ಬಾರಿ ಎಲ್ಲೆಡೆ ಉತ್ತಮ ಮಳೆಯಾಗಿದ್ದು, ಗೌರಿ, ಗಣೇಶನನ್ನು ಪೂಜಿಸಲು ಭಕ್ತರು ಉತ್ಸಾಹದಿಂದ ಕಾಯುತ್ತಿದ್ದಾರೆ.

ನಗರದ ವಿವಿಧ ಸಂಘ ಸಂಸ್ಥೆಯವರು ಸಹ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಬಿಎಂ ಸರ್ಕಾರಿ ಪ್ರೌಢಶಾಲಾ ಮೈದಾನ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಗಣೇಶನ ಪೇಂಡಾಲ್ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಸುತ್ತಲೂ ವಿವಿಧ ಆಟಿಕೆ, ರಾಟೆ ಮುಂತಾದ ಮನೋರಂಜನಾ ನೀಡುವ ಸಾಮಾಗ್ರಿಗಳು ಸಿದ್ಧಗೊಳ್ಳುತ್ತಿವೆ.

ನಗರದ ಎಲ್ಲಾ ರಸ್ತೆಗಳಲ್ಲೂ ಸುಮಾರು 60ಕ್ಕೂ ಹೆಚ್ಚು ಗಣೇಶ ವಿಗ್ರಹದ ಮಾರಾಟಗಾರರು ಮಾರಾಟ ಮಾಡುತ್ತಿದ್ದು ಜನರು ಉತ್ಸಾಹದಿಂದ ಮೂರ್ತಿಯನ್ನು ವೀಕ್ಷಿಸಿಸುತ್ತಿದ್ದಾರೆ. ಆದರೆ, ಈ ಬಾರಿ ಗಣೇಶ ದರ ಭಕ್ತರನ್ನು ದಂಗುಬಡಿಸುತ್ತಿದೆ. ಚಿಕ್ಕ, ಚಿಕ್ಕ ಮೂರ್ತಿಗಳಿಗೆ ₹400-500, ದೊಡ್ಡ ಗಣೇಶನಿಗೆ ₹3000-5000 ದರವನ್ನು ನಿಗದಿಪಡಿಸಿದ್ದಾರೆ. ಮಳೆ, ಬೆಳೆ ಇಲ್ಲದೆ ಕಂಗಾಲಾಗಿರುವ ಭಕ್ತರಿಗೆ ಗಣೇಶಮೂರ್ತಿಯ ದರ ಹೆಚ್ಚು ನೋವು ಪಡುವಂತೆ ಮಾಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಸಿಲಿನ ಹೊಡೆತಕ್ಕೆ ಸಾವಿರಾರು ಮೀನುಗಳ ಮಾರಣಹೋಮ
ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸ