4ರಿಂದ ಗಾನಯೋಗಿ ಪಂಚಾಕ್ಷರಿ ಸಂಗೀತ ಪರಂಪರಾ ಉತ್ಸವ

KannadaprabhaNewsNetwork |  
Published : Mar 01, 2025, 01:01 AM IST
28ಜಿಡಿಜಿ7 | Kannada Prabha

ಸಾರಾಂಶ

ಗಾನಯೋಗಿ ಪಂಚಾಕ್ಷರಿ ಸಂಗೀತ ಪರಂಪರಾ ಉತ್ಸವ, ಪಂಚಾಕ್ಷರಿ ಗದಗ ಘರಾನಾ ಸಮ್ಮೇಳನ, ಗುರುಕುಮಾರ ಪಂಚಾಕ್ಷರಿ ಸಮ್ಮಾನ-2025 ಕಾರ್ಯಕ್ರಮವು ಮಾ. 4 ಹಾಗೂ 5ರಂದು ಅಡವೀಂದ್ರ ಸ್ವಾಮಿ ಮಠದಲ್ಲಿ ಜರುಗಲಿದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಶ್ರೀಗುರು ಪಂಚಾಕ್ಷರಿ ಸೇವಾ ಸಮಿತಿಯ ಅಧ್ಯಕ್ಷ ಪಂ.ಡಾ. ರಾಜಗುರು ಗುರುಸ್ವಾಮಿ ಕಲಿಕೇರಿ ಹೇಳಿದರು.

ಕನ್ನಡಪ್ರಭ ವಾರ್ತೆ ಗದಗ

ಗಾನಯೋಗಿ ಪಂಚಾಕ್ಷರಿ ಸಂಗೀತ ಪರಂಪರಾ ಉತ್ಸವ, ಪಂಚಾಕ್ಷರಿ ಗದಗ ಘರಾನಾ ಸಮ್ಮೇಳನ, ಗುರುಕುಮಾರ ಪಂಚಾಕ್ಷರಿ ಸಮ್ಮಾನ-2025 ಕಾರ್ಯಕ್ರಮವು ಮಾ. 4 ಹಾಗೂ 5ರಂದು ಅಡವೀಂದ್ರ ಸ್ವಾಮಿ ಮಠದಲ್ಲಿ ಜರುಗಲಿದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಶ್ರೀಗುರು ಪಂಚಾಕ್ಷರಿ ಸೇವಾ ಸಮಿತಿಯ ಅಧ್ಯಕ್ಷ ಪಂ.ಡಾ. ರಾಜಗುರು ಗುರುಸ್ವಾಮಿ ಕಲಿಕೇರಿ ಹೇಳಿದರು.

ಅವರು ನಗರದ ಅಡವೀಂದ್ರಸ್ವಾಮಿ ಮಠದಲ್ಲಿ ಶಿವಾನುಭವ ಸಮಿತಿ ಹಾಗೂ ಪಂಚಾಕ್ಷರಿ ಸೇವಾ ಸಮಿತಿಯ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮಗಳ ರೂಪುರೇಷೆ ಅಂತಿಮಗೊಳಿಸಿ ಮಾತನಾಡಿದರು.

ಅಡವೀಂದ್ರಸ್ವಾಮಿ ಮಠದ ಆಶ್ರಯದಲ್ಲಿ 333ನೇ ಶಿವಾನುಭವ, ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಎರಡು ದಿನಗಳವರೆಗೆ ಜರುಗಲಿದ್ದು, ನಾಡಿನ ಹೆಸರಾಂತ ಮಠಾಧೀಶರು, ಖ್ಯಾತ ಸಂಗೀತ ಕಲಾವಿದರು ಪಾಲ್ಗೊಳ್ಳುವರು. ಮಾ. 4ರಂದು ಸಂಜೆ 4 ಗಂಟೆಗೆ ರಾಷ್ಟ್ರೀಯ ಪಂಚಾಕ್ಷರ ಘರಾನಾ ಸಮ್ಮೇಳನದ ಉದ್ಘಾಟನಾ ಸಮಾರಂಭ ಜರುಗುವುದು. ಗದುಗಿನ ಜ. ಶಿವಾನಂದ ಬ್ರಹನ್ಮಠದ ಜ.ಸದಾಶಿವಾನಂದ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಹರ್ಲಾಪೂರದ ಕೊಟ್ಟೂರೇಶ್ವರ ಮಠದ ಕೊಟ್ಟೂರೇಶ್ವರ ಮಹಾಸ್ವಾಮಿಗಳು ನೇತೃತ್ವ ವಹಿಸುವರು.

ಮಾ.5ರಂದು ಬುಧವಾರ ಸಂಜೆ 4 ಗಂಟೆಗೆ ಗುರುಕುಮಾರ ಪಂಚಾಕ್ಷರಿ ಸಮ್ಮಾನ ಸಮಾರಂಭ ಜರುಗಲಿದ್ದು, ಸಾನ್ನಿಧ್ಯವನ್ನು ಮುಂಡರಗಿಯ ನಾಡೋಜ ಜ.ಡಾ. ಅನ್ನದಾನೀಶ್ವರ ಮಹಾಸ್ವಾಮಿಗಳು ವಹಿಸುವರು. ನೇತೃತ್ವ ಹಾವೇರಿ ಹುಕ್ಕೇರಿಮಠದ ಸದಾಶಿವ ಮಹಾಸ್ವಾಮಿಗಳು ವಹಿಸುವರು. ಅಂತಾರಾಷ್ಟ್ರೀಯ ಖ್ಯಾತ ಗಾಯಕ ಪದ್ಮಶ್ರೀ ಪಂ.ಎಂ. ವೆಂಕಟೇಶಕುಮಾರ ಸೇರಿದಂತೆ ನಾಡಿನ ಹೆಸರಾಂತ ಗಾಯಕರ ಗಾಯನವಿದ್ದು ಅಪರೂಪದ ವೈವಿಧ್ಯಮಯ ಈ ಕಾರ್ಯಕ್ರಮಕ್ಕೆ ಸರ್ವರಿಗೂ ಸ್ವಾಗತವಿದೆ ಎಂದು ಕಲಿಕೇರಿ ಹೇಳಿದರು.

ಪೂರ್ವಭಾವಿ ಸಭೆಯಲ್ಲಿ ಅಡವೀಂದ್ರಸ್ವಾಮಿ ಮಠದ ಧರ್ಮದರ್ಶಿ ಮಹೇಶ್ವರಸ್ವಾಮಿಗಳು, ಶಿವಾನುಭವ ಸಮಿತಿಯ ಡಾ. ಎಸ್.ಕೆ. ನಾಲತ್ವಾಡಮಠ, ಪ್ರಧಾನ ಕಾರ್ಯದರ್ಶಿ ಬಿ.ಬಿ. ತೋಟಗೇರ, ಸೇವಾ ಸಮಿತಿಯ ಪದಾಧಿಕಾರಿ ಮಲ್ಲಯ್ಯ ಶಿರೋಳಮಠ, ಡಾ. ಶಿವಬಸಯ್ಯ ಗಡ್ಡದಮಠ, ಶಿವಲಿಂಗಶಾಸ್ತ್ರಿ ಸಿದ್ದಾಪೂರ ಮುಂತಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!