ಗಾಂಧೀಜಿ ತತ್ವ, ಆದರ್ಶ ಇಂದಿನ ಪೀಳಿಗೆಗೆ ಮಾರ್ಗದರ್ಶಕ: ಚನ್ನಬಸಪ್ಪ

KannadaprabhaNewsNetwork |  
Published : Oct 07, 2025, 01:02 AM IST
ಪಟ್ಟಣದ ಮರಾಠ ಬೀದಿಯಲ್ಲಿರುವ ಶ್ರೀ ಕುಕ್ಕುವಾಡ ಅಂಭಾಭವಾನಿ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಗಾಂಧಿ ಸ್ಮೃತಿ ಮತ್ತು ಜವಜೀವನ ಸಮಿತಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ನಿವೃತ್ತ ಶಿಕ್ಷಕ ಎಂ.ಯು.ಚನ್ನಬಸಪ್ಪ | Kannada Prabha

ಸಾರಾಂಶ

ರಾಷ್ಟ್ರಪಿತ ಮಹಾತ್ಮಗಾಂಧಿ ಯವರು ಸತ್ಯ ಮತ್ತು ಅಹಿಂಸೆಗೆ ಹೆಚ್ಚಿನ ಮಹತ್ವವನ್ನು ನೀಡಿದವರಾಗಿದ್ದು ಅವರ ತತ್ವ ಆದರ್ಶಗಳು ಇಂದಿನ ಪೀಳಿಗೆಗೆ ಮಾರ್ಗದರ್ಶಕವಾಗಬೇಕಾಗಿದೆ ಎಂದು ನಿವೃತ್ತ ಶಿಕ್ಷಕ ಎಂ.ಯು.ಚನ್ನಬಸಪ್ಪ ಹೇಳಿದರು.

ಚನ್ನಗಿರಿ: ರಾಷ್ಟ್ರಪಿತ ಮಹಾತ್ಮಗಾಂಧಿ ಯವರು ಸತ್ಯ ಮತ್ತು ಅಹಿಂಸೆಗೆ ಹೆಚ್ಚಿನ ಮಹತ್ವವನ್ನು ನೀಡಿದವರಾಗಿದ್ದು ಅವರ ತತ್ವ ಆದರ್ಶಗಳು ಇಂದಿನ ಪೀಳಿಗೆಗೆ ಮಾರ್ಗದರ್ಶಕವಾಗಬೇಕಾಗಿದೆ ಎಂದು ನಿವೃತ್ತ ಶಿಕ್ಷಕ ಎಂ.ಯು.ಚನ್ನಬಸಪ್ಪ ಹೇಳಿದರು.

ಪಟ್ಟಣದ ಮರಾಠ ಬೀದಿಯಲ್ಲಿರುವ ಶ್ರೀ ಕುಕ್ಕುವಾಡ ಅಂಭಾಭವಾನಿ ಸಮುದಾಯ ಭವನದಲ್ಲಿ ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಗಾಂಧಿ ಸ್ಮೃತಿ ಮತ್ತು ನವ ಜೀವನ ಸಮಿತಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಶೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಮಹಾತ್ಮ ಗಾಂಧೀಯವರ ಮಾರ್ಗದಲ್ಲಿ ನಡೆಯುತ್ತಿದ್ದು ರಾಜ್ಯದಲ್ಲಿ ಮಧ್ಯವರ್ಜನೆ ಶಿಬಿರಗಳನ್ನು ನಡೆಸುತ್ತ ಮದ್ಯ ವ್ಯಸನಿಗಳಿಗೆ ಮನ ಪರಿವರ್ತನೆ ಮಾಡಿ ಕುಡಿತದ ಚಟದಿಂದ ಮುಕ್ತರನ್ನಾಗಿ ಮಾಡಿ ಹೊಸ ಜೀವನ ನಡೆಸಲು ಅವಕಾಶ ನೀಡುತ್ತಿರುವುದು ಶ್ಲಾಘನೀಯ ಎಂದರು.

ಕುಡಿತದ ಚಟದಿಂದ ಅನೇಕ ಕುಟುಂಬಗಳು ಬೀದಿಗೆ ಬಿದ್ದಿದ್ದು ಇಂತಹ ಕೆಟ್ಟ ಚಟದಿಂದ ಚಿಕ್ಕ ವಯಸ್ಸಿನ ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿರುವುದು ವಿಷಾದನೀಯ ಎಂದರು.

ಪುರಸಭೆಯ ಸದಸ್ಯ ಎಂ.ಬಿ.ಶಿವಾಜಿರಾವ್ ವಹಿಸಿ ಮಾತನಾಡಿ, ಸಮಾನತೆ, ಭ್ರಾತೃತ್ವ, ಸಹೋದರತೆಯ ಸಂದೇಶವನ್ನು ಇಡೀ ದೇಶಕ್ಕೆ ಸಾರಿದ ಮಹಾತ್ಮಗಾಂಧಿ ಅವರು ಇಂದಿನ ಯುವ ಪೀಳಿಗೆಗೆ ಆದರ್ಶವಾಗಬೇಕಾಗಿದ್ದು ಇಂದಿನ ಯುವ ಪೀಳಿಗೆ ಅನೇಕ ದುಶ್ಚಟಗಳಿಗೆ ಬಲಿಯಾಗುತ್ತಾ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವುದು ಸರಿಯಲ್ಲ ಎಂದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಜನ ಜಾಗೃತಿ ವೇದಿಕೆಯ ಸದಸ್ಯ ಕಾಕನೂರು ಎಂ.ಬಿ.ನಾಗರಾಜ್, ಟಿ.ಎನ್.ಜಗದೀಶ್, ಮಂಜಪ್ಪ, ಯೋಜನೆಯ ಜಿಲ್ಲಾ ನಿರ್ದೇಶಕ ಕಮಲಾಕ್ಷ, ಚನ್ನಗಿರಿ ವಲಯ ಯೋಜನಾಧಿಕಾರಿ ರೂಪಅದರ್ಶ, ಸಂತೋಷ್ ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಟೋ ಎಲ್‌ಪಿಜಿ ಕೊರತೆ ಇಲ್ಲ : ಗ್ರಾಹಕರ ವ್ಯವಹಾರ ಇಲಾಖೆ
ಬೆಂಗಳೂರು ಸೇರಿ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಮಳೆ