ಕನ್ನಡಪ್ರಭ ವಾರ್ತೆ ಕಾರವಾರ
ಕಾರವಾರ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಇಬ್ಬರೂ ಮಹಾನ್ ಚೇತನರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಗೌರವಿಸಿ ಮಾತನಾಡಿದರು.
ಜಗತ್ತಿಗೆ ಸತ್ಯ, ಅಹಿಂಸೆಯ ಹಾದಿಯನ್ನು ತೋರಿಸಿ, ಶಾಂತಿ, ಸತ್ಯಾಗ್ರಹಗಳ ಮೂಲಕ ಭಾರತದಸ್ವಾತಂತ್ರ್ಯ ಸಂಗ್ರಾಮವನ್ನ ಜನಾಂದೋಲನವಾಗಿಸಿದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಕೊಡುಗೆ ಬಹು ದೊಡ್ಡದು. ಹಾಗೂ ದಕ್ಷತೆ-ಪ್ರಾಮಾಣಿಕತೆ ಮೂಲಕ ಆಳುವ ವರ್ಗಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟ ''''''''ಜೈ ಜವಾನ್ ಜೈ ಕಿಸಾನ್'''''''' ಎಂಬ ಸರ್ವಶ್ರೇಷ್ಠ ಘೋಷಣೆಯನ್ನು ಮೊಳಗಿಸಿದ್ದ ಭಾರತರತ್ನ ಲಾಲ್ ಬಹದ್ದೂರ್ ಶಾಸ್ತ್ರಿಜೀ ಅವರ ಜನ್ಮ ಜಯಂತಿಯನ್ನು ನಾವು ಆಚರಿಸುತ್ತಿದ್ದೇವೆ.
ಈ ಸಂದರ್ಭದಲ್ಲಿ ನಗರ ಸಭೆಯ ಅಧ್ಯಕ್ಷ ರವಿರಾಜ ಅಂಕೋಲೆಕರ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ನಾಗೇಶ್ ಕುರ್ಡೆಕರ, ಗ್ರಾಮೀಣ ಮಂಡಳದ ಅಧ್ಯಕ್ಷ ಸುಭಾಷ ಗುನಗಿ, ವಿ.ಎಮ್ ಹೆಗಡೆ, ನಗರ ಪ್ರಧಾನ ಕಾರ್ಯದರ್ಶಿಗಳಾದ ಅಶೋಕ ಗೌಡ, ದೇವಿದಾಸ ಕಂತ್ರೇಕರ, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷೆ ಮಾಲಾ ಹುಲಸ್ವಾರ ಇದ್ದರು.ದಾಂಡೇಲಿಯಲ್ಲಿ ಗಾಂಧಿ ಜಯಂತಿ:
ದಾಂಡೇಲಿಯ ಬಂಗೂರನಗರ ಎಂಪ್ಲಾಯಿಸ್ ಕ್ಲಬ್ ಆವರಣ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿಜಿ ಜನ್ಮದಿನ ಆಚರಣೆ ಮಾಡಲಾಯಿತು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವೆಸ್ಟ್ ಕೋಸ್ಟ್ ಪೇಪರ್ ಮಿಲ್ನ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೆಸ್ಟ್ ಪೇಪರ್ ಮಿಲ್ ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರ ಜೈನ್, ಜಿಲ್ಲಾ ಕಸಾಪ ಅಧ್ಯಕ್ಷ ಸಿ.ಎನ್. ವಾಸರೆ, ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಜೇಶ ತಿವಾರಿ, ರಾಘವೇಂದ್ರ ಆರ್.ಜೆ., ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಹಲವಾಯಿ, ಅನಿಲ ದಂಡಗಲ್ಲ, ಕೀರ್ತಿ ಗಾಂವ್ಕರ್, ಗುರುಶಾಂತ ಜಡೆಹೀರೆಮಠ, ಅಕ್ಷಯ ಗೋಸಾವಿ ಇದ್ದರು.