ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ನೂತನ ಸಂಸದ ಸುನೀಲ್ ಬೋಸ್ಗೆ ೧೮ ಸಾವಿರಕ್ಕೂ ಹೆಚ್ಚು ಮತ ನೀಡಿದ ಕ್ಷೇತ್ರದ ಮತದಾರರಿಗೆ ಕಾಂಗ್ರೆಸ್ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಧನ್ಯವಾದ ತಿಳಿಸಿದರು.
ಸಂಸದ ಸುನೀಲ್ ಬೋಸ್ ಗೆಲ್ಲುವ ವಿಶ್ವಾಸವಿತ್ತು. ಮೊದಲ ಚುನಾವಣೆಯಲ್ಲಿ ಸ್ಪರ್ಧಿಸಿದರೂ ೧.೮೮ ಲಕ್ಷ ಲೀಡ್ ಬಂದಿದೆ. ಸುನೀಲ್ ಬೋಸ್ ಕೂಡ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ಮೇಲೆ ಮತದಾರರು ವಿಶ್ವಾಸ ಇಟ್ಟಿದ್ದಾರೆ. ನೂತನ ಸಂಸದರ ಜೊತೆಗೂಡಿ ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಕೇಂದ್ರ ಸರ್ಕಾರದ ಯೋಜನೆಗಳನ್ನು ತರುವ ಕೆಲಸ ಮಾಡಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್. ನಂಜುಂಡಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಎಂ.ಮುನಿರಾಜು,ಪಿ.ಬಿ. ರಾಜಶೇಖರ್, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಸ್. ಮಹೇಶ, ಜಿಪಂ ಮಾಜಿ ಸದಸ್ಯರಾದ ಕೆರಹಳ್ಳಿ ನವೀನ್,ಪಿ.ಚನ್ನಪ್ಪ.ಬಿ.ಕೆ.ಬೊಮ್ಮಯ್ಯ,ಪಕ್ಷದ ಮುಖಂಡರಾದ ಬಿ.ಕುಮಾರಸ್ವಾಮಿ, ಎಚ್.ಎನ್.ಬಸವರಾಜು, ಜಿ.ಮಡಿವಾಳಪ್ಪ, ಎಸ್ಆರ್ಎಸ್ ರಾಜು, ರಾಘವಾಪುರ ಶ್ರೀನಿವಾಸಮೂರ್ತಿ, ಕಾರ್ಗಳ್ಳಿ ಸುರೇಶ್, ಪುಟ್ಟಸ್ವಾಮಿ ಆಚಾರ್, ಲಿಂಗರಾಜು, ಪುರಸಭೆ ಸದಸ್ಯರಾದ ಅಣ್ಣಯ್ಯಸ್ವಾಮಿ, ಎನ್.ಕುಮಾರ್, ಗೌಡ್ರ ಮಧು ಇದ್ದರು.