ಜ್ಞಾನಸಾಗರ ಶಾಲೆಯಲ್ಲಿ ಗಣೇಶ ಪ್ರತಿಷ್ಠಾಪನೆ

KannadaprabhaNewsNetwork |  
Published : Sep 14, 2026, 02:00 AM IST
13ಎಚ್ಎಸ್ಎನ್11 :  | Kannada Prabha

ಸಾರಾಂಶ

ಸಂಬಂಧಗಳ ಗಟ್ಟಿತನವಿಲ್ಲದಂತಾಗಿರುವ ಪ್ರಸ್ತುತ ದಿನಗಳಲ್ಲಿ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಲು ಮನೆಯಲ್ಲಿ ತಂದೆ ತಾಯಿಗಳು ಪ್ರಮುಖ ಪಾತ್ರವಹಿಸುತ್ತಾರೆ. ಹಾಗಾಗಿ ಅವರನ್ನು ಗೌರವಿಸಿ ಸತ್ಕರಿಸುವುದು ಅವಶ್ಯಕ ಎಂಬುದು ಕಾರ್ಯಕ್ರಮದ ಉದ್ದೇಶವಾಗಿತ್ತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯ ನಿರ್ವಹಣಾಧಿಕಾರಿ ಡಾ. ಭಾರತಿ ನಾಗೇಶ್ ರವರು ಮಾತನಾಡಿ ಮನೆಯಲ್ಲಿ ಹಿರಿಯ ಪೋಷಕರ ಜವಾಬ್ದಾರಿ ಅತ್ಯಗತ್ಯ, ತಂದೆ ತಾಯಿಯರು ತಮ್ಮ ಬಿಡುವಿಲ್ಲದ ಕೆಲಸದ ನಡುವೆ ತಮ್ಮ ಮಕ್ಕಳ ಕಡೆ ಗಮನವಹಿಸಲು ಸಾಧ್ಯವಾಗುವುದಿಲ್ಲ, ಇಂತಹ ಸಂದರ್ಭದಲ್ಲಿ ಮಕ್ಕಳಿಗೆ ಕಥೆ, ಒಗಟು, ಇತ್ಯಾದಿ ಕಲೆಗಳ ಮೂಲಕ ಮಕ್ಕಳಲ್ಲಿ ಸಾಮಾಜಿಕ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯವನ್ನು ಹಿರಿಯ ಪೋಷಕರು ನಿರ್ವಹಿಸುತ್ತಾರೆ ಎಂದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

೨೦೨೬-೨೭ನೇ ಸಾಲಿನಲ್ಲಿ ಪಟ್ಟಣದ ಜ್ಞಾನ ಸಾಗರ ಇಂಟರ್‌ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಅದ್ದೂರಿ ಗೌರಿ ಗಣೇಶ ಸಂಭ್ರಮದ ದಿನಾಚರಣೆಯ ಅಂಗವಾಗಿ ೧೦ನೇ ತರಗತಿ ವಿದ್ಯಾರ್ಥಿಗಳು ಮತ್ತು ಹಿರಿಯರ ಸ್ನೇಹಕೂಟ ವಿಶೇಷ ವಿನೂತನ ಕಾರ್ಯಕ್ರಮ ಆಚರಣೆ ಮಾಡಿದರು.

ಸಂಬಂಧಗಳ ಗಟ್ಟಿತನವಿಲ್ಲದಂತಾಗಿರುವ ಪ್ರಸ್ತುತ ದಿನಗಳಲ್ಲಿ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಲು ಮನೆಯಲ್ಲಿ ತಂದೆ ತಾಯಿಗಳು ಪ್ರಮುಖ ಪಾತ್ರವಹಿಸುತ್ತಾರೆ. ಹಾಗಾಗಿ ಅವರನ್ನು ಗೌರವಿಸಿ ಸತ್ಕರಿಸುವುದು ಅವಶ್ಯಕ ಎಂಬುದು ಕಾರ್ಯಕ್ರಮದ ಉದ್ದೇಶವಾಗಿತ್ತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯ ನಿರ್ವಹಣಾಧಿಕಾರಿ ಡಾ. ಭಾರತಿ ನಾಗೇಶ್ ರವರು ಮಾತನಾಡಿ ಮನೆಯಲ್ಲಿ ಹಿರಿಯ ಪೋಷಕರ ಜವಾಬ್ದಾರಿ ಅತ್ಯಗತ್ಯ, ತಂದೆ ತಾಯಿಯರು ತಮ್ಮ ಬಿಡುವಿಲ್ಲದ ಕೆಲಸದ ನಡುವೆ ತಮ್ಮ ಮಕ್ಕಳ ಕಡೆ ಗಮನವಹಿಸಲು ಸಾಧ್ಯವಾಗುವುದಿಲ್ಲ, ಇಂತಹ ಸಂದರ್ಭದಲ್ಲಿ ಮಕ್ಕಳಿಗೆ ಕಥೆ, ಒಗಟು, ಇತ್ಯಾದಿ ಕಲೆಗಳ ಮೂಲಕ ಮಕ್ಕಳಲ್ಲಿ ಸಾಮಾಜಿಕ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯವನ್ನು ಹಿರಿಯ ಪೋಷಕರು ನಿರ್ವಹಿಸುತ್ತಾರೆ ಎಂದರು.

ಗಾಂಧಿ ವೃದ್ಧಾಶ್ರಮದ ಹಿರಿಯರಿಗೆ ಹಾಗೂ ನಮ್ಮ ನಮ್ಮ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಮಹಿಳಾ ಸಿಬ್ಬಂದಿಗೆ ಬಾಗಿನ ಅರ್ಪಿಸಿದರು. ವಿದ್ಯಾರ್ಥಿಗಳಲ್ಲಿ ಸ್ನೇಹ ಪರ ಚಿಂತನೆ ಒಳ್ಳೆಯ ನೈತಿಕ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮವು ಅವಿಸ್ಮರಣೀಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಗಾಂಧಿ ವೃದ್ಧಾಶ್ರಮದ ಹಿರಿಯರಿಗೆ ಕೆಲವು ಮನರಂಜನಾ ಕ್ರೀಡೆಗಳು ಹಾಗೂ ಭೋಜನಾಕೂಟ ಆಯೋಜಿಸಲಾಗಿತ್ತು. ಎಲ್ಲರೂ ಸಂಭ್ರಮ ಸಡಗರದಿಂದ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಡೀನ್ ಡಾ. ಸುಜಾ ಪಿ. ಎಸ್, ಆಡಳಿತಾಧಿಕಾರಿಗಳಾದ ಪಿಲಿಫ್, ಗಾಂಧಿ ವೃದ್ಧಾಶ್ರಮದ ಮಾತೃ ಸಮಾನರಾದ ಹಿರಿಯರು, ವಿದ್ಯಾರ್ಥಿಗಳು, ಶಾಲೆಯ ಬೋಧಕ, ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರದಲ್ಲಿ ಹಿಂದೂ ಮಹಾಗಣಪತಿ ಉತ್ಸವಕ್ಕೆ ಕ್ಷಣಗಣನೆ
ನಗರಂಗೆರೆಯಲ್ಲಿ ಪರಿಸರ ಜಾಗೃತಿ: ಪ್ಲಾಸ್ಟಿಕ್ ತ್ಯಜಿಸಲು ಮನವಿ