ರಾಜ್ಯದ ಗರ್ಭಿಣಿಯರಿಗೆ ಆಂಧ್ರದಲ್ಲಿ ಭ್ರೂಣ ಹತ್ಯೆ ಮಾಡಿಸುವ ಗ್ಯಾಂಗ್‌!

KannadaprabhaNewsNetwork |  
Published : Sep 25, 2025, 01:00 AM ISTUpdated : Sep 25, 2025, 11:01 AM IST
pregnant woman

ಸಾರಾಂಶ

ರಾಜ್ಯದ ಗರ್ಭಿಣಿಯನ್ನು ಪಕ್ಕದ ಆಂಧ್ರಪ್ರದೇಶಕ್ಕೆ ಕರೆದೊಯ್ದು ಭ್ರೂಣ ಹತ್ಯೆ ಮಾಡಿಸುವ ಪ್ರಕರಣವನ್ನು ಆರೋಗ್ಯ ಇಲಾಖೆಯು ರಹಸ್ಯ ಕಾರ್ಯಾಚರಣೆ ಮೂಲಕ ಭೇದಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

 ಬೆಂಗಳೂರು :  ರಾಜ್ಯದ ಗರ್ಭಿಣಿಯನ್ನು ಪಕ್ಕದ ಆಂಧ್ರಪ್ರದೇಶಕ್ಕೆ ಕರೆದೊಯ್ದು ಭ್ರೂಣ ಹತ್ಯೆ ಮಾಡಿಸುವ ಪ್ರಕರಣವನ್ನು ಆರೋಗ್ಯ ಇಲಾಖೆಯು ರಹಸ್ಯ ಕಾರ್ಯಾಚರಣೆ ಮೂಲಕ ಭೇದಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಇಲಾಖೆ ಕಾರ್ಯಾಚರಣೆ ಕುರಿತು ಮಾಹಿತಿ ನೀಡಿದ ಅವರು, ಮಳವಳ್ಳಿಯ 30 ವರ್ಷದ ಮಹಿಳೆಗೆ 3 ಜನ ಹೆಣ್ಣುಮಕ್ಕಳಿದ್ದರು. ಆಕೆಯ ಕಡೆಯವರು ಅಕ್ರಮವಾಗಿ ಏಜೆಂಟ್ ಮೂಲಕ ಲಿಂಗ ಪತ್ತೆ ಮಾಡಿಸಿದ್ದಾರೆ. ಹೆಣ್ಣು ಶಿಶುವೆಂದು ತಿಳಿದುಬಂದ ಬಳಿಕ ಐದು ತಿಂಗಳ ಗರ್ಭಿಣಿಯಾಗಿದ್ದರೂ ಆಂಧ್ರ ಪ್ರದೇಶದ ಏಜೆಂಟ್ ಮೂಲಕ ಭ್ರೂಣ ಹತ್ಯೆಗೆ ಮುಂದಾಗಿದ್ದಾರೆ. ಇದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ತಕ್ಷಣ ರಹಸ್ಯ ಕಾರ್ಯಾಚರಣೆ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು ಕಟುಕರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.

ಪುರಾವೆಗಳ ಆಧಾರದ ಮೇಲೆ, ಹೆಚ್ಚಿನ ತನಿಖೆ ಮತ್ತು ಅಗತ್ಯ ಕಾನೂನು ಕ್ರಮಕ್ಕಾಗಿ ಮಾಹಿತಿ ಮತ್ತು ಪ್ರಕರಣದ ವಿವರಗಳನ್ನು ಆಂಧ್ರಪ್ರದೇಶದ ರಾಜ್ಯ ನೋಡಲ್ ಅಧಿಕಾರಿಯಾದ ಡಾ। ಕೆ.ವಿ.ಎನ್.ಎಸ್. ಅನಿಲ್ ಕುಮಾರ್ ಅವರಿಗೆ ಹಸ್ತಾಂತರಿಸಲಾಗಿದೆ. ಹೆಣ್ಣು ಭ್ರೂಣ ಹತ್ಯೆ ತಡೆಯುವಲ್ಲಿ ಸರ್ಕಾರ ಇಲಾಖೆಯಿಂದ ಎಲ್ಲ ಪ್ರಯತ್ನಗಳನ್ನು ಪ್ರಾಮಾಣಿಕವಾಗಿ ಮಾಡಲಾಗುತ್ತಿದೆ. ಹೆಣ್ಣು ಭ್ರೂಣ ಹತ್ಯೆ ಒಂದು ಸಾಮಾಜಿಕ ಪಿಡುಗು. ನಮ್ಮ ಸಮಾಜ ಈ ಬಗ್ಗೆ ಜಾಗೃತರಾಗುವುದು, ಸಾಮಾಜಿಕ ಬದಲಾವಣೆ ಆಗುವುದು ಮುಖ್ಯ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ