ಯಲ್ಲಾಪುರ: ಖಚಿತ ಮಾಹಿತಿಯ ಮೇರೆಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಯಲ್ಲಾಪುರ ಪೊಲೀಸರು ವಶಕ್ಕೆ ಪಡೆದು ಆರೋಪಿಗಳಿಂದ 1.84 ಕೆಜಿ ಗಾಂಜಾವನ್ನು ಹಾಗೂ ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಖಿಯ ನಸಿಮಾ ಬಾನುರೆಹಮಾನ(35) ಹಾಗೂ ಪಟ್ಟಣದ ಅಂಬೇಡ್ಜರ್ ನಗರದ ಆಯೇಶಾ ಅಬ್ದುಲ್ ಮುನಾಪ ಗೊಜನೂರು(36) ಬಂಧಿತ ಆರೋಪಿಗಳು.ನಸೀಮಾ ಅವಳಿಂದ ಗಾಂಜಾವನ್ನು ಖರೀದಿಸಿದ ಆಯೇಷಾ ಸ್ಕೂಟರ್ನಲ್ಲಿ ಸಾಗಾಟ ಮಾಡುತ್ತಿರುವಾಗ ತಳ್ಳಿಕೇರಿ ಕ್ರಾಸ್ ಬಳಿಯಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ತಹಸೀಲ್ದಾರ್ ಯಲ್ಲಪ್ಪ ಗೋಣೆನ್ನವರ್, ಪಿಎಸ್ಐಗಳಾದ ಸಿದ್ದಪ್ಪ ಗುಡಿ, ಮಹಾವೀರ್ ಕಾಂಬಳೆ ಪೊಲೀಸ್ ಸಿಬ್ಬಂದಿ ಹಾಗೂ ಪಂಚರು ಇದ್ದರು.ಇವರು ಗಾಂಜಾವನ್ನು ಯಾರಿಂದ ಖರೀದಿಸುತ್ತಿದ್ದರು, ಯಾರಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಆಟೋ ಪಲ್ಟಿಯಾಗಿ ಮಹಿಳೆ ಸಾವುಹೊನ್ನಾವರ: ತಾಲೂಕಿನ ಹಡಿನಬಾಳ ಮಕ್ಕಿ ವಿಷ್ಣುಮೂರ್ತಿ ದೇವಸ್ಥಾನದ ಕ್ರಾಸ್ ಹತ್ತಿರ ಆಟೋ ಪಲ್ಟಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.ಆಟೋ ಚಾಲಕ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಉಪ್ಪೋಣಿ ಕಡೆಯಿಂದ ಹೊನ್ನಾವರ ಕಡೆಗೆ ಹೋಗುತ್ತಿದ್ದಾಗ ಅಡ್ಡಬಂದ ಹಂದಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಆಟೋ ಪಲ್ಟಿಯಾಗಿದೆ.ಲಿಯಾಕತ್ ಖಾನ್ ಎಂಬವರು ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಭಾನವಾರ ಮೃತಪಟ್ಟಿದ್ದಾರೆ. ಅಲ್ಲದೇ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಪಂಪ್ಸೆಟ್ ಬೋರ್ಡ್ ಕಳ್ಳತನ: ಪ್ರಕರಣ ದಾಖಲು
ಶಿರಸಿ: ತಾಲೂಕಿನ ಬನವಾಸಿ ಸಮೀಪದ ಕಡಗೋಡ ಗ್ರಾಮದಲ್ಲಿ ಅಳವಡಿಸಿದ್ದ ಪಂಪ್ಸೆಟ್ ಬೋರ್ಡ್ ಕಳ್ಳತನ ಮಾಡಿದ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಡಗೋಡ ಗ್ರಾಮದ ೧ ಎಕರೆ ಜಮೀನಿನಲ್ಲಿ ಜೋಳ ಮತ್ತು ಭತ್ತದ ಬೆಳೆಗೆ ನೀರು ಪೂರೈಕೆಗೆ ಬೋರ್ವೆಲ್ ಕೊರೆಯಿಸಿ, ಅಂದಾಜು ₹೧೦ ಸಾವಿರ ಸೂರಜ್ ಕಂಪನಿಯ ಪಂಪ್ಸೆಟ್ ಬೋರ್ಡ್ ಅಳವಡಿಸಲಾಗಿದೆ. ಇದನ್ನು ಯಾರೋ ಕಳ್ಳರು ಕಳ್ಳತನ ಮಾಡಿದ್ದಾರೆಂದು ಕಲಿಕ್ ಇಸ್ಮಾಯಿಲ್ ಸಾಬ್ ಕಲೆಗಾರ ಬನವಾಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.