ನಾಳೆಯಿಂದ ಗಣಪತಿ, ವೀರಭದ್ರೇಶ್ವರ ರಜತ ಮಹೋತ್ಸವ, ಗುಗ್ಗುಳ: ಸ್ವಾಮೀಜಿ

KannadaprabhaNewsNetwork |  
Published : Apr 19, 2025, 12:33 AM IST
ಕ್ಯಾಪ್ಷನ18ಕೆಡಿವಿಜಿ34 ದಾವಣಗೆರೆಯಲ್ಲಿ ಗಣಪತಿ, ವೀರಭದ್ರೇಶ್ವರ ಸ್ವಾಮಿಯ ರಜತ ಮಹೋತ್ಸವ, ಗುಗ್ಗುಳ ಕಾರ್ಯಕ್ರಮ ಆಯೋಜಿಸಿರುವ ಕುರಿತು ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. | Kannada Prabha

ಸಾರಾಂಶ

ನಗರದ ಶಾಮನೂರು ರಸ್ತೆಯ ಶ್ರೀ ಮಹಾಗಣಪತಿ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿಯ 25ನೇ ವರ್ಷದ ರಜತ ಮಹೋತ್ಸವ ಹಾಗೂ ಗುಗ್ಗಳದ ಕಾರ್ಯಕ್ರಮವನ್ನು ಏ.20 ರಿಂದ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ತಾವರಕೆರೆ ಶಿಲಾಮಠದ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.

- 20ರಂದು ರಂಭಾಪುರಿ ಶ್ರೀಗಳಿಂದ ಇಷ್ಟಲಿಂಗ ಪೂಜೆ, ಶಿವದೀಕ್ಷೆ, ಸಾಮೂಹಿಕ ವಿವಾಹ

- - -

- ಜಗದ್ಗುರು ಡಾ.ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಧರ್ಮಸಭೆ

- 21ರಂದು ಬೆಳಗ್ಗೆ ಮಹಾರಾಜ ಪೇಟೆಯಿಂದ ಗುಗ್ಗಳ, ಕೆಂಡದಾರ್ಚನೆ, ಅನ್ನ ಸಂತರ್ಪಣೆ

- 22ರ ಬೆಳಗ್ಗೆ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ಮೃತ್ಯುಂಜಯ, ರುದ್ರಹೋಮ

- - -ಕನ್ನಡಪ್ರಭ ವಾರ್ತೆ ದಾವಣಗೆರೆ

ನಗರದ ಶಾಮನೂರು ರಸ್ತೆಯ ಶ್ರೀ ಮಹಾಗಣಪತಿ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿಯ 25ನೇ ವರ್ಷದ ರಜತ ಮಹೋತ್ಸವ ಹಾಗೂ ಗುಗ್ಗಳದ ಕಾರ್ಯಕ್ರಮವನ್ನು ಏ.20 ರಿಂದ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ತಾವರಕೆರೆ ಶಿಲಾಮಠದ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಶಾಮನೂರು ರಸ್ತೆಯ ಶ್ರೀ ಮಹಾಗಣಪತಿ ಶ್ರೀ ವೀರಭದ್ರೇಶ್ವರ ದೇವಸ್ಥಾನ ನಿರ್ಮಾಣವಾಗಿ 25 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಸಾಮೂಹಿಕ ವಿವಾಹ ಇತರೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಏ.20ರಂದು ಬೆಳಗ್ಗೆ 7 ಗಂಟೆಗೆ ಇಲ್ಲಿನ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಸದ್ಯೋಜಾತ ಹಿರೇಮಠದಿಂದ ಕುಂಬಾಭಿಷೇಕ ಮೆರವಣಿಗೆ ನಂತರ ಬಾಳೆಹೊನ್ನೂರು ಮಠದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿಗಳಿಂದ ಇಷ್ಟಲಿಂಗ ಪೂಜೆ, ಜಂಗಮ ವಟುಗಳಿಗೆ ಶಿವದೀಕ್ಷೆ, ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಲಿವೆ. 11 ಗಂಟೆಗೆ ರಂಭಾಪುರಿ ಪೀಠದ ಜಗದ್ಗುರು ಡಾ.ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಧರ್ಮಸಭೆ ನಡೆಯಲಿದೆ. ಎಡೆಯೂರು ಕ್ಷೇತ್ರದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ಕಾರ್ಯಕ್ರಮ ಜರುಗಲಿದೆ. ಬಿಳಿಕೆ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಸಿದ್ಧಲಿಂಗ ಸ್ವಾಮೀಜಿ, ಶ್ರೀ ಅಭಿನವ ಶಿವಲಿಂಗೇಶ್ವರ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸುವರು ಎಂದರು.

ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಧರ್ಮಸಭೆ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅಧ್ಯಕ್ಷತೆ ವಹಿಸುವರು. ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ವಿಧಾನ ಪರಿಷತ್ತು ಮಾಜಿ ಮುಖ್ಯ ಸಚೇತಕ ಡಾ. ಎ.ಎಚ್. ಶಿವಯೋಗಿ ಸ್ವಾಮಿ, ಉದ್ಯಮಿ ಎಸ್.ಎಸ್. ಗಣೇಶ್, ದೂಡಾ ಮಾಜಿ ಅಧ್ಯಕ್ಷ ದೇವರಮನಿ ಶಿವಕುಮಾರ್, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಇತರರು ಭಾಗವಹಿಸುವರು ಎಂದು ತಿಳಿಸಿದರು.

ಏ.21ರಂದು ಬೆಳಗ್ಗೆ 7.30ಕ್ಕೆ ಮಹಾರಾಜ ಪೇಟೆಯಿಂದ ಗುಗ್ಗಳ, ಕೆಂಡದಾರ್ಚನೆ, ಅನ್ನ ಸಂತರ್ಪಣೆ ನಡೆಯಲಿದೆ. ಏ.22ರ ಬೆಳಗ್ಗೆ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ಮೃತ್ಯುಂಜಯ, ರುದ್ರಹೋಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸೇವಾ ಟ್ರಸ್ಟ್‌ನ ವಿನಾಯಕ ಸ್ವಾಮಿ, ಚಂದ್ರಶೇಖರ, ರುದ್ರಪ್ರಸಾದ್, ಎ.ಎಂ.ಕೊಟ್ರೇಶ್ ಇದ್ದರು.

- - -

-18ಕೆಡಿವಿಜಿ34.ಜೆಪಿಜಿ:

ದಾವಣಗೆರೆಯಲ್ಲಿ ಗಣಪತಿ, ವೀರಭದ್ರೇಶ್ವರ ಸ್ವಾಮಿ ರಜತ ಮಹೋತ್ಸವ, ಗುಗ್ಗುಳ ಕಾರ್ಯಕ್ರಮ ಆಯೋಜಿಸಿರುವ ಕುರಿತು ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ