ಕಸದ ರಾಶೀಲಿ ಮನವಿ ಪತ್ರ: ಸಿಎಂ ಕ್ಷಮೆ ಕೇಳಲು ಆಗ್ರಹ

KannadaprabhaNewsNetwork |  
Published : Jul 18, 2024, 01:31 AM IST
ಕಸದ ರಾಶೀಲಿ ಮನವಿ ಪತ್ರ..ಸಿಎಂ ಕ್ಷಮೆ ಕೇಳಲು ರೈತಸಂಘ ಆಗ್ರಹ | Kannada Prabha

ಸಾರಾಂಶ

ರೈತರು ಮುಖ್ಯಮಂತ್ರಿಗೆ ನೀಡಿದ್ದ ಮನವಿ ಪತ್ರಗಳನ್ನು ಕಸದ ಬುಟ್ಟಿಗೆ ಹಾಕಿದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಮೆ ಕೇಳಬೇಕು

ಗುಂಡ್ಲುಪೇಟೆ: ರೈತರು ಮುಖ್ಯಮಂತ್ರಿಗೆ ನೀಡಿದ್ದ ಮನವಿ ಪತ್ರಗಳನ್ನು ಕಸದ ಬುಟ್ಟಿಗೆ ಹಾಕಿದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಮೆ ಕೇಳಬೇಕು ಎಂದು ರೈಸ ತಂಘದ ಜಿಲ್ಲಾಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ ಆಗ್ರಹಿಸಿದರು. ಪತ್ರಕರ್ತರೊಂದಿಗೆ ಮಾತನಾಡಿ ಸಿಎಂಗೆ ನೀಡಿದ ಮನವಿ ಪತ್ರಗಳು ಕಸದ ರಾಶಿಯಲ್ಲಿ ದೊರೆತಿರುವುದು ಖಂಡನೀಯ. ಸಿಎಂ ಸಿದ್ದರಾಮಯ್ಯ ಕ್ಷಮೆ ಕೋರದಿದ್ದಲ್ಲಿ ಸಿಎಂ ಪ್ರತಿಕೃತಿ ದಹಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌ ಅವರು ಕೂಡ ಈ ವಿಚಾರದಲ್ಲಿ ಉಡಾಫೆ ಉತ್ತರ ನೀಡಿದ್ದಾರೆ. ಹಾಗಾಗಿ ಸಚಿವರು ಬರುವ ಕಾರ್ಯಕ್ರಮಗಳಲ್ಲಿ ಕಪ್ಪು ಬಾವುಟ ಹಿಡಿಯಬೇಕಾಗುತ್ತದೆ ಎಂದರು. ರೈತಸಂಘದ ಮುಖಂಡರಾದ ಕುಂದಕೆರೆ ಸಂಪತ್ತು, ಮಹೇಶ್‌, ಗುರು, ಲೋಕೇಶ್‌ ಕಂದೇಗಾಲ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ