ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ

KannadaprabhaNewsNetwork |  
Published : Feb 02, 2025, 01:00 AM IST
1ಕೆಎಂಎನ್ ಡಿ18 | Kannada Prabha

ಸಾರಾಂಶ

ಗೆಜ್ಜಲಗೆರೆ ಶಾಹಿ ಎಕ್ಸ್ ಪೋರ್ಟ್ ಮತ್ತಿತರ ಕಾರ್ಖಾನೆಗಳಿಗೆ ಗ್ರಾಮೀಣ ಭಾಗದಿಂದ ಬರುವ ಮಹಿಳಾ ಕಾರ್ಮಿಕರು ಮಿನಿ ಟೆಂಪೋ ಮತ್ತು ಪ್ರಯಾಣಿಕರ ಆಟೋಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಕೆಲಸಕ್ಕೆ ಬರುತ್ತಿದ್ದಾರೆ. ಪ್ರಯಾಣದ ವೇಳೆ ಅವಘಡಗಳು ಸಂಭವಿಸಿ ಸಾವು ನೋವು ಉಂಟಾಗುತ್ತಿದೆ. ಇದರಿಂದ ಕಾರ್ಮಿಕರನ ಆಶ್ರಯಿಸಿರುವ ಕುಟುಂಬಗಳು ತೊಂದರೆಗೆ ಒಳಗಾಗುತ್ತಿವೆ.

ಕನ್ನಡಪ್ರಭ ವಾರ್ತೆ ಮದ್ದೂರು

ಶಕ್ತಿ ಯೋಜನೆಯಡಿ ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರ ಉಚಿತ ಬಸ್ ಪ್ರಯಾಣಕ್ಕೆ ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಚಾಲನೆ ನೀಡಲಾಯಿತು.

ಕೈಗಾರಿಕಾ ಪ್ರದೇಶದ ಪ್ರವೇಶ ದ್ವಾರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಹಾಗೂ ಜಿಲ್ಲಾಧಿಕಾರಿ ಡಾ.ಕುಮಾರ್ ಹಸಿರು ನಿಶಾನೆ ತೋರಿಸುವ ಮೂಲಕ ಬಸ್ ಸಂಚಾರಕ್ಕೆ ಚಾಲನೆ ನೀಡಿದರು.

ಗೆಜ್ಜಲಗೆರೆ ಶಾಹಿ ಎಕ್ಸ್ ಪೋರ್ಟ್ ಮತ್ತಿತರ ಕಾರ್ಖಾನೆಗಳಿಗೆ ಗ್ರಾಮೀಣ ಭಾಗದಿಂದ ಬರುವ ಮಹಿಳಾ ಕಾರ್ಮಿಕರು ಮಿನಿ ಟೆಂಪೋ ಮತ್ತು ಪ್ರಯಾಣಿಕರ ಆಟೋಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಕೆಲಸಕ್ಕೆ ಬರುತ್ತಿದ್ದಾರೆ. ಪ್ರಯಾಣದ ವೇಳೆ ಅವಘಡಗಳು ಸಂಭವಿಸಿ ಸಾವು ನೋವು ಉಂಟಾಗುತ್ತಿದೆ. ಇದರಿಂದ ಕಾರ್ಮಿಕರನ ಆಶ್ರಯಿಸಿರುವ ಕುಟುಂಬಗಳು ತೊಂದರೆಗೆ ಒಳಗಾಗುತ್ತಿವೆ ಎಂದು ಶಾಸಕರು ಆತಂಕ ವ್ಯಕ್ತಪಡಿಸಿದರು.

ಮಹಿಳಾ ಕಾರ್ಮಿಕರ ಅನುಕೂಲಕ್ಕಾಗಿ ಶಕ್ತಿ ಯೋಜನೆಯಿಂದ ಗಾರ್ಮೆಂಟ್ಸ್ ಕೆಲಸಕ್ಕೆ ಬರುವ ಮಹಿಳಾ ಕಾರ್ಮಿಕರ ಸುರಕ್ಷತೆ ದೃಷ್ಟಿಯಿಂದ ಉಚಿತ ಸಾರಿಗೆ ಬಸ್ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದರು.

ಕೈಗಾರಿಕಾ ಪ್ರದೇಶದಲ್ಲಿ ಶಾಹಿ ಎಕ್ಸ್ ಪೋರ್ಟ್ ವತಿಯಿಂದ ನಿರ್ಮಿಸಿರುವ ಪ್ರಯಾಣಿಕರ ತಂಗುದಾಣವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ.ಕುಮಾರ್ ಮಾತನಾಡಿ, ಮಂಡ್ಯ ನಗರದ ಬಸ್ ನಿಲ್ದಾಣದಿಂದ ಬೆಳಗ್ಗೆ 8.35ಕ್ಕೆ ನಿರ್ಗಮಿಸುವ ಎರಡು ಸಾರಿಗೆ ಬಸ್ ಗಳು 9 ಗಂಟೆಗೆ ಶಾಹಿ ಎಕ್ಸ್ ಪೋರ್ಟ್ ತಲುಪಲಿವೆ. ಮತ್ತೆ ಸಂಜೆ 5 ಗಂಟೆಗೆ ಗಾರ್ಮೆಂಟ್ಸ್ ತಲುಪಿ 5:30 ಸುಮಾರಿಗೆ ಕಾರ್ಮಿಕರನ್ನು ಹೊತ್ತ ಬಸ್ ಗಳು ಅಲ್ಲಿಂದ ಹೊರಟು ಮಂಡ್ಯ ತಲುಪಲಿದೆ. ಕಾರ್ಮಿಕರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲ ದಂಡಿ, ಡಿವೈಎಸ್ಪಿ ಕೃಷ್ಣಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣ ಅಧಿಕಾರಿ ನಾಗರಾಜು, ಸಂಚಲನಾಧಿಕಾರಿ ಪರಮೇಶ್ವರಪ್ಪ, ತಾಂತ್ರಿಕ ಶಿಲ್ಪಿ ಚಿನ್ನ ಚುಂಚಯ್ಯ, ಶಾಹಿ ಎಕ್ಸ್ ಪೋರ್ಟ್ ನ ಪ್ರಧಾನ ಮಾನವ ಸಂಪನ್ಮೂಲ ಅಧಿಕಾರಿ ರಮೇಶ್ ಬಂಡಿ, ಹಿರಿಯ ಪ್ರಧಾನ ವ್ಯವಸ್ಥಾಪಕ ನಾಗೇಗೌಡ, ಹಿರಿಯ ವ್ಯವಸ್ಥಾಪಕರಾದ ವಿಶ್ವನಾಥ್ ಹಾಗೂ ಶಿವಪ್ರಸಾದ್ ಭಾಗವಹಿಸಿದ್ದರು.

PREV

Recommended Stories

ಮದ್ದೂರು ಗಣೇಶ ಗಲಾಟೆಗೆ ಪೂರ್ಣ ಮುಸ್ಲಿಮರೇ ಕಾರಣ: ಸಚಿವ ಚಲುವ
ಬುರುಡೆ ಕೇಸ್‌ : ಸಾಕ್ಷಿದಾರರ ಬಂಧನ..? ಮಟ್ಟಣ್ಣವರ್‌, ಜಯಂತ್‌, ಅಭಿಷೇಕ್, ಮನಾಫಾ ವಿಠಲಗೆ ಗ್ರಿಲ್