ಕನ್ನಡಪ್ರಭ ವಾರ್ತೆ ಉಡುಪಿ
ಇಸಾಕ್ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಬೆಂಗಳೂರಿನ ನೆಲಮಂಗಲ ಪೋಲಿಸರಿಂದ ತಪ್ಪಿಸಿಕೊಳ್ಳುವ ವೇಳೆ ಸಾರ್ವಜನಿಕರ ಕಾರು, ಬೈಕ್ಗೆ ಗುದ್ದಿ, ತನ್ನ ಕಾರು ಪಂಕ್ಟರ್ ಆದಾಗ, ಗೆಳತಿಯನ್ನು ಕಾರಿನಲ್ಲಿಯೇ ಬಿಟ್ಟು ಪರಾರಿಯಾಗಿದ್ದ . ನಂತರ ಆತನನ್ನು ಮಣಿಪಾಲ ಪೊಲೀಸರು ಹಾಸನದಲ್ಲಿ ಬಂಧಿಸಿ, ಕರೆತರುತ್ತಿದ್ದರು. ಈ ಸಂದರ್ಭ ವಾಂತಿ ಬರುತ್ತಿದೆ ಎಂದು ನೆಪವೊಡ್ಡಿ ಕಾರನ್ನು ನಿಲ್ಲಿಸುವಂತೆ ಮಾಡಿ, ಪೋಲಿಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಮಣಿಪಾಲ ಪಿಐ ದೇವರಾಜ್ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದರು.
ನಂತರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಆರೋಪಿಯನ್ನು ದಾಖಲಿಸಲಾಗಿತ್ತು. ಬಳಿಕ ಶಸ್ತ್ರಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಆರೋಪಿಯನ್ನು ಹೆಚ್ಚಿನ ತನಿಖೆಗಾಗಿ ಪೋಲಿಸ್ ಕಸ್ಟಡಿಗೆ ಪಡೆದಿದ್ದಾರೆ.