ಸಾಣೂರಿನಲ್ಲಿ ಗ್ಯಾಸ್‌ ಸಿಲಿಂಡರ್ ಸ್ಫೋಟ

KannadaprabhaNewsNetwork |  
Published : Jan 17, 2026, 03:45 AM IST
 ಸಾಣೂರಿನಲ್ಲಿ ಗ್ಯಾಸ್‌ ಸಿಲಿಂಡರ್ ಸ್ಫೋಟ  | Kannada Prabha

ಸಾರಾಂಶ

ತಾಲೂಕಿನ ಸಾಣೂರು ಗ್ರಾಮದ ಮುದ್ದಣ್ಣ ನಗರದಲ್ಲಿ ಗುರುವಾರ ತಡರಾತ್ರಿ 1.30ರ ಸುಮಾರಿಗೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಸಂಪೂರ್ಣವಾಗಿ ಹಾನಿಗೀಡಾದ ಘಟನೆ ಸಂಭವಿಸಿದೆ.

ಕಾರ್ಕಳ: ತಾಲೂಕಿನ ಸಾಣೂರು ಗ್ರಾಮದ ಮುದ್ದಣ್ಣ ನಗರದಲ್ಲಿ ಗುರುವಾರ ತಡರಾತ್ರಿ 1.30ರ ಸುಮಾರಿಗೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಸಂಪೂರ್ಣವಾಗಿ ಹಾನಿಗೀಡಾದ ಘಟನೆ ಸಂಭವಿಸಿದೆ.

ಮುದ್ದಣ ನಗರದ ನಿವಾಸಿ ವಾರಿಜಾ ಅವರ ಮನೆಯ ಅಡುಗೆ ಕೋಣೆಯ ಹೊರ ಭಾಗದಲ್ಲಿರುವ ಕೊಠಡಿಯಲ್ಲಿ ಇಡಲಾಗಿದ್ದ ಗ್ಯಾಸ್‌ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದೆ. ಇದರಿಂದ ಮನೆಯ ಗೋಡೆ ಕುಸಿದು ಬಿದ್ದಿದೆ. ಒಳಗಿದ್ದ ಪೀಠೋಪಕರಣ, ವಾಷಿಂಗ್ ಮೆಷಿನ್, ಪಾತ್ರೆ ಹಾಗೂ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ.

ಅವಘಡ ಸಂಭವಿಸಿದ ಸಮಯದಲ್ಲಿ ಮನೆಯಲ್ಲಿದ್ದವರು ಸುರಕ್ಷಿತವಾಗಿ ಹೊರ ಬಂದಿರುವುದರಿಂದ ಯಾವುದೇ ಪ್ರಾಣ ಹಾನಿ ಅಥವಾ ಗಾಯ ಸಂಭವಿಸಿಲ್ಲ. ಘಟನೆಯಲ್ಲಿ ಸುಮಾರು 2 ಲಕ್ಷ ರು. ಮೌಲ್ಯದ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಶ್ನೆಪತ್ರಿಕೆ ಲೀಕ್‌ ಆದರೆ ಪ್ರಿನ್ಸಿಪಾಲ್‌ ವಿರುದ್ಧ ಕೇಸ್‌
ಮಹಾ ಜಿಪಂ ಎಲೆಕ್ಷನ್‌ಗೆ ಮೈಸೂರು ಇಂಕ್‌ ಬಳಕೆ