ಗ್ಯಾಸ್ ಟ್ರಬಲ್‌: 3,000 ಕೈಗಾರಿಕೆಗಳು ಅತಂತ್ರ

KannadaprabhaNewsNetwork |  
Published : Mar 17, 2026, 04:00 AM IST
ಸರ್ವೀಸ್‌ನೌ | Kannada Prabha

ಸಾರಾಂಶ

ದೇಶದ ಅತಿ ದೊಡ್ಡ ಕೈಗಾರಿಕಾ ಪ್ರದೇಶಗಳಲ್ಲಿ ಒಂದಾಗಿರುವ ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿ ಸುಮಾರು 3,000 ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳು ಅತಂತ್ರಗೊಂಡಿದ್ದು, ಕಾರ್ಯಾಚರಣೆಯೇ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ದೇಶದ ಅತಿ ದೊಡ್ಡ ಕೈಗಾರಿಕಾ ಪ್ರದೇಶಗಳಲ್ಲಿ ಒಂದಾಗಿರುವ ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿ ಸುಮಾರು 3,000 ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳು ಅತಂತ್ರಗೊಂಡಿದ್ದು, ಕಾರ್ಯಾಚರಣೆಯೇ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ.

ಫ್ಯಾಬ್ರಿಕೇಷನ್, ವೇಲ್ಡಿಂಗ್, ಹೀಟ್ ಟ್ರೀಟ್ಮೆಂಟ್, ಆಹಾರ ಸಂಸ್ಕರಣೆ ಮತ್ತಿತರ ಕೈಗಾರಿಕೆಗಳಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಬಳಕೆಯಾಗುತ್ತದೆ. ಆದರೆ, ಕಳೆದ 10 ದಿನಗಳಿಂದ ಗ್ಯಾಸ್ ಪೂರೈಕೆ ಅಸಮರ್ಪಕವಾಗಿದೆ. ಕಳೆದ ಕೆಲ ದಿನಗಳಿಂದ ಪೂರೈಕೆಯಲ್ಲಿ ಮತ್ತಷ್ಟು ವ್ಯತ್ಯಯವಾಗಿದೆ. ಮುಂದಿನ ದಿನಗಳಲ್ಲಿ ಕೈಗಾರಿಕೆಗಳು ತಮ್ಮ ಕಾರ್ಯಾಚರಣೆಯನ್ನೇ ಸ್ಥಗಿತಗೊಳಿಸುವ ಸಾಧ್ಯತೆ ಇದೆ. ಇದರಿಂದ ಉದ್ಯೋಗಿಗಳಿಗೆ ಸಂಬಳ ನೀಡಲು ಕೂಡ ಸಮಸ್ಯೆ ಆಗುವ ಆತಂಕ ಎದುರಾಗಿದೆ.

ಪೀಣ್ಯದಲ್ಲಿರುವ 13,500 ಕೈಗಾರಿಕೆಗಳ ಪೈಕಿ ಸುಮಾರು 3,000 ಕೈಗಾರಿಕೆಗಳು ಗ್ಯಾಸ್ ಅವಲಂಬಿತವಾಗಿವೆ. ಕಳೆದ ಕೆಲವು ದಿನಗಳಿಂದ ಗ್ಯಾಸ್ ಸಮಸ್ಯೆಯಾಗಿದೆ. ಈ ಕುರಿತು ಸಂಬಂಧಿಸಿದ ಗ್ಯಾಸ್ ಪೂರೈಸುವ ಏಜೆನ್ಸಿಗಳನ್ನು ಕೇಳಿದಾಗ, ಲಭ್ಯತೆ ಆಧಾರದ ಮೇಲೆ ಪೂರೈಸುತ್ತೇವೆ. ನಮಗೆ ಸರಬರಾಜು ಆದರೆ ಗ್ಯಾಸ್ ಪೂರೈಕೆ ಸಹಜ ಸ್ಥಿತಿಗೆ ಬರುತ್ತದೆ ಎಂದು ಹೇಳುತ್ತಿದ್ದಾರೆ ಎಂದು ಪೀಣ್ಯ ಕೈಗಾರಿಕಾ ಸಂಘದ ಪದಾಧಿಕಾರಿ, ಮಾಜಿ ಅಧ್ಯಕ್ಷ ಆರ್. ಶಿ‍ವಕುಮಾರ್ ಹೇಳಿದರು.

ಆದಷ್ಟು ಬೇಗ ಪರಿಸ್ಥಿತಿ ಸುಧಾರಣೆಯಾಗಿ ಗ್ಯಾಸ್ ಸರಬರಾಜು ಸಹಜ ಸ್ಥಿತಿಗೆ ಬಂದರೆ ಒಳ್ಳೆಯದು. ಇಲ್ಲದಿದ್ದರೆ ಕೈಗಾರಿಕೆಗಳನ್ನು ಬಂದ್ ಮಾಡುವುದು ಅನಿವಾರ್ಯವಾಗಲಿದೆ. ಇದರಿಂದ ಉದ್ಯೋಗಿಗಳಿಗೆ ಸಂಬಳ ನೀಡಲು ಸಮಸ್ಯೆ ಆಗುತ್ತದೆ. ಅಲ್ಲದೇ, ಮುಂಚಿತವಾಗಿ ಪಡೆದುಕೊಂಡಿರುವ ಆರ್ಡರ್‌ಗಳನ್ನು ಸರಿಯಾದ ಸಮಯಕ್ಕೆ ಡೆಲಿವರಿ ನೀಡದಿದ್ದರೆ ದಂಡವನ್ನು ವಿಧಿಸುತ್ತಾರೆ. ಅದನ್ನು ಕೂಡ ಭರಿಸಬೇಕಾಗುತ್ತದೆ. ಸದ್ಯಕ್ಕೆ ಗ್ಯಾಸ್ ಅವಲಂಬಿತ ಕೈಗಾರಿಕೆಗಳ ಸ್ಥಿತಿ ಕಷ್ಟವಾಗಿದೆ ಎಂದು ಶಿವಕುಮಾರ್ ತಿಳಿಸಿದರು.

ಸಮಸ್ಯೆ ಗಂಭೀರವಾಗಿದೆ. ಆದರೆ, ಕೈಗಾರಿಕೆ ಇಲಾಖೆಯ ಅಧಿಕಾರಿಗಳು ಈವರೆಗೆ ಯಾವುದೇ ಸಭೆ ನಡೆಸುವ ಪ್ರಯತ್ನ ಮಾಡಿಲ್ಲ. ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವುದು ಹಾಗೂ ಸಿಲಿಂಡರ್ ಕೊರತೆಯಿಂದ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಸಮಸ್ಯೆಗಳನ್ನು ಕೈಗಾರಿಕೆಗಳು ಹಾಗೂ ಉದ್ಯೋಗಿಗಳಿಗೆ ತೊಂದರೆ ಆಗದಂತೆ ಅನುಸರಿಸಬಹುದಾದ ಕ್ರಮಗಳ ಬಗ್ಗೆ ಚರ್ಚಿಸಿಲ್ಲ ಎಂದು ಶಿವಕುಮಾರ್ ಹೇಳಿದರು.ಶೇ.15ರಿಂದ 30ರಷ್ಟು ಇಂಧನ ವೆಚ್ಚಅನೇಕ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಇಂಧನ ವೆಚ್ಚವು ಒಟ್ಟು ಉತ್ಪಾದನಾ ವೆಚ್ಚದ ಸುಮಾರು ಶೇ.15ರಿಂದ 30 ರಷ್ಟಿರುತ್ತದೆ. ಎಲ್‌ಪಿಜಿ ಬೆಲೆಯಲ್ಲಿನ ಯಾವುದೇ ಏರಿಕೆ ಅಥವಾ ಪೂರೈಕೆಯಲ್ಲಿನ ವ್ಯತ್ಯಯಗಳು ನೇರವಾಗಿ ಉತ್ಪಾದನೆ ಮತ್ತು ವ್ಯವಹಾರದ ಸುಸ್ಥಿರತೆಯ ಮೇಲೆ ಗಂಭೀರ ಪರಿಣಾಮ ಬೀರುತ್ತವೆ ಎಂದು ಶಿವಕುಮಾರ್ ಹೇಳಿದ್ದಾರೆ.ಗ್ಯಾಸ್ ಅವಲಂಬಿತ ಕೈಗಾರಿಕೆಗಳ್ಯಾವುವು?

- ಲೋಹದ ಎರಕ ಹೊಯ್ಯುವುದು ಮತ್ತು ಅಚ್ಚು ತಯಾರಿಕೆ ಘಟಕಗಳು

- ಹೀಟ್ ಟ್ರೀಟ್ಮೆಂಟ್ ಪ್ರೊಸೆಸ್ಸಿಂಗ್ ಯುನಿಟ್

- ಪೌಡರ್ ಕೋಟಿಂಗ್ ಉದ್ಯಮಗಳು

- ಎಂಜಿನಿಯರಿಂಗ್ ಫ್ಯಾಬ್ರಿಕೇಷನ್ ಮತ್ತು ವೆಲ್ಡಿಂಗ್

- ಆಹಾರ ಸಂಸ್ಕರಣಾ ಘಟಕಗಳು

- ರಸಾಯನಿಕ ಮತ್ತು ಔಷಧೀಯ ಉತ್ಪಾದನಾ ಸಂಸ್ಥೆಗಳು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರೇಜ್‌ ಮೆಕಾನಿಕ್‌ ಕೊಲೆ ಕೇಸ್‌: 7 ಆರೋಪಿಗಳ ಸೆರೆ
ಪೋಟೋ ಫ್ರೇಮ್‌ನಲ್ಲಿ ಅಡಗಿಸಿಟ್ಟುಸಾಗಿಸುತ್ತಿದ್ದ 37 ಲಕ್ಷದ ಗಾಂಜಾ ಜಪ್ತಿ