ಉಳಿಕೆ....ಉಕ್ಕಿನ ನಗರದ ವಿವಿಧೆಡೆ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ

KannadaprabhaNewsNetwork |  
Published : Sep 16, 2026, 01:45 AM IST
ಭದ್ರಾವತಿ ಹೊಸಮನೆ ಭಾಗದಲ್ಲಿ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೫೪ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ನಗರದ ಪ್ರಮುಖ ವೃತ್ತಗಳಲ್ಲಿ ಆಕರ್ಷಕವಾದ ಬೃಹತ್ ಸ್ವಾಗತ ದ್ವಾರಬಾಗಿಲುಗಳನ್ನು ನಿರ್ಮಿಸಲಾಗಿದೆ.  | Kannada Prabha

ಸಾರಾಂಶ

Gauri-Ganesha festival celebrated with enthusiasm across the 'Steel City'

ವಿವಿಧೆಡೆ ಬೃಹತ್ ಆಕರ್ಷಕ ಮೂರ್ತಿಗಳ ಪ್ರತಿಷ್ಠಾಪನೆ

---

ಕನ್ನಡಪ್ರಭ ವಾರ್ತೆ ಭದ್ರಾವತಿ

ನಗರದ ವಿವಿಧೆಡೆ ಗೌರಿ-ಗಣೇಶ ಹಬ್ಬ ಆಚರಣೆ ಸೋಮವಾರ ವಿಜೃಂಭಣೆಯಿಂದ ನಡೆಯಿತು. ಪ್ರತಿ ವರ್ಷದಂತೆ ಈ ಬಾರಿ ಸಹ ಪ್ರತಿಷ್ಠಿತ ವಿನಾಯಕ ಸೇವಾ ಸಮಿತಿಗಳಿಂದ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ.

ಹೊಸಮನೆ ಭಾಗದಲ್ಲಿ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೫೪ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ನಗರದ ಪ್ರಮುಖ ವೃತ್ತಗಳಲ್ಲಿ ಆಕರ್ಷಕವಾದ ಬೃಹತ್ ಸ್ವಾಗತ ದ್ವಾರಬಾಗಿಲುಗಳನ್ನು ನಿರ್ಮಿಸಲಾಗಿದೆ. ಅಲ್ಲದೆ ವಿದ್ಯುತ್ ದೀಪಗಳ ಆಲಂಕಾರ ಕೈಗೊಳ್ಳಲಾಗಿದೆ. ಭೋವಿ ಕಾಲೋನಿ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೪೨ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ಆಕರ್ಷಕ ವೇದಿಕೆಯಲ್ಲಿ ಬೃಹತ್ ವಿನಾಯಕ ಮೂರ್ತಿ ರಾರಾಜಿಸುತ್ತಿದೆ. ಭಕ್ತರ ಕಣ್ಮನ ಸೆಳೆಯುತ್ತಿದ್ದು, ಸೆ.೨೪ರಂದು ವಿಸರ್ಜನೆ ನಡೆಯಲಿದೆ.

ಬಿ.ಎಚ್ ರಸ್ತೆ, ಅಂಬೇಡ್ಕರ್ ನಗರದಲ್ಲಿ ಎಸ್.ಜಿ ಶಿವಶಂಕರಯ್ಯ ಪೆಟ್ರೋಲ್ ಬಂಕ್ ಬಳಿ ಪ್ರತಿ ವರ್ಷದಂತೆ ಈ ಬಾರಿ ಸಹ ವಿನಾಯಕ ಮೂರ್ತಿ ಡಾ. ಬಿ.ಆರ್ ಅಂಬೇಡ್ಕರ್ ಯುವಕರ ಸಂಘದಿಂದ ಪ್ರತಿಷ್ಠಾಪಿಸಲಾಗಿದ್ದು, ಶೇಷವಾಹನದ ಮೇಲೆ ನಿಂತ ಆಕರ್ಷಕ ವಿನಾಯಕ ಮೂರ್ತಿ ಭಕ್ತರ ಕಣ್ಮನ ಸೆಳೆಯುತ್ತಿದೆ. ಉಳಿದಂತೆ ಮಾಧವಚಾರ್ ವೃತ್ತ, ಹಾಲಪ್ಪ ವೃತ್ತದಲ್ಲಿ ಸಹ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ.

ನ್ಯೂಟೌನ್ ಭಾಗದಲ್ಲಿ ಪ್ರತಿಷ್ಠಿತ ವಿನಾಯಕ ಸೇವಾ ಸಮಿತಿಗಳಲ್ಲಿ ಶ್ರೀ ರಾಮರಾಜ್ಯ ಸಂಘಟನೆಯಿಂದ ಈ ಬಾರಿ ಸಹ ಬೃಹತ್ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಜಯಶ್ರೀ ವೃತ್ತದಲ್ಲಿ ೨ನೇ ವರ್ಷದ ಸಂಭ್ರಮಾಚರಣೆ ಜಯಶ್ರೀ ಬಾಯ್ಸ್ ವಿನಾಯಕ ಸೇವಾ ಸಮಿತಿಯಿಂದ ನಡೆಯುತ್ತಿದ್ದು, ಸುಮಾರು ೧೨ ಅಡಿ ಎತ್ತರದ ಗರುಡ ವಾಹನ ವಿನಾಯಕ ಮೂರ್ತಿ ಭಕ್ತರನ್ನು ಆಕರ್ಷಿಸುತ್ತಿದ್ದು, ಈ ಮೂರ್ತಿಯನ್ನು ದಾವಣಗೆರೆಯಲ್ಲಿ ಸಿದ್ದಪಡಿಸಲಾಗಿದೆ. ಎಸ್‌ಎವಿ ವೃತ್ತದಲ್ಲಿ ಈ ಬಾರಿ ಸಹ ವಿನಾಯಕ ಸೇವಾ ಸಮಿತಿಯಿಂದ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಶಿಲಾಮಯವಾದ ದೇವಸ್ಥಾನದ ಮಂಟಪದಲ್ಲಿ ಶಿಲಾ ವಿನಾಯಕ ಮೂರ್ತಿ ಭಕ್ತರನ್ನು ಆಕರ್ಷಿಸುತ್ತಿದೆ. ಕೂಲಿಬ್ಲಾಕ್ ಶೆಡ್‌ನಲ್ಲಿ ಶ್ರೀರಾಮ ದೇವಸ್ಥಾನದ ಸಮೀಪ ಈ ಬಾರಿ ಸಹ ಆಕರ್ಷಕ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.

ಡಿ೧೫-ಬಿಡಿವಿಟಿ೨

ಭದ್ರಾವತಿ ಭೋವಿ ಕಾಲೋನಿ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೪೨ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ಆಕರ್ಷಕ ವೇದಿಕೆಯಲ್ಲಿ ಬೃಹತ್ ವಿನಾಯಕ ಮೂರ್ತಿ ರಾರಾಜಿಸುತ್ತಿದೆ.

ಡಿ೧೫-ಬಿಡಿವಿಟಿ೨(ಎ)

ಭದ್ರಾವತಿ ಹೊಸಮನೆ ಭಾಗದಲ್ಲಿ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೫೪ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ನಗರದ ಪ್ರಮುಖ ವೃತ್ತಗಳಲ್ಲಿ ಆಕರ್ಷಕವಾದ ಬೃಹತ್ ಸ್ವಾಗತ ದ್ವಾರಬಾಗಿಲುಗಳನ್ನು ನಿರ್ಮಿಸಲಾಗಿದೆ.

ಡಿ೧೫-ಬಿಡಿವಿಟಿ೨(ಬಿ)

ಭದ್ರಾವತಿ ಜಯಶ್ರೀ ವೃತ್ತದಲ್ಲಿ ೨ನೇ ವರ್ಷದ ಸಂಭ್ರಮಾಚರಣೆ ಜಯಶ್ರೀ ಬಾಯ್ಸ್ ವಿನಾಯಕ ಸೇವಾ ಸಮಿತಿಯಿಂದ ನಡೆಯುತ್ತಿದ್ದು, ಸುಮಾರು ೧೨ ಅಡಿ ಎತ್ತರದ ಗರುಡ ವಾಹನ ವಿನಾಯಕ ಮೂರ್ತಿ ಭಕ್ತರನ್ನು ಆಕರ್ಷಿಸುತ್ತಿದೆ.

ಡಿ೧೫-ಬಿಡಿವಿಟಿ೨(ಸಿ)

ಭದ್ರಾವತಿ ನ್ಯೂಕಾಲೋನಿ ಎಸ್‌ಎವಿ ವೃತ್ತದಲ್ಲಿ ಈ ಬಾರಿ ಸಹ ವಿನಾಯಕ ಸೇವಾ ಸಮಿತಿಯಿಂದ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಶಿಲಾಮಯವಾದ ದೇವಸ್ಥಾನದ ಮಂಟಪದಲ್ಲಿ ಶಿಲಾ ವಿನಾಯಕ ಮೂರ್ತಿ ಭಕ್ತರನ್ನು ಆಕರ್ಷಿಸುತ್ತಿದೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಡು ರಸ್ತೆಯಲ್ಲೇ ಗಣೇಶಮೂರ್ತಿ ಇಟ್ಟು ಯುವಕರ ಪ್ರತಿಭಟನೆ
ವಿಜೃಂಭಣೆಯಿಂದ ನಡೆದ 46ನೇ ವರ್ಷದ ಗಣಪತಿ ಪೂಜಾ ಮಹೋತ್ಸವ