ಕೆ.ಆರ್.ಪೇಟೆ ತಾಲೂಕಿನಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ

KannadaprabhaNewsNetwork |  
Published : Sep 16, 2026, 02:00 AM IST
15ಕೆಎಂಎನ್ ಡಿ30,31 | Kannada Prabha

ಸಾರಾಂಶ

ಕೆ.ಆರ್.ಪೇಟೆ ತಾಲೂಕಿನೆಲ್ಲೆಡೆ 850ಕ್ಕೂ ಹೆಚ್ಚು ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆಯಾಗಿದೆ. ತಾಲೂಕಿನ ಹೊನ್ನೇನಹಳ್ಳಿ ಆಲದ ಮರದ ಗೇಟ್ ಬಳಿ ಹಿಂದೂ-ಮುಸ್ಲಿಮರು ಒಗ್ಗೂಡಿ ಗೌರಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ರಾಜ್ಯಕ್ಕೆ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ತಾಲೂಕಿನ ಉದ್ದಗಲಕ್ಕೂ ಪ್ರತಿ ಹಳ್ಳಿ ಹಳ್ಳಿಯಲ್ಲೂ ಗೌರಿ ಗಣೇಶನ ಹಬ್ಬ ಸಂಭ್ರಮ ಸಡಗರಗಳಿಂದ ಆಚರಿಸಲ್ಪಟ್ಟಿತು.

ಗೌರಿ ಮತ್ತು ಗಣೇಶನ ಸ್ವಾಗತಕ್ಕೆ ಸಕಲ ಸಿದ್ಧತೆ ನಡೆಸಿದ ಜನರು ಮುಂಜಾನೆಯೇ ಮನೆ ಮನೆಗಳಲ್ಲಿ ಗೌರಿ ಪೂಜೆ ನೆರವೇರಿಸಿದರು. ಮಹಿಳೆಯರು ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆದರು.

ಪಟ್ಟಣದ ಈಶ್ವರ ದೇವಾಲಯ, ಬಸವನ ಗುಡಿ ಕಲ್ಲುಮಠ ಸೇರಿದಂತೆ ವಿವಿಧೆಡೆ ಗೌರಿ ಪೂಜೆಗೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಸರತಿಯ ಸಾಲಿನಲ್ಲಿ ನಿಂತ ಭಕ್ತರು ಗೌರಿಗೆ ಬಾಗಿನ ಅರ್ಪಿಸಿ ಸಂಭ್ರಮಿಸಿದರು. ಸೀರೆ, ಕುಪ್ಪಸ, ಬೆಲ್ಲ, ಕೊಬ್ಬರಿ ಮುಂತಾದವುಗಳನ್ನು ಮೊರದಲ್ಲಿ ತುಂಬಿ ಹೆಣ್ಣು ಮಕ್ಕಳಿಗೆ ತವರಿನ ಬಾಗಿನ ಸಲ್ಲಿಸುವ ದೃಶ್ಯ ಸಾಮಾನ್ಯವಾಗಿತ್ತು.

ಪಟ್ಟಣ ಸೇರಿದಂತೆ ತಾಲೂಕಿನ ಹಳ್ಳಿ ಹಳ್ಳಿಯಲ್ಲೂ ಗಣೆಶನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲುತ್ತಿದೆ. ತಾಲೂಕಿನೆಲ್ಲೆಡೆ 850ಕ್ಕೂ ಹೆಚ್ಚು ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆಯಾಗಿದೆ. ತಾಲೂಕಿನ ಹೊನ್ನೇನಹಳ್ಳಿ ಆಲದ ಮರದ ಗೇಟ್ ಬಳಿ ಹಿಂದೂ-ಮುಸ್ಲಿಮರು ಒಗ್ಗೂಡಿ ಗೌರಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ರಾಜ್ಯಕ್ಕೆ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ. ಮುಸ್ಲಿಂ ಕುಟುಂಬದ ಮಹಿಳೆಯರು ಗಣಪತಿಗೆ ವಂದಿಸಿ ಮಂಗಳಾರತಿ ಸ್ವೀಕರಿಸಿ ಧನ್ಯತಾಬಾವ ಪ್ರದರ್ಶಿಸಿದರು.

ಮುಂಬರುವ ಸ್ಥಳೀಯ ಸಂಸ್ಥೆ, 2028ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ವರ್ಷ ಗಣಪತಿ ಪ್ರತಿಷ್ಠಾಪನೆಗೆ ಆರ್ಥಿಕ ಸಹಾಯ ನೀಡುವ ಚುನಾವಣಾ ಆಕಾಂಕ್ಷಿತ ಸಂಖ್ಯೆಯೂ ಹೆಚ್ಚಾಗಿದೆ. ಶಾಸಕ ಎಚ್.ಟಿ.ಮಂಜು, ಆರ್.ಟಿ.ಓ ಮಲ್ಲಿಕಾರ್ಜುನ್, ಮನ್ಮುನ್ ನಿರ್ದೇಶಕ ಡಾಲು ರವಿ ಪ್ರತಿವರ್ಷದಂತೆ ಪ್ರಸಕ್ತ ಸಾಲಿನಲ್ಲಿಯೂ ತಮ್ಮ ತಮ್ಮ ಮನೆ ಕಚೇರಿಯ ಬಳಿ ಪೆಂಡಾಲ್ ಹಾಕಿ, ಧನ ಸಹಾಯ ಕೇಳಲು ಬರುವ ಭಕ್ತ ಮಂಡಲಿಯ ಸದಸ್ಯರಿಗೆ ಊಟೋಪಚಾರ ಮಾಡಿ ಆರ್ಥಿಕ ನೆರವು ನೀಡಿದ್ದಾರೆ.

ಗಣೇಶ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪಟ್ಟಣ, ಗ್ರಾಮೀಣ ಹಾಗೂ ಕಿಕ್ಕೇರಿ ಪೊಲೀಸರು ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಿದ್ದಾರೆ. ತಹಸೀಲ್ದಾರ್ ಶ್ರೇಯಸ್ ಅವರ ಸೂಚನೆ ಮೇರೆಗೆ ಗ್ರಾಮೀಣ ಪ್ರದೇಶದಲ್ಲಿ ಸಂಚಾರಿ ಪೊಲೀಸರ ಪಡೆ ರಚಿಸಿದ್ದು ಪೊಲೀಸರು ಪ್ರತಿ ಗ್ರಾಮಕ್ಕೂ ತೆರಳಿ ಸ್ಥಳಪರಿಶೀಲನೆ ಮಾಡಿ ಗಣಪತಿ ಪ್ರತಿಷ್ಠಾಪನೆಗೆ ಅಗತ್ಯ ಅನುಮತಿ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಳೆಯಿಂದ ಒಂದು ತಿಂಗಳ ಕಾಲ ಸೇವಾ ಸಂಕಲ್ಪ ಅಭಿಯಾನ: ಪ್ರಹ್ಲಾದ್ ಜೋಶಿ
ಜನಸ್ನೇಹಿ ವೈದ್ಯರ ಆರೊಗ್ಯ ಕೈಪಿಡಿ, 2 ಕವನ ಸಂಕಲನ