ಗೌತಮ ಬುದ್ಧ ಮನುಕುಲದ ಆದರ್ಶ: ಡಾ.ಮಲ್ಲಪ್ಪ

KannadaprabhaNewsNetwork |  
Published : Jul 28, 2026, 02:00 AM IST
ದೊಡ್ಡಬಳ್ಳಾಪುರದ ಸರ್ಕಾರಿ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ  ವಸತಿ ನಿಲಯದಲ್ಲಿ ಗೌತಮ ಬುದ್ದನ ಜೀವನ ಚರಿತ್ರೆ ಕುರಿತ ಪ್ರಬಂಧ ಸ್ಪರ್ಧೆ ಉದ್ಘಾಟನಾ ಕಾರ್ಯಕ್ರಮದಲ್ಲಿ ತಹಶೀಲ್ದಾರ್‌ ಮಲ್ಲಪ್ಪ ಮಾತನಾಡಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಜಗತ್ತಿಗೆ ಅಹಿಂಸೆ, ಕರುಣೆ ಮತ್ತು ಶಾಂತಿ ಮಾರ್ಗ ತೋರಿದ ಮಹಾನ್ ದಾರ್ಶನಿಕ ಗೌತಮ ಬುದ್ಧ ಎಂದು ತಹಸೀಲ್ದಾರ್ ಡಾ.ಮಲ್ಲಪ್ಪ ಕೆ. ಯರಗೋಳ ತಿಳಿಸಿದರು

ದೊಡ್ಡಬಳ್ಳಾಪುರ: ಜಗತ್ತಿಗೆ ಅಹಿಂಸೆ, ಕರುಣೆ ಮತ್ತು ಶಾಂತಿ ಮಾರ್ಗ ತೋರಿದ ಮಹಾನ್ ದಾರ್ಶನಿಕ ಗೌತಮ ಬುದ್ಧ ಎಂದು ತಹಸೀಲ್ದಾರ್ ಡಾ.ಮಲ್ಲಪ್ಪ ಕೆ. ಯರಗೋಳ ತಿಳಿಸಿದರು.

ನಗರದ ಸರ್ಕಾರಿ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ದೊಡ್ಡಬಳ್ಳಾಪುರ ಬೌದ್ಧ ದಮ್ಮ ಸಮಾಜದ ವತಿಯಿಂದ ಗೌತಮ ಬುದ್ಧನ ಜೀವನ ಚರಿತ್ರೆ ಕುರಿತು ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

ಅಸಮಾನತೆ, ಕಂದಾಚಾರಗಳಂತಹ ಆಚರಣೆಗಳಿಂದ ನರಳುತ್ತಿದ್ದ ಜಗತ್ತಿಗೆ ಜ್ಞಾನದ ಬೆಳಕಾಗಿ, ಶಾಂತಿ, ಸಮಾನತೆಯ ದಾರಿ ತೋರಿದವರು ಭಗವಾನ್‌ ಬುದ್ಧ. ಜಗತ್ತಿಗೆ ಶಾಂತಿ ಬೋಧಿಸಿದ ಬುದ್ಧನ ಆದರ್ಶ, ವಿಚಾರಗಳ ಬಗ್ಗೆ ಎಲ್ಲರಿಗೂ ಅರಿವು ಮೂಡಿಸಬೇಕಾಗಿದೆ ಎಂದು ಹೇಳಿದರು.

ದೊಡ್ಡಬಳ್ಳಾಪುರ ತಾಲೂಕು ಬೌದ್ಧ ದಮ್ಮ ಸಮಾಜದ ಕಾರ್ಯದರ್ಶಿ ರಾಜೇಂದ್ರ ಮಾತನಾಡಿ, ದೊಡ್ಡಬಳ್ಳಾಪುರ ಅಂಬೇಡ್ಕರ್ ಭವನದಲ್ಲಿ ಜು.29 ರಂದು ಬುಧವಾರ ಸಂಜೆ ಗಂಟೆಗೆ ದಮ್ಮಚಕ್ಕ ಪವತ್ತನ ದಿನಾಚರಣೆ ನಡೆಯಲಿದೆ. ಗೌತಮ ಬುದ್ಧನು ಜ್ಞಾನೋದಯದ ನಂತರ ತನ್ನ ಮೊದಲ ಐದು ಶಿಷ್ಯರಿಗೆ ಸಾರಾನಾಥದ ಜಿಂಕೆ ವನದಲ್ಲಿ ಮೊದಲ ಧರ್ಮೋಪದೇಶ ನೀಡಿದ ಪವಿತ್ರ ದಿನವನ್ನು ದಮ್ಮ ಚಕ್ಕ ಪವತ್ತನ ದಿನಾಚರಣೆ ಎಂದು ಆಷಾಢ ಹುಣ್ಣಿಮೆಯಂದು ಆಚರಿಸಲಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿ.ಎನ್.ಶೇಷಾದ್ರಿ, ತಾ.ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ಬೌದ್ಧ ದಮ್ಮ ಸಮಾಜ ಅಧ್ಯಕ್ಷ ನಾಗರಾಜು, ವಿಶ್ವ ಜ್ಞಾನಿ ಸೇವಾ ಟ್ರಸ್ಟ್ ಪದಾಧಿಕಾರಿಗಳಾದ ನಾರಾಯಣಪ್ಪ, ಚಿಕ್ಕಣ್ಣ, ಗಂಗಬೈಲಪ್ಪ, ವಿದ್ಯಾರ್ಥಿ ನಿಲಯ ಮೇಲ್ವಿಚಾರಕ ಶಿವಪ್ಪ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

26ಕೆಡಿಬಿಪಿ8

ದೊಡ್ಡಬಳ್ಳಾಪುರದ ಸರ್ಕಾರಿ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಗೌತಮ ಬುದ್ದನ ಜೀವನ ಚರಿತ್ರೆ ಕುರಿತ ಪ್ರಬಂಧ ಸ್ಪರ್ಧೆ ಉದ್ಘಾಟನಾ ಕಾರ್ಯಕ್ರಮದಲ್ಲಿ ತಹಸೀಲ್ದಾರ್‌ ಡಾ.ಮಲ್ಲಪ್ಪ ಕೆ ಯರಗೋಳ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇಶದ ರಕ್ಷಣೆಗಾಗಿ ಪ್ರಾಣದ ಹಂಗು ತೊರೆಯುವ ಸೈನಿಕರ ಸೇವೆ ವರ್ಣಿಸಲಾಗದು
ಕಾಲ್ಕೆರೆ ಕಾರ್ಯಕ್ಷೇತ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ