ಕೊಪ್ಪಳದ ಗವಿಸಿದ್ದೇಶ್ವರ ಉತ್ಸವ ಮೂರ್ತಿ ಮೆರವಣಿಗೆ

KannadaprabhaNewsNetwork |  
Published : Jan 26, 2024, 01:45 AM IST
ಪೋಟೋ25ಕೆಪಿಎಲ್70: ಗವಿಸಿದ್ದೇಶ್ವ ಮೂರ್ತಿ ಪಲ್ಲಕ್ಕಿಯ ಮೆರವಣಿಗೆ ನಡೆಯಿತು. ಕಳಸ ಮೆರವಣಿಗೆ ನಡೆಯಿತು. | Kannada Prabha

ಸಾರಾಂಶ

ನಂದಿಕೋಲು, ಡೊಳ್ಳು, ಭಜನೆ, ಭಾಜಾ-ಭಜಂತ್ರಿ, ಪಂಜು, ಇಲಾಲು ಹಾಗೂ ನಾಡಿನ ವೈಭವವನ್ನು ಬಿಂಬಿಸುವ ಅನೇಕ ಜಾನಪದ ವಿಶೇಷ ಕಲಾ ತಂಡಗಳು ಈ ಮೆರವಣಿಗೆಯಲ್ಲಿ ಭಾಗವಹಿಸಿ ಮೆರವಣಿಗೆಗೆ ಮೆರಗು ತಂದವು.

ಕೊಪ್ಪಳ: ನಗರದ ಗವಿಸಿದ್ಧೇಶ್ವರ ಜಾತ್ರಾ ಅಂಗವಾಗಿ ಉತ್ಸವ ಮೂರ್ತಿಯ ಮೆರವಣಿಗೆಯು ಗುರುವಾರ ಸಂಜೆ 5 ಗಂಟೆಗೆ ಆರಂಭಗೊಂಡು ಗವಿಮಠ ತಲುಪಿತು.ಜಡೇಗೌಡರ ಮನೆಯಿಂದ ಪ್ರಾರಂಭಗೊಂಡು ಕೋಟೆ ಮಠದಿಂದ ಪಲ್ಲಕ್ಕಿ ಹೊರಟು ಗಡಿಯಾರ ಕಂಬ ವೃತ್ತದಲ್ಲಿ, ಮುದ್ದಾಬಳ್ಳಿಯಿಂದ ಬರುವ ಗವಿಸಿದ್ಧೇಶ್ವರ ಉತ್ಸವ ಮೂರ್ತಿಯೂ ಹಲಗೇರಿಗ್ರಾಮದ ಭಕ್ತ ಲಿಂ.ವೀರನಗೌಡ ಪಾಟೀಲ ಮತ್ತು ಧರ್ಮಪತ್ನಿ ಗಿರಿಜಮ್ಮ ಪಾಟೀಲರ ಮನೆಯಿಂದ ಬರುವ ಕಳಸ ಹಾಗೂ ಮಂಗಳಾಪುರದಿಂದ ಬರುವ ಗವಿಸಿದ್ಧೇಶ್ವರ ಉತ್ಸವ ಮೂರ್ತಿಯು ಜವಾಹರ್ ರಸ್ತೆಯಲ್ಲಿ ಕೂಡಿಕೊಂಡು ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್, ಕವಲೂರು ಓಣಿ, ಸಿದ್ಧೇಶ್ವರ ವೃತ್ತದ ಗವಿಶ್ರೀ ನಗರದ 3ನೇ ಮುಖ್ಯರಸ್ತೆ ಮೂಲಕ ಭವ್ಯ ಮೆರವಣಿಗೆ ಬಹಳ ಸಡಗರ, ಸಂಭ್ರಮದಿಂದ ಜರುಗಿತು.ಇದರಲ್ಲಿ ನಂದಿಕೋಲು, ಡೊಳ್ಳು, ಭಜನೆ, ಭಾಜಾ-ಭಜಂತ್ರಿ, ಪಂಜು, ಇಲಾಲು ಹಾಗೂ ನಾಡಿನ ವೈಭವವನ್ನು ಬಿಂಬಿಸುವ ಅನೇಕ ಜಾನಪದ ವಿಶೇಷ ಕಲಾ ತಂಡಗಳು ಈ ಮೆರವಣಿಗೆಯಲ್ಲಿ ಭಾಗವಹಿಸಿ ಮೆರವಣಿಗೆಗೆ ಮೆರಗು ತಂದವು. ಈ ಮೆರವಣಿಗೆಯಲ್ಲಿ ಸಹಸ್ರಾರು ಸದ್ಭಕ್ತರು ಹಾಗೂ ಗೌಡರ ಮನೆತನದವರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ
ಸಾರ್ವತ್ರಿಕ ಮುಷ್ಕರ: ತಿಪಟೂರಿನಲ್ಲಿ ಸ್ವಯಂ ಪ್ರೇರಿತ ಬಂದ್