ಶಾಖಾ ಗವಿಸಿದ್ದೇಶ್ವರ ಮಠದ 30ನೇ ವರ್ಷದ ಜಾತ್ರೆಗೆ ಚಾಲನೆ

KannadaprabhaNewsNetwork |  
Published : Feb 17, 2025, 12:32 AM IST
ಹೂವಿನಹಡಗಲಿ ಗವಿಸಿದ್ದೇಶ್ವರ ಮಠದ 30ನೇ ಜಾತ್ರಾ ಮಹೋತ್ಸವದಲ್ಲಿ ಷಟಸ್ಥಲ ಧ್ವಜಾರೋಹಣ ನೆರವೇರಿಸಲಾಯಿತು.ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಲ್ಲನಕೆರೆ ಮಠದ ಅಭಿನವ ಚೆನ್ನಬಸವ ಸ್ವಾಮೀಜಿ. | Kannada Prabha

ಸಾರಾಂಶ

ಷಟಸ್ಥಲ ಧ್ವಜಾರೋಹಣ ವೀರಶೈವ ಧರ್ಮದ ಪರಂಪರೆಯಾಗಿದೆ.

ಹೂವಿನಹಡಗಲಿ: ಪಟ್ಟಣದ ಶಾಖಾ ಗವಿಸಿದ್ದೇಶ್ವರ ಮಠದ 30ನೇ ವರ್ಷದ ಜಾತ್ರಾ ಮಹೋತ್ಸವಕ್ಕೆ ಷಟಸ್ಥಲ ಧ್ವಜಾರೋಹಣವನ್ನು ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಮಲ್ಲನಕೆರೆ ಮಠದ ಅಭಿನವ ಚೆನ್ನಬಸವ ಸ್ವಾಮೀಜಿ, ಭಕ್ತರು ಜಾತ್ರಾ ಮಹೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ, ಶ್ರದ್ಧಾ ಮನೋಭಾವನೆಯಿಂದ ಸೇವೆ ಮಾಡಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಹೇಳಿದರು.

ಷಟಸ್ಥಲ ಧ್ವಜಾರೋಹಣ ವೀರಶೈವ ಧರ್ಮದ ಪರಂಪರೆಯಾಗಿದೆ. ಉತ್ತಮ ಕಾರ್ಯ ಮಾಡುವ ಮುನ್ನ ಯಾವುದೇ ವಿಘ್ನಗಳು ಎದುರಾಗದಂತೆ ಸಂಕಲ್ಪ ಮಾಡಲು ಷಟಸ್ಥಲ ಧ್ವಜಾರೋಹಣ ಮಾಡಲಾಗುತ್ತಿದೆ ಎಂದು ಹೇಳುತ್ತಾ, ಷಟಸ್ಥಲಗಳ ಬಗ್ಗೆ ಮಾಹಿತಿ ನೀಡಿದರು.

ಗವಿಸಿದ್ದೇಶ್ವರರ 30ನೇ ವರ್ಷದ ಜಾತ್ರಾ ಮಹೋತ್ಸವದ ಷಟಸ್ಥಲ ಧ್ವಜಾರೋಹಣವನ್ನು ತಂಬ್ರಳ್ಳಿ ಕೋತ್ರಮ್ಮ, ರತ್ನಮ್ಮ ವಾಲಿ ಶೆಟ್ಟರ್ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗವಿಮಠದ ಡಾ.ಹಿರಿ ಶಾಂತವೀರ ಸ್ವಾಮೀಜಿ ಮಾತನಾಡಿ, ಮಠದಲ್ಲಿ ಜಾತ್ರೆಯ ಅಂಗವಾಗಿ ನಿರಂತರ ಕಾರ್ಯಕ್ರಮಗಳು ಜರುಗುತ್ತವೆ. ಇಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಭಕ್ತರ ಸಹಕಾರದಿಂದ ಜಾತ್ರಾ ಮಹೋತ್ಸವ ಯಶಸ್ವಿಯಾಗಲಿ ಎಂದರು.

ಶರಣೆ ನಿಂಬಕ್ಕ ಅಮ್ಮನವರು, ವೀರಶೈವ ಲಿಂಗಾಯತ ಸಮಾಜ ನಗರ ಘಟಕದ ಅಧ್ಯಕ್ಷ ಮುಂಡವಾಡದ ಉಮೇಶ್, ಎ.ಜೆ. ವೀರೇಶ್, ಲೀಲಾ ಆಟವಾಳಗಿ, ಎಚ್.ಕೆ. ಗಂಗಮ್ಮ, ವಾಲಿ ಶೆಟ್ಟರ್‌ ಮುರಿಗೆಪ್ಪ, ಹಕ್ಕಂಡಿ ಶಿವನಾಗಪ್ಪ, ಎಂ.ಪಿ.ಎಂ. ಕೊಟ್ರಯ್ಯ, ಕೋಡಿಹಳ್ಳಿ ಕೊಟ್ರೇಶ್, ಎಚ್.ಎಂ. ಪಟದಯ್ಯ, ನಜೀರ್ ಸಾಹೇಬ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಈ ಬಾರಿ ಉತ್ತಮ ಮಳೆ, ಕೆರೆ ಭರ್ತಿ: ಮುಳ್ಳುಗದ್ದುಗೆ ಕಾರ್ಣಿಕ
ಡಬ್ಬಿ ಮೆಣಸಿನಕಾಯಿ ಕ್ವಿಂಟಾಲ್‌ಗೆ 90 ಸಾವಿರ ರು. ದಾಖಲೆಯ ದರ!