ಸೇವೆಯೊಂದಿಗೆ ಸಾಕಷ್ಟು ಪ್ರಗತಿ ಸಾಧಿಸಿದ ಗವಿಸಿದ್ಧೇಶ್ವರ ಅರ್ಬನ್ ಬ್ಯಾಂಕ್

KannadaprabhaNewsNetwork |  
Published : Aug 26, 2024, 01:41 AM IST
25ಕೆಪಿಎಲ್22 ಕೊಪ್ಪಳ ನಗರದ ಶ್ರೀ ಗವಿಸಿದ್ಧೇಶ್ವರ ಅರ್ಬನ್ ಕೋ ಅಪರೇಟಿವ್ ಬ್ಯಾಂಕ್ ವಾರ್ಷಿಕ ಸಭೆ | Kannada Prabha

ಸಾರಾಂಶ

ನಗರದ ಶ್ರೀ ಗವಿಸಿದ್ಧೇಶ್ವರ ಅರ್ಬನ್ ಬ್ಯಾಂಕ್ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಲೇ ಸಾಕಷ್ಟು ಪ್ರಗತಿ ಸಾಧಿಸುತ್ತಿದೆ

ಕನ್ನಡಪ್ರಭ ವಾರ್ತೆ ಕೊಪ್ಪಳ

ನಗರದ ಶ್ರೀ ಗವಿಸಿದ್ಧೇಶ್ವರ ಅರ್ಬನ್ ಬ್ಯಾಂಕ್ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಲೇ ಸಾಕಷ್ಟು ಪ್ರಗತಿ ಸಾಧಿಸುತ್ತಿದೆ ಎಂದು ಶ್ರೀ ಗವಿಸಿದ್ದೇಶ್ವರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ರಾಜಶೇಖರಗೌಡ ಆಡೂರ ಹೇಳಿದ್ದಾರೆ.

ನಗರದ ಶ್ರೀ ಶಿವಶಾಂತವೀರ ಮಂಗಲ ಭವನದಲ್ಲಿ ಭಾನುವಾರ ಶ್ರೀ ಗವಿಸಿದ್ದೇಶ್ವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ 91ನೇ ವಾರ್ಷಿಕ ವರದಿ ವಾಚನ ಮಾಡಿ ಮಾತನಾಡಿದರು.

ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯ ಹೊಂದುವುದು ನಮ್ಮ ಆದ್ಯ ಕರ್ತವ್ಯವೆಂದು ಅರಿತಿರುವ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ, ಸದಸ್ಯರು ಹಾಗೂ ಗ್ರಾಹಕರ ವಿಶ್ವಾಸ ಹೆಚ್ಚಿಸಿಕೊಂಡು ಉತ್ತಮ ಸೇವೆ ನೀಡಲು ವಿಶೇಷ ಗಮನ ನೀಡುತ್ತಿದ್ದೇವೆ. ಗ್ರಾಹಕರ ಸೇವೆಯಲ್ಲಿ ತನ್ನನ್ನು ತಾನು ಪರಿಣಾಮಕಾರಿಯಾಗಿ ತೊಡಗಿಸಿಕೊಂಡ ಬ್ಯಾಂಕು ನಮ್ಮದು. ಪ್ರಸಕ್ತ ಸಾಲಿಗೆ ಶೇ.13ರಷ್ಟು ಡಿವಿಡೆಂಡ್ ಪಾವತಿಸಲು ಕಾರ್ಯಕಾರಿ ಮಂಡಳಿಯವರು ಶಿಫಾರಸು ಮಾಡಿದ್ದಾರೆ. ಇದು ಅಭಿವೃದ್ಧಿಯ ಸಂಕೇತವಾಗಿದೆ. ಹಲವರು, ಹಲವು ವಿಧದಲ್ಲಿ ಬ್ಯಾಂಕಿನ ಪ್ರಯೋಜನ ಪಡೆಯುತ್ತಿದ್ದು, ಬ್ಯಾಂಕಿನ ಆರ್ಥಿಕ ಸಹಾಯ ಪಡೆದ ಅನೇಕ ಗ್ರಾಹಕರು ಇಂದು ಆರ್ಥಿಕವಾಗಿ ಬಲಿಷ್ಠರಾಗಿದ್ದಾರೆ ಎಂದರು.

ನಮ್ಮ ಬ್ಯಾಂಕು ಕೋರ್‌ಬ್ಯಾಂಕಿಗ್ ವ್ಯವಸ್ಥೆ ಹೊಂದಿದ್ದು, ಸದಸ್ಯರಿಗೆ ಹಾಗೂ ಗ್ರಾಹಕರಿಗೆ ಅನುಕೂಲ ಮಾಡಲಾಗಿದೆ. ಅಲ್ಲದೇ ಐಡಿಬಿಐ ಬ್ಯಾಂಕಿನೊಂದಿಗೆ ಒಪ್ಪಂದ ಮಾಡಿಕೊಂಡು ಐಎಫ್‌ಎಸ್‌ಸಿ ಕೋಡ್ IBKL01196SC ಪಡೆದು ಗ್ರಾಹಕರಿಗೆ RTGS/NEFT ಸೌಲಭ್ಯ ಒದಗಿಸಲಾಗುತ್ತಿದೆ. ಸಿ.ಟಿ.ಎಸ್.ಚೆಕ್ ಮತ್ತು ಎಟಿಎಂ, ಸೌಲಭ್ಯವನ್ನು ಸಹ ಹೊಂದಲಾಗಿದೆ, ಜಿಲ್ಲೆಯಲ್ಲಿ ಮಹಿಳಾ ಬ್ಯಾಂಕ್ ಸ್ಥಾಪನೆ ಮಾಡುವ ಗುರಿಯನ್ನು ಸಹ ಹೊಂದಲಾಗಿದೆ. ಬ್ಯಾಂಕ್ ಮುಂಬರುವ ದಿನಗಳಲ್ಲಿ ಹೆಚ್ಚು ಹೆಚ್ಚು ಸೌಲಭ್ಯ ನೀಡುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಬ್ಯಾಂಕಿನ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಉಪಾಧ್ಯಕ್ಷ ಬಸಯ್ಯ ಹಿರೇಮಠ, ನಿರ್ದೇಶಕರಾದ ವಿಶ್ವನಾಥ ಅಗಡಿ, ಬಸವರಾಜ್ ಶಹಪೂರು, ರಾಜೇಂದ್ರಕುಮಾರ ಶೆಟ್ಟರ್, ಶಿವಕುಮಾರ ಪಾವಲಿಶೆಟ್ಟ‌ರ್, ಶಿವರಡ್ಡಿ ಭೂಮಕ್ಕನವರ್, ಗವಿಸಿದ್ದಪ್ಪ ತಳಕಲ್‌, ರಮೇಶ ಕವಲೂರು, ನಾಗರಾಜ್ ಅರಕೇರಿ, ಸುಮಂಗಲಾ ಸೋಮಲಾಪೂರ, ಸೈಯದಾ ಶೈನಾಜಬೇಗಂ, ಜಯಶ್ರೀ ಬಬಲಿ, ಪ್ರಧಾನ ವ್ಯವಸ್ಥಾಪಕ ಪ್ರಭಾಕರ ಜೋಶಿ, ಬ್ಯಾಂಕಿನ ವ್ಯವಸ್ಥಾಪಕ ಮಲ್ಲಿಕಾರ್ಜುನ ಸಿದ್ದೆಕೊಪ್ಪ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

PREV

Recommended Stories

15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌