ಇಲ್ಲಿನ ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಶ್ರೀ ದೇವರ ಸನ್ನಿಧಿಯಲ್ಲಿ ಅಧಿಕ ಜ್ಯೇಷ್ಠ ಮಾಸದ ಪ್ರಯುಕ್ತ ಭಾನುವಾರದಂದು “ಗಾಯತ್ರಿ ಹವನ” ನಡೆಯಿತು. ಸೇವಾದಾರರಾಗಿ ಉಡುಪಿ ಚಿನ್ನಾಭರಣ ಉದ್ಯಮಿ ಸಂಧ್ಯಾ -ಸುಭಾಸ್ ಕಾಮತ್ ದಂಪತಿಗಳು ಪೂಜಾ ಕಾರ್ಯದ ಯಜಮಾನತ್ವ ವಹಿಸಿದ್ದರು.
ಉಡುಪಿ: ಇಲ್ಲಿನ ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಶ್ರೀ ದೇವರ ಸನ್ನಿಧಿಯಲ್ಲಿ ಅಧಿಕ ಜ್ಯೇಷ್ಠ ಮಾಸದ ಪ್ರಯುಕ್ತ ಭಾನುವಾರದಂದು “ಗಾಯತ್ರಿ ಹವನ” ನಡೆಯಿತು. ಸೇವಾದಾರರಾಗಿ ಉಡುಪಿ ಚಿನ್ನಾಭರಣ ಉದ್ಯಮಿ ಸಂಧ್ಯಾ -ಸುಭಾಸ್ ಕಾಮತ್ ದಂಪತಿಗಳು ಪೂಜಾ ಕಾರ್ಯದ ಯಜಮಾನತ್ವ ವಹಿಸಿದ್ದರು.
ದೇವಳದ ಪ್ರಧಾನ ಅರ್ಚಕರಾದ ದಯಾಘನ ಭಟ್ ನೇತೃತ್ವದಲ್ಲಿ ವಿನಾಯಕ ಭಟ್, ದೀಪಕ್ ಭಟ್, ಲಕ್ಷೀನಾರಾಯಣ ಭಟ್ ಧಾರ್ಮಿಕ ಪೂಜಾ ವಿಧಾನಗಳನ್ನು ನಡೆಸಿಕೊಟ್ಟರು. ನಂತರ ಶ್ರೀದೇವರಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಯಾಗದ ಪೂರ್ಣಾಹುತಿ ಬಳಿಕ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಸಮಾರಾಧನೆ ನಡೆಯಿತು. ದೇವಳದ ಆಡಳಿತ ಮೊಕ್ತೇಸರರಾದ ಗುಜ್ಜಾಡಿ ಪ್ರಭಾಕರ ನಾಯಕ್, ಆಡಳಿತ ಮಂಡಳಿಯ ಸದಸ್ಯರು, ಅರ್ಚಕ ವೃಂದದವರು, ಸ್ವಯಂಸೇವಕರು, ಸೇವಾದಾರರು, ಜಿ.ಎಸ್.ಬಿ. ಯುವಕ / ಮಹಿಳಾ ಮಂಡಳಿಯ ಸದಸ್ಯರು, ನೂರಾರು ಸಮಾಜ ಬಾಂದವರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.