ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9.30ಕ್ಕೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ, ನಿಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಿ ಹಾಗೂ ಪಿಜೆ ಬಡಾವಣೆ ಹರಳೆಣ್ಮೆ ಕೊಟ್ರಬಸಪ್ಪ ವೃತ್ತದ ಬಳಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಏಕಕಾಲಕ್ಕೆ 3 ಕಡೆಯಿಂದ ಬೃಹತ್ ಮೆರವಣಿಗೆ ಆರಂಭವಾಗಲಿವೆ ಎಂದರು.
ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಜೊತೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಬಸವರಾಜ ಭೈರತಿ, ಬಿ.ಶ್ರೀರಾಮುಲು, ಜಿ.ಸಿ.ಮಾಧುಸ್ವಾಮಿ, ಬಿ.ಸಿ.ಪಾಟೀಲ, ಮುರುಗೇಶ ನಿರಾಣಿ, ಚಿತ್ರನಟಿ ಶೃತಿ, ಸಂಸದ ಜಿ.ಎಂ.ಸಿದ್ದೇಶ್ವರ ಮತ್ತಿತರರು ಹಳೆ ಭಾಗದ ಶ್ರೀ ದುರ್ಗಾಂಬಿಕಾ ದೇವಸ್ಥಾನದಿಂದ ಆರಂಭವಾಗುವ ಮೆರವಣಿಗೆಯಲ್ಲಿ ಭಾಗವಹಿಸುವರು ಎಂದು ಹೇಳಿದರು.ದುಗ್ಗಮ್ಮ ದೇವಸ್ಥಾನದಿಂದ ಹೊರಡುವ ಮೆರವಣಿಗೆ ಎಸ್ಕೆಪಿ ರಸ್ತೆ, ಗಡಿಯಾರ ಕಂಬ, ರೈಲ್ವೇ ಕೆಳ ಸೇತುವೆ, ಹಳೆ ಬಸ್ಸು ನಿಲ್ದಾಣ, ಪಾಲಿಕೆ ಆವರಣದಿಂದ ಆರಂಭವಾಗಿ ಕಿತ್ತೂರು ಚನ್ನಮ್ಮ ವೃತ್ತ ತಲುಪಲಿದೆ. 2ನೇ ಮೆರವಣಿಗೆ ನಿಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಸ್ಥಾನದಿಂದ ಆರಂಭವಾಗಿ ಎಚ್ಕೆಆರ್ ವೃತ್ತ, ಕೆಟಿಜೆ ನಗರ, ನಿಟುವಳ್ಳಿ ರಸ್ತೆ, ಶ್ರೀ ಜಯವೃತ್ತ, ಕುವೆಂಪು ರಸ್ತೆ, ಗಾಂಧಿ ವೃತ್ತ, ಹಳೆ ವಾಣಿ ಹೊಂಡ ಶೋ ರೂಂ ಬಳಿ ಕಿತ್ತೂರು ಚನ್ನಮ್ಮ ವೃತ್ತದ ಬಳಿ ಮುಕ್ತಾಯವಾಗಲಿದೆ ಎಂದು ತಿಳಿಸಿದರು.
ಮಾಜಿ ಸಚಿವರಾಜ ಎಸ್.ಎ.ರವೀಂದ್ರನಾಥ, ಎಂ.ಪಿ.ರೇಣುಕಾಚಾರ್ಯ, ಹರಿಹರ ಶಾಸಕ ಬಿ.ಪಿ.ಹರೀಶ ಗೌಡ, ಮಾಜಿ ಶಾಸಕರಾದ ಮಾಡಾಳ್ ವಿರುಪಾಕ್ಷಪ್ಪ, ಎಸ್.ವಿ.ರಾಮಚಂದ್ರ, ಎಚ್.ಪಿ.ರಾಜೇಶ, ಪ್ರೊ.ಎನ್.ಲಿಂಗಣ್ಣ, ಎಂ.ಬಸವರಾಜ ನಾಯ್ಕ, ಮಾಜಿ ಶಾಸಕರಾದ ಜೆಡಿಎಸ್ ಮುಖಂಡ ಎಚ್.ಎಸ್.ಶಿವಶಂಕರ, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಚಿದಾನಂದಪ್ಪ, ಬಿಜೆಪಿ ಮುಖಂಡರಾದ ಮಾಡಾಳ ಮಲ್ಲಿಕಾರ್ಜುನ, ತುಮ್ಕೋಸ್ ಶಿವಕುಮಾರ, ಜಿ.ಎಸ್.ಅನಿತಕುಮಾರ ಸೇರಿ ಅನೇಕರು ಭಾಗವಹಿಸುವರು.
ಪಕ್ಷದ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಟಿ.ಶ್ರೀನಿವಾಸ ದಾಸಕರಿಯಪ್ಪ, ಓಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ, ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಕೊಳೇನಹಳ್ಳಿ, ಎಚ್.ಎನ್.ಶಿವಕುಮಾರ, ಗೋವಿಂದರಾಜ, ದಂಡಪಾಣಿ, ಟಿಂಕರ್ ಮಂಜಣ್ಣ ಇತರರು ಇದ್ದರು.
- ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಹೇಳಿಕೆಗೆ ಯಶವಂತರಾವ್ ಪ್ರತಿಕ್ರಿಯೆ
ನಗರದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2019ರ ಲೋಕಸಭೆ ಚುನಾವಣೆಯಲ್ಲಿ ಪುಲ್ವಾಮಾ ದಾಳಿ, ಸರ್ಜಿಕಲ್ ಸ್ಟ್ರೈಕ್ ಹೆಸರಿನಲ್ಲಿ ಬಿಜೆಪಿ ಗೆದ್ದಿತೆಂದು, ತಾನು ಹರಕೆ ಕುರಿ ಆಗಲಿಲ್ಲವೆಂದು ಆಗಿನ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಚ್.ಬಿ.ಮಂಜಪ್ಪ ಹೇಳಿಕೆ ನೀಡಿದ್ದಾರೆ. ಪಕ್ಷ ಬೇಧ ಹೊರತುಪಡಿಸಿ, ನಮ್ಮಿಬ್ಬರ ಪ್ರೀತಿ, ವಿಶ್ವಾಸ ಕಡಿಮೆ ಇಲ್ಲ. ನಾನು ನನ್ನ ಪಕ್ಷದ ತತ್ವ ಸಿದ್ಧಾಂತಕ್ಕೆ ಬದ್ಧ, ಮಂಜಪ್ಪ ತಮ್ಮ ಪಕ್ಷದ ತತ್ವ ಸಿದ್ಧಾಂತಕ್ಕೆ ಬದ್ಧರಿದ್ದಾರೆ ಎಂದರು.
ಬಿಜೆಪಿ ನನಗೆ ಟಿಕೆಟ್ ನೀಡಿದಾಗ ನಮ್ಮ ಪಕ್ಷದ ನಾಯಕರ ಪೈಕಿ ಯಾರೂ ನನಗೆ ಕುತ್ತಿಗೆ ಕೊಯ್ಯಲಿಲ್ಲ. 1996ರಿಂದ ಕಾಂಗ್ರೆಸ್ ಇತಿಹಾಸ ನೋಡಿ, ದುಡ್ಡಿದ್ದವರಿಗೆ ಟಿಕೆಟ್ ನೀಡಿದೆ. ಆದರೆ, ಚನ್ನಯ್ಯ ಒಡೆಯರ್ಗೆ ಇದೇ ಕಾಂಗ್ರೆಸ್ ನಾಯಕರು ಏನು ಮಾಡಿದ್ದರೆಂಬ ಬಗ್ಗೆ ಮಂಜಪ್ಪ ಆಲೋಚಿಸಲಿ. ಈಗ ಕಾಂಗ್ರೆಸ್ ನಾಯಕರು ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರನ್ನು ಸೆಳೆಯುತ್ತಿದ್ದು, ಇದೇ ಕೆಲಸ ಮಂಜಪ್ಪ ಸ್ಪರ್ಧಿಸಿದ್ದ ವೇಳೆ ಯಾಕೆ ಮಾಡಲಿಲ್ಲ? ಆದರೆ, ಮೂಲವ್ಯಾಧಿಗೆ ಆಪರೇಷನ್ ಆಗಿ, ತೀವ್ರ ನೋವುಂಡರೂ ಹೇಳಿಕೊಳ್ಳಲಾಗದ ಸ್ಥಿತಿ ಎಚ್.ಬಿ.ಮಂಜಪ್ಪನವರದ್ದು ಎಂದು ಹೇಳಿದರು.