ಗೀತಧಾರೆ- ಸಂಗೀತದ ಸುಧೆ ಹರಿಸಿದ ಗಾಯಕರು...

KannadaprabhaNewsNetwork |  
Published : Aug 20, 2024, 12:55 AM IST
39 | Kannada Prabha

ಸಾರಾಂಶ

ಹವ್ಯಾಸಿ ಸುಗಮ ಸಂಗೀತ ಗಾಯಕರಿಗೆ ಆತ್ಮವಿಶ್ವಾಸ ತುಂಬುವ ಉದ್ದೇಶದಿಂದ ಮೈಸೂರು ಘಟಕದ ವತಿಯಿಂದ ಆಯೋಜಿಸಿದ್ದ 2 ದಿನದ ಸಾರ್ವಜನಿಕ ವೇದಿಕೆ ಕಾರ್ಯಕ್ರಮದಲ್ಲಿ ಸುಮಾರು 48 ಮಂದಿ ಹವ್ಯಾಸಿ ಗಾಯಕರು ತಮ್ಮ ಪ್ರತಿಭೆಯನ್ನು ಅತ್ಯುತ್ತಮವಾಗಿ ಪ್ರದರ್ಶಿಸಿದರು.

ಕನ್ನಡಪ್ರಭ ವಾರ್ತೆ ಮೈಸೂರು

ಕರ್ನಾಟಕ ಸುಗಮ ಸಂಗೀತ ಪರಿಷತ್ ನ ಮೈಸೂರು ಘಟಕವು ದಸರಾ ವಸ್ತು ಪ್ರದರ್ಶನದ ಆವರಣದಲ್ಲಿ ನೆಡೆಯುತ್ತಿರುವ ಸುವರ್ಣ ಕರ್ನಾಟಕ ಸಂಭ್ರಮ ವಸ್ತು ಪ್ರದರ್ಶನದ ಸಾಂಸ್ಕೃತಿಕ ವೇದಿಕೆಯಲ್ಲಿ ಹವ್ಯಾಸಿ ಸುಗಮ ಸಂಗೀತ ಗಾಯಕರಿಗೆ ಆಯೋಜಿಸಿದ್ದ 2 ದಿನದ ‘ಗೀತಧಾರೆ’ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಪರಿಷತ್ ಮೈಸೂರು ಘಟಕದ ಅಧ್ಯಕ್ಷ ನಾಗರಾಜ್ ಬೈರಿ ಅಧ್ಯಕ್ಷತೆ ವಹಿಸಿದ್ದರು. ಹವ್ಯಾಸಿ ಸುಗಮ ಸಂಗೀತ ಗಾಯಕರಿಗೆ ಆತ್ಮವಿಶ್ವಾಸ ತುಂಬುವ ಉದ್ದೇಶದಿಂದ ಮೈಸೂರು ಘಟಕದ ವತಿಯಿಂದ ಆಯೋಜಿಸಿದ್ದ 2 ದಿನದ ಸಾರ್ವಜನಿಕ ವೇದಿಕೆ ಕಾರ್ಯಕ್ರಮದಲ್ಲಿ ಸುಮಾರು 48 ಮಂದಿ ಹವ್ಯಾಸಿ ಗಾಯಕರು ತಮ್ಮ ಪ್ರತಿಭೆಯನ್ನು ಅತ್ಯುತ್ತಮವಾಗಿ ಪ್ರದರ್ಶಿಸಿದರು.

ಸುಮಾರು 120 ಮಂದಿ ಗಾಯಕರನ್ನು ಹೂಟಗಳ್ಳಿಯ ಅನಂತೇಶ್ವರ ಭವನದಲ್ಲಿ ಆಡಿಷನ್ ಮೂಲಕ ಆಯ್ಕೆ ಮಾಡಲಾಗಿತ್ತು. ಮೊದಲನೇ ದಿನದ ಮುಖ್ಯ ಅತಿಥಿಯಾಗಿದ್ದ ಕೆ.ಆರ್. ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಮಾತನಾಡಿ, ಸುಗಮ ಸಂಗೀತ ಪರಿಷತ್ ಮೈಸೂರು ಘಟಕದ ಈ ಅರ್ಥಪೂರ್ಣ ಕಾರ್ಯಕ್ರಮ ಶ್ಲಾಘಿಸಿ 48 ಮಂದಿ ಹವ್ಯಾಸಿ ಗಾಯಕರಿಗೆ ವೇದಿಕೆ ಒದಗಿಸಿಕೊಡುವ ಮೂಲಕ ಅವರಿಗೆ ಆತ್ಮವಿಶ್ವಾಸ ತುಂಬಿದ್ದೀರಿ ಎಂದರು.

ಮುಂದಿನ ದಸರಾ ವಸ್ತು ಪ್ರದರ್ಶನದಲ್ಲಿ ಪರಿಷತ್ ನ ಕಾರ್ಯಕ್ರಮಗಳಿಗೆ ಅವಕಾಶ ಮಾಡಿಕೊಡುವುದಾಗಿ ಭರವಸೆ ನೀಡಿದರು. ಮುಂದಿನ ವರ್ಷದ ಈ ರೀತಿ ಕಾರ್ಯಕ್ರಮಗಳಲ್ಲಿ ಹೆಸರಾಂತ ಸಂಗೀತ ನಿರ್ದೇಶಕರನ್ನು ಆಹ್ವಾನಿಸಲು ಸಲಹೆ ನೀಡಿದರು.

ಎರಡನೇ ದಿನ ಮುಖ್ಯ ಅತಿಥಿಯಾಗಿದ್ದ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿ, ಮೈಸೂರು ಸುಗಮ ಸಂಗೀತ ಪರಿಷತ್ ಘಟಕವು ಅದರ ಅಧ್ಯಕ್ಷರಾದ ನಾಗರಾಜ್ ಬೈರಿ ಅವರ ನೇತೃತ್ವದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಬೇರೆ ಬೇರೆ ಜಿಲ್ಲೆಯಿಂದಲೂ ಆಕರ್ಷಸಿ 48 ಮಂದಿ ಹವ್ಯಾಸಿ ಗಾಯಕರಿಗೆ ಸಾರ್ವಜನಿಕ ವೇದಿಕೆ ಒದಗಿಸಿಕೊಟ್ಟಿರುವುದು ಹಾಗೂ ಶಿಬಿರ ನಡೆಸಿ 150 ಜನರಿಗೆ ಸಂಗೀತ ಕಳಿಸಿಕೊಟ್ಟಿರಿವುದು ಮೈಸೂರು ಘಟಕದ ಅರ್ಥಪೂರ್ಣ ಕಾರ್ಯವಾಗಿದೆ ಎಂದು ಶ್ಲಾಘಿಸಿದರು.

ಪರಿಷತ್ ನ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ್ ವಿ. ಬೈರಿ ಮಾತನಾಡಿ ಪರಿಷತ್ ನ ಉದ್ದೇಶವಾದ ಸುಗಮ ಸಂಗೀತ ಕ್ಷೇತ್ರದ ಬೆಳವಣಿಗೆ ದೃಷ್ಟಿಯಿಂದ, ಪ್ರಾರಂಭವಾದ ಕೇವಲ ಎಂಟು ತಿಂಗಳಲ್ಲಿ ಮೈಸೂರು ಘಟಕವು ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಕೊಟ್ಟಿದ್ದು, ಅವುಗಳಲ್ಲಿ ಗೀತೋತ್ಸವ, ಜೋಗದ ಸಿರಿ ಬೆಳಕಿನಲ್ಲಿ, ಸುಗಮ ಸಂಗೀತ ಕಲಿಕಾ ಶಿಬಿರ ಹಾಗೂ ಕವಿಯ ನೋಡಿ ಕವಿತೆ ಕೇಳಿ ಮುಖ್ಯವಾದುದು ಎಂದರು.

ಈಗ 48 ಮಂದಿ ಹವ್ಯಾಸಿ ಗಾಯಕರಿಗೆ ಗೀತಧಾರೆ ಮೂಲಕ ವೇದಿಕೆ ಒದಗಿಸಲಾಗಿದ್ದು ಸುಗಮ ಸಂಗೀತ ಕ್ಷೇತ್ರದ ಅಭಿವೃದ್ಧಿಗೆ ಆಹರ್ನಿಷಿ ದುಡಿಯುತಿದೆ ಎಂದರು.

ಈ ಎರಡು ದಿನದ ಕಾರ್ಯಕ್ರಮದಲ್ಲಿ ಮೈಸೂರಿನ ಖ್ಯಾತ ಕವಿ ಜಯಪ್ಪ ಹೊನ್ನಾಳಿ, ಡಾ.ವೈ.ಡಿ. ರಾಜಣ್ಣ, ಆಡಿಷನ್ ನ ತೀರ್ಪುಗಾರರಾಗಿದ್ದ ಡೇವಿಡ್ ಪ್ರತಿಭಾಂಜಲಿ, ಪ್ರೊ.ಎ.ಡಿ. ಶ್ರೀನಿವಾಸ್, ರಾಜೇಶ್ ಪಡಿಯಾರ್, ಇಂದ್ರಾಣಿ ಅನಂತರಾಮ್, ರಶ್ಮಿ ಚಿಕ್ಕಮಗಳೂರು ಅವರು ಭಾಗವಹಿಸಿ ಹಾವ್ಯಾಸಿ ಗಾಯಕರಿಗೆ ಸ್ಪೂರ್ತಿ ತುಂಬಿದರು. ವಾದ್ಯದಲ್ಲಿ ಕೀಬೋರ್ಡ್ ಗಣೇಶ್ ಭಟ್, ಇಂದು ಶೇಖರ್ ತಬಲದಲ್ಲಿ, ಪ್ರದೀಪ್ ಗಿಟಾರ್ ನಲ್ಲಿ ಹಾಗೂ ಕಿರಣ್ ರಿದಂ ಪ್ಯಾಡ್ ನುಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಅಜಯ್ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ನ. ಗಂಗಾಧರಪ್ಪ, ಕಾರ್ಯದರ್ಶಿ ಸಿರಿಬಾಲು, ಮಾಧ್ಯಮ ಸಲಹೆಗಾರ ಎನ್. ಬೆಟ್ಟೇಗೌಡ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಲ್ಲಿ ಲಾಲ್‌ಬಾಗ್‌ ಮಾದರಿಯಲ್ಲಿ ಮತ್ತೆರಡು ಪಾರ್ಕ್‌ ನಿರ್ಮಾಣ: ಡಿ.ಕೆ.ಶಿವಕುಮಾರ್
ಸಂಕ್ರಾಂತಿ: ಇಂದು ಗವಿಗಂಗಾಧರನಿಗೆ ಸೂರ್ಯರಶ್ಮಿ ಸ್ಪರ್ಶ