ಗೀತಾನ್ವೇಷಣೆ ನಮ್ಮ ಪ್ರಧಾನ ಗುರಿ: ಪರ್ಯಾಯ ಶ್ರೀ

KannadaprabhaNewsNetwork |  
Published : Jul 09, 2024, 12:45 AM IST
ಗೀತಾ7 | Kannada Prabha

ಸಾರಾಂಶ

ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ವಿಶ್ವ ಗೀತಾ ಪರ್ಯಾಯದ ಅವಧಿಯಲ್ಲಿ ಹಮ್ಮಿಕೊಂಡಿರುವ ಜ್ಞಾನ ಯಜ್ಞದ ಅಂಗವಾಗಿ ಭಗವದ್ಗೀತಾ ಪಾಠವನ್ನು ಭಾನುವಾರ ಸರ್ವಜ್ಞ ಪೀಠದಿಂದ ಪ್ರಾರಂಭಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ವಿಶ್ವ ಗೀತಾ ಪರ್ಯಾಯದ ಅವಧಿಯಲ್ಲಿ ಹಮ್ಮಿಕೊಂಡಿರುವ ಜ್ಞಾನ ಯಜ್ಞದ ಅಂಗವಾಗಿ ಭಗವದ್ಗೀತಾ ಪಾಠವನ್ನು ಭಾನುವಾರ ಸರ್ವಜ್ಞ ಪೀಠದಿಂದ ಪ್ರಾರಂಭಿಸಿದರು.

ಈ ಸಂದರ್ಭ ಆಶೀರ್ವಚನ ನೀಡಿದ ಶ್ರೀಗಳು, ಈಗಾಗಲೇ ಶ್ರೀಕೃಷ್ಣನಿಗೆ ಗೀತಾಧ್ಯಾಯ ಭಾವ ಪರಿಚಯ ಕೃತಿಯನ್ನು ಸಮರ್ಪಿಸಿರುವ ನಾವು, ಗೀತಾನ್ವೇಷಣೆಯ ಸಂಕಲ್ಪವನ್ನು ಮಾಡಿದ್ದೇವೆ. ನೈಜವಾದ ಗೀತಾಸ್ವರೂಪವನ್ನು ಸಜ್ಜನರಿಗೆ ತಲುಪಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ ಗೀತಾಪಾಠ - ಪ್ರವಚನವನ್ನು ಪ್ರಾರಂಭಿಸುತ್ತಿದ್ದೇವೆ ಎಂದರು ತಿಳಿಸಿದರು.

ಶ್ರೀ ಮಧ್ವಾಚಾರ್ಯರು ಕರುಣಿಸಿರುವ ಭಾಷ್ಯದ ನೆರಳಲ್ಲಿ ಹೊಸ ದೃಷ್ಟಿಕೋನದಿಂದ ವಿಮರ್ಶಾತ್ಮಕವಾದ ಪಾಠವನ್ನು ‌ಸಂಕಲ್ಪಿಸಿದ್ದೇವೆ. ಶ್ರೀಕೃಷ್ಣನು ಗೀತೆಯಲ್ಲಿ ತಿಳಿಸಿದಂತೆ ಗೀತೆಯ ಉಪದೇಶವನ್ನು ಮೊದಲು ಸ್ವೀಕರಿಸಿದವನು ಸೂರ್ಯ. ‘ಇಮಂ ವಿವಸ್ವತೇ ಯೋಗಂ ಪ್ರೋಕ್ತವಾನಹಮವ್ಯಯಂ’ ಎಂದು. ಅದಕ್ಕೆ ಸಂವಾದಿ ಎಂಬಂತೆ ಪಾಠದ ಮೊದಲ ದಿನವೇ ಶ್ರೀಕೃಷ್ಣ ‘ಸೂರ್ಯ ಪಾರ್ಥಸಾರಥಿ’ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾನೆ. ಆದ್ದರಿಂದ ಶ್ರೀಕೃಷ್ಣನ ಪರಮಾನುಗ್ರಹದಿಂದ ಪಾಠವು ನಿರ್ವಿಘ್ನವಾಗಿ ನಡೆಯಲಿ ಎಂದು ಶ್ರೀಪಾದರು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಕಿರಿಯ ಪಟ್ಟದ ಶ್ರೀ ಸುಶ್ರೀಂದ್ರತೀರ್ಥಶ್ರೀಪಾದರು ಉಪಸ್ಥಿತರಿದ್ದರು. ಶತಾವಧಾನಿಗಳಾದ ಉಡುಪಿ ರಾಮನಾಥ ಆಚಾರ್ಯ, ಡಾ. ಬಿ.ಗೋಪಾಲಾಚಾರ್ಯ, ವಿದ್ವಾನ್ ವೇದವ್ಯಾಸ ಪುರಾಣಿಕ್ ಮೊದಲಾದವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇಶ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ತರ
ತ್ಯಾಜ್ಯ ವಿಲೇವಾರಿ ಘಟಕ ತೆರವಿಗೆ ಆಗ್ರಹ