ಕನ್ನಡಪ್ರಭ ವಾರ್ತೆ ಉಡುಪಿ
ಈ ಸಂದರ್ಭ ಆಶೀರ್ವಚನ ನೀಡಿದ ಶ್ರೀಗಳು, ಈಗಾಗಲೇ ಶ್ರೀಕೃಷ್ಣನಿಗೆ ಗೀತಾಧ್ಯಾಯ ಭಾವ ಪರಿಚಯ ಕೃತಿಯನ್ನು ಸಮರ್ಪಿಸಿರುವ ನಾವು, ಗೀತಾನ್ವೇಷಣೆಯ ಸಂಕಲ್ಪವನ್ನು ಮಾಡಿದ್ದೇವೆ. ನೈಜವಾದ ಗೀತಾಸ್ವರೂಪವನ್ನು ಸಜ್ಜನರಿಗೆ ತಲುಪಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ ಗೀತಾಪಾಠ - ಪ್ರವಚನವನ್ನು ಪ್ರಾರಂಭಿಸುತ್ತಿದ್ದೇವೆ ಎಂದರು ತಿಳಿಸಿದರು.
ಶ್ರೀ ಮಧ್ವಾಚಾರ್ಯರು ಕರುಣಿಸಿರುವ ಭಾಷ್ಯದ ನೆರಳಲ್ಲಿ ಹೊಸ ದೃಷ್ಟಿಕೋನದಿಂದ ವಿಮರ್ಶಾತ್ಮಕವಾದ ಪಾಠವನ್ನು ಸಂಕಲ್ಪಿಸಿದ್ದೇವೆ. ಶ್ರೀಕೃಷ್ಣನು ಗೀತೆಯಲ್ಲಿ ತಿಳಿಸಿದಂತೆ ಗೀತೆಯ ಉಪದೇಶವನ್ನು ಮೊದಲು ಸ್ವೀಕರಿಸಿದವನು ಸೂರ್ಯ. ‘ಇಮಂ ವಿವಸ್ವತೇ ಯೋಗಂ ಪ್ರೋಕ್ತವಾನಹಮವ್ಯಯಂ’ ಎಂದು. ಅದಕ್ಕೆ ಸಂವಾದಿ ಎಂಬಂತೆ ಪಾಠದ ಮೊದಲ ದಿನವೇ ಶ್ರೀಕೃಷ್ಣ ‘ಸೂರ್ಯ ಪಾರ್ಥಸಾರಥಿ’ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾನೆ. ಆದ್ದರಿಂದ ಶ್ರೀಕೃಷ್ಣನ ಪರಮಾನುಗ್ರಹದಿಂದ ಪಾಠವು ನಿರ್ವಿಘ್ನವಾಗಿ ನಡೆಯಲಿ ಎಂದು ಶ್ರೀಪಾದರು ಪ್ರಾರ್ಥಿಸಿದರು.ಈ ಸಂದರ್ಭದಲ್ಲಿ ಕಿರಿಯ ಪಟ್ಟದ ಶ್ರೀ ಸುಶ್ರೀಂದ್ರತೀರ್ಥಶ್ರೀಪಾದರು ಉಪಸ್ಥಿತರಿದ್ದರು. ಶತಾವಧಾನಿಗಳಾದ ಉಡುಪಿ ರಾಮನಾಥ ಆಚಾರ್ಯ, ಡಾ. ಬಿ.ಗೋಪಾಲಾಚಾರ್ಯ, ವಿದ್ವಾನ್ ವೇದವ್ಯಾಸ ಪುರಾಣಿಕ್ ಮೊದಲಾದವರು ಭಾಗವಹಿಸಿದ್ದರು.