ಜಿಲೆಟಿನ್‌ ಕಡ್ಡಿ ಪತ್ತೆ ಭಾರೀ ಭದ್ರತಾ ಲೋಪ: ಬಿವೈವಿ

KannadaprabhaNewsNetwork |  
Published : May 11, 2026, 03:45 AM IST
ಬದ್ಧತೆಯಿಂದ ಕೆಲಸ ಮಾಡಿ ಸಕಾಲಕ್ಕೆ ಪ್ರಗತಿ ಸಾಧಿಸಿ ಜಿಪಂ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ | Kannada Prabha

ಸಾರಾಂಶ

ದೇಶದ ಪ್ರಧಾನಿಗಳ ನಿಗದಿತ ಸಂಚಾರದ ರಸ್ತೆಯಲ್ಲೇ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ಗಂಭೀರ ಭದ್ರತಾ ಲೋಪ ಮಾತ್ರವಲ್ಲ, ರಾಜ್ಯದ ಕಾಂಗ್ರೆಸ್ ಸರ್ಕಾರದ ಗಂಭೀರ ವೈಫಲ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ದೇಶದ ಪ್ರಧಾನಿಗಳ ನಿಗದಿತ ಸಂಚಾರದ ರಸ್ತೆಯಲ್ಲೇ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ಗಂಭೀರ ಭದ್ರತಾ ಲೋಪ ಮಾತ್ರವಲ್ಲ, ರಾಜ್ಯದ ಕಾಂಗ್ರೆಸ್ ಸರ್ಕಾರದ ಗಂಭೀರ ವೈಫಲ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಆಳ್ವಿಕೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಮತ್ತು ಭದ್ರತೆ ಸಂಪೂರ್ಣ ಕುಸಿದಿದೆ. ಗರಿಷ್ಠ ಭದ್ರತೆ ನೀಡಬೇಕಾದ ದೇಶದ ಪ್ರಧಾನಮಂತ್ರಿ ಅವರ ಸುರಕ್ಷತೆ ವಿಷಯದಲ್ಲಿ ಕಿಂಚಿತ್ ಲೋಪಕ್ಕೂ ಅವಕಾಶ ನೀಡಬಾರದು ಎಂದಿದ್ದಾರೆ.

ಇಂತಹ ಸೂಕ್ಷ್ಮ, ಗಂಭೀರ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಶೀಘ್ರದಲ್ಲೇ ಕೂಲಂಕಷ ತನಿಖೆ ನಡೆಸಿ, ಕೃತ್ಯದ ಹಿಂದಿನ ದುಷ್ಕರ್ಮಿಗಳನ್ನು ಪತ್ತೆ ಮಾಡಿ ಶಿಕ್ಷಿಸಬೇಕು. ಜೊತೆಗೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸೇವಾ ಕಾರ್‍ಯದಲ್ಲಿ ರೋಟರಿ ಪ್ರಮುಖ ಪಾತ್ರ: ರಾಮಕೃಷ್ಣ
ಬಿಸಿಲಾಘಾತ: ಕಾಫಿ, ಕಾಳುಮೆಣಸು ಕೃಷಿಕರಿಗೆ ಆತಂಕ