ಉತ್ತಮ ಶಿಕ್ಷಣ ಪಡೆದು ಹೆತ್ತವರ ಗೌರವ ಉಳಿಸಿ

KannadaprabhaNewsNetwork |  
Published : Jul 14, 2026, 02:30 AM IST
ಹೂವಿನಹಡಗಲಿ ತಾಲೂಕಿನ ಹೊಳಲು ಸಾಧನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರೇರಣಾ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಹಿತಿ ಇಸ್ಮಾಯಿಲ್‌ ಎಲಿಗಾರ. | Kannada Prabha

ಸಾರಾಂಶ

ಬಹುತೇಕ ವಿಜ್ಞಾನಿಗಳು, ಸಾಹಿತಿಗಳು, ಹೋರಾಟಗಾರರು, ಸಮಾಜ ಸುಧಾರಕರು ತಮ್ಮ ನೆಲದ ಮಾತೃ ಭಾಷೆಯಲ್ಲಿ ಶಿಕ್ಷಣ ಪಡೆದು ಸಾಧಕರಾಗಿ ಹೊರ ಹೊಮ್ಮಿದ್ದಾರೆ.

ಹೂವಿನಹಡಗಲಿ: ನಿಮಗೆ ಜನ್ಮ ನೀಡಿ ತಮ್ಮ ಬೆವರಿನ ಹಣದಿಂದ ಉತ್ತಮ ಶಿಕ್ಷಣ ಕೊಡಿಸುತ್ತಿರುವ ಹೆತ್ತವರ ಋಣ ತೀರಿಸಿ ಗೌರವ ಹೆಚ್ಚಿಸಬೇಕೆಂದು ಸಾಹಿತಿ ಇಸ್ಮಾಯಿಲ್ ಯಲಿಗಾರ ಹೇಳಿದರು.ತಾಲೂಕಿನ ಹೊಳಲು ಗ್ರಾಮದ ಸಾಧನಾ ಸಿಬಿಎಸ್ಸಿ ಶಾಲೆಯಲ್ಲಿ ಆಡಳಿತ ಮಂಡಳಿಯಿಂದ ಆಯೋಜಿಸಿದ್ದ ಪ್ರೇರಣಾ ವಿಚಾರ ಸಂಕಿರಣದಲ್ಲಿ ಶಾಲಾ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಕುರಿತು ಮಾತನಾಡಿದರು.

ಬಹುತೇಕ ವಿಜ್ಞಾನಿಗಳು, ಸಾಹಿತಿಗಳು, ಹೋರಾಟಗಾರರು, ಸಮಾಜ ಸುಧಾರಕರು ತಮ್ಮ ನೆಲದ ಮಾತೃ ಭಾಷೆಯಲ್ಲಿ ಶಿಕ್ಷಣ ಪಡೆದು ಸಾಧಕರಾಗಿ ಹೊರ ಹೊಮ್ಮಿದ್ದಾರೆ. ಈ ನೆಲದ ಕನ್ನಡ ಭಾಷೆ ಸಾಹಿತ್ಯವನ್ನು ಹೆಚ್ಚು ಓದಿ ಜ್ಞಾನ ಪಡೆದುಕೊಂಡು ಕನ್ನಡ ತಾಯಿ ಸೇವೆ ಮಾಡಬೇಕೆಂದು ತಿಳಿಸಿದರು.

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಸದುದ್ದೇಶದಿಂದ ಪೂಜಾರ್ ಮನೆತನದವರು ವಿದ್ಯಾ ಸಂಸ್ಥೆ ಕಟ್ಟಿ ಬೆಳೆಸಿದ್ದಾರೆ. ಒಂದು ಸಾಧಾರಣ ಹೋಬಳಿಯಲ್ಲಿ ಸಿಬಿಎಸ್ಸಿ ಶಾಲೆ ತೆರೆದು ಪಟ್ಟಣ ಪ್ರದೇಶದಲ್ಲಿ ದೊರೆಯುವ ಎಲ್ಲ ಶೈಕ್ಷಣಿಕ ಸೌಲಭ್ಯಗಳನ್ನು ನಿಮಗೆ ನೀಡುತ್ತಿರುವುದು ಶ್ಲಾಘನೀಯ ಸೇವೆ ಎಂದು ಪ್ರಶಂಸಿಸಿದರು.

ದಿನಪತ್ರಿಕೆ, ನಿಯತಕಾಲಿಕೆಗಳನ್ನು ಪ್ರತಿನಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ. ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಗಳಿಸಲು ಸತತ ಅಧ್ಯಯನ ಮಾಡಬೇಕು. ದೇಶ, ವಿದೇಶ, ಕ್ರೀಡೆ, ಸಾಹಿತ್ಯ, ರಂಗಭೂಮಿ ಮೊದಲಾದ ವಿಷಯಗಳ ಕುರಿತು ಆಸಕ್ತಿ ಬೆಳೆಸಿಕೊಳ್ಳಲು ಸಲಹೆ ನೀಡಿದರು.

ಗಾಂಧೀಜಿ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ಸ್ವಾಮಿ ವಿವೇಕಾನಂದ, ಚಾರ್ಲಿ ಚಾಪ್ಲಿನ್ ಮೊದಲಾದ ಮಹಾನ್ ನಾಯಕರು ಕಡು ಬಡತನದಲ್ಲಿ ಹುಟ್ಟಿ ಬೆಳೆದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಅವರ ನಡೆ-ನುಡಿ ಅನುಸರಿಸಿದರೆ ಸಾಧನೆ ಮಾಡಿಲು ಸ್ಫೂರ್ತಿ ಸಿಗುತ್ತದೆ ಎಂದರು.

ಶೈಕ್ಷಣಿಕ ಶ್ರೇಷ್ಠತೆಗಾಗಿ ತಂತ್ರಗಳು ಮತ್ತು ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಸಹಯೋಗದ ಮಹತ್ವವನ್ನು ಚಿಕ್ಕ ಪುಟ್ಟ ಕಥನಗಳ ಮೂಲಕ ವಿವರಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಬಿ.ಕೋಟೆಪ್ಪ, ಪ್ರಾಂಶುಪಾಲ ಬಿ.ಪ್ರಶಾಂತಗೌಡ, ಶಿಕ್ಷಕ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಿಟಲ್ ಸ್ಕಾಲರ್ಸ್ ಅಕಾಡೆಮಿ: ನೋಟ್ ಬುಕ್ ವಿತರಣೆ
ಸಾರ್ವಜನಿಕರ ಸಹಭಾಗಿತ್ವ ಇಲ್ಲದಿದ್ದರೇ ನಿರೀಕ್ಷಿತ ಗುರಿ ತಲುಪಲು ಸಾಧ್ಯವಿಲ್ಲ