ರಟ್ಟೀಹಳ್ಳಿ: ಪಟ್ಟಣದ ಪ್ರತಿಯೊಬ್ಬರೂ ತಮ್ಮ ಭವಿಷ್ಯದ ಭದ್ರತೆಗೆ ಹಾಗೂ ನೆಮ್ಮದಿಗೆ ತಮ್ಮ ಸ್ವತ್ತುಗಳನ್ನು ಇ-ಖಾತಾ ಮಾಡಿಸಿಕೊಳ್ಳಬೇಕು ಎಂದು ಹಿರೇಕೆರೂರು ಉಪ ನೋಂದಣಾಧಿಕಾರಿ ವಿಶ್ವನಾಥ ಜೆ.ಕೆ. ಮನವಿ ಮಾಡಿದರು.
ಪಪಂ ಮುಖ್ಯಾಧಿಕಾರಿ ಸಂತೋಷ ಚಂದ್ರಕೇರ ಮಾತನಾಡಿ, ಪಟ್ಟಣದ ಜನತೆಗಾಗಿ ಪಪಂ ಸಿಬ್ಬಂದಿ ತಮ್ಮ ಸ್ವತ್ತುಗಳಿಗೆ ಇ-ಖಾತೆ ಮಾಡಿಸಿಕೊಳ್ಳಲು ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದರು.
ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಕಾವೇರಿ-2 ಇ ಆಸ್ತಿ ಸೆ. 23ರಿಂದ ಪ್ರಾರಂಭವಾಗುತ್ತಿದ್ದು, ಸಾರ್ವಜನಿಕರು ತಮ್ಮ ಸ್ವತ್ತಿಗೆ ಇ-ಆಸ್ತಿ ಖಾತಾ (ಪಿ.ಐ.ಡಿ. ನಂ.) ಖಚಿತಪಡಿಸಿಕೊಳ್ಳಬೇಕು. ನೋಂದಣಿ ವೇಳೆ, ಸ್ವತ್ತಿಗೆ ಸಂಬಂಧಿಸಿದ ಗುರುತಿನ ಮಾಹಿತಿಯನ್ನು ಇ-ಆಸ್ತಿ ತಂತ್ರಾಂಶದಿಂದ ಮಾತ್ರ ಪಡೆದುಕೊಳ್ಳಬಹುದು. ಭೌತಿಕ ಖಾತಾಗಳನ್ನು ನೋಂದಣಿಗೆ ಪರಿಗಣಿಸುವುದಿಲ್ಲ. ತಂತ್ರಾಂಶಗಳ ಸಂಯೋಜನಾ ವಿಧಾನ ಹೊರತುಪಡಿಸಿ ಬೇರೆ ಯಾವುದೇ ವಿಧಾನದಿಂದ ನೋಂದಣಿ ಮಾಡಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಪಪಂ ಸಿಬ್ಬಂದಿಯನ್ನು ಸಂಪರ್ಕಿಸಬಹುದು ಎಂದರು.ಇದೇ ಸಂದರ್ಭದಲ್ಲಿ ಸೈಕಲ್ಗಾರ, ರಾಜಕುಮಾರ ಹೇಂದ್ರೆ, ಪರಮೇಶಪ್ಪ ಅಂತರವಳ್ಳಿ, ಮಂಜು ಸುಣಗಾರ, ಬಸಣ್ಣ ಕವಲೇತ್ತು, ಸಂತೋಷ ಬಿಳಚಿ, ಗಣೇಶಪ್ಪ ಒಂಟಿಗೇರ ಮುಂತಾದವರು ಇದ್ದರು.