ಪತ್ರಿಕಾ ವಿತರಕರ ಇ-ಶ್ರಮ್‌ ಕಾರ್ಡ್ ಪಡೆದುಕೊಳ್ಳಿ: ಶಿವಮಾದು

KannadaprabhaNewsNetwork |  
Published : Jan 22, 2024, 02:24 AM IST
ಪೊಟೋ೨೧ಸಿಪಿಟಿ೮: ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕಿನ ಪತ್ರಿಕಾ ವಿತರಕರಿಗೆ ಇ-ಶ್ರಮ್ ಕಾರ್ಡ್ ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳಿಗೆ ನೋಂದಣಿ ಕಾರ್ಯ ನಡೆಯಿತು. | Kannada Prabha

ಸಾರಾಂಶ

ಚನ್ನಪಟ್ಟಣ: ಕಾರ್ಮಿಕ ಇಲಾಖೆ ಅಸಂಘಟಿತ ವಲಯದ ಪತ್ರಿಕಾ ವಿತರಕರಿಗೆ ಕೊಡ ಮಾಡುವ ಇ-ಶ್ರಮ್‌ ಕಾರ್ಡ್‌ಗಳನ್ನು ಜಿಲ್ಲೆಯ ಎಲ್ಲಾ ಪತ್ರಿಕಾ ವಿತರಕರು ಪಡೆದುಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಎಂ.ಶಿವಮಾದು ಸಲಹೆ ನೀಡಿದರು.

ಚನ್ನಪಟ್ಟಣ: ಕಾರ್ಮಿಕ ಇಲಾಖೆ ಅಸಂಘಟಿತ ವಲಯದ ಪತ್ರಿಕಾ ವಿತರಕರಿಗೆ ಕೊಡ ಮಾಡುವ ಇ-ಶ್ರಮ್‌ ಕಾರ್ಡ್‌ಗಳನ್ನು ಜಿಲ್ಲೆಯ ಎಲ್ಲಾ ಪತ್ರಿಕಾ ವಿತರಕರು ಪಡೆದುಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಎಂ.ಶಿವಮಾದು ಸಲಹೆ ನೀಡಿದರು.

ಪಟ್ಟಣದಲ್ಲಿ ಕಾರ್ಮಿಕ ಇಲಾಖೆ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ತಾಲೂಕಿನ ಪತ್ರಿಕಾ ವಿತರಕರಿಗೆ ಇ-ಶ್ರಮ್‌ ಕಾರ್ಡ್ ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳಿಗೆ ನೋಂದಣಿ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಈಗಾಗಲೇ ರಾಮನಗರ ಹಾಗೂ ಚನ್ನಪಟ್ಟಣ ತಾಲೂಕಿನ ಪತ್ರಿಕಾ ವಿತರಕರ ಕಾರ್ಡ್‌ಗಳ ನೋಂದಣಿಗೆ ಚಾಲನೆ ನೀಡಲಾಗಿದೆ. ಜಿಲ್ಲೆಯ ಇನ್ನುಳಿದ ತಾಲೂಕುಗಳ ವಿತರಕರನ್ನು ನೋಂದಣಿ ಮಾಡಿಕೊಂಡು ಇ-ಶ್ರಮ್ ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳನ್ನು ನೀಡಲಾಗುವುದು ಎಂದರು.

ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರು, ಜಿಲ್ಲಾ ಬಾಲ ಕಾರ್ಮಿಕರ ಸೊಸೈಟಿಯ ಬಿ.ಆರ್.ದಿನೇಶ್, ಅರ್ಪಿತಾ ಬಿ.ಎಸ್, ಧರ್ಮಸ್ಥಳ ಸಂಸ್ಥೆಯ ಶ್ವೇತಾ ಎನ್, ಮನೋಜ್ ಇತರರಿದ್ದರು. ಈ ಸಂದರ್ಭದಲ್ಲಿ ತಾಲೂಕಿನ 30ಕ್ಕೂ ಹೆಚ್ಚು ಪತ್ರಿಕಾ ವಿತರಕರ ನೋಂದಣಿ ಮಾಡಿಕೊಂಡರು.

ಪೊಟೋ೨೧ಸಿಪಿಟಿ೮:

ಚನ್ನಪಟ್ಟಣದಲ್ಲಿ ತಾಲೂಕಿನ ಪತ್ರಿಕಾ ವಿತರಕರಿಗೆ ಇ-ಶ್ರಮ್ ಕಾರ್ಡ್ ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳ ನೋಂದಣಿ ಕಾರ್ಯ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!