ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಅಗಳಕೋಟೆಯ ಶಿಕ್ಷಣ ಭೀಷ್ಮ ಡಾ. ಎಚ್.ಎಮ್. ಗಂಗಾಧರಯ್ಯ ಸ್ಮಾರಕ ಭವನದ ವಿಶಾಲ ವೇದಿಕೆಯಲ್ಲಿ ಸಾಹೇ ಆಯೋಜಿಸಿದ್ದ 14ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಭಾರತ ದೇಶವು ಬೇರೆಲ್ಲ ದೇಶಗಳಿಗಿಂತ ತನ್ನ ಧಾರ್ಮಿಕ, ಸಾಂಸ್ಕೃತಿಕ, ಭಾಷೆ, ಸಂವಿಧಾನದಲ್ಲಿ ವೈವಿಧ್ಯತೆಯಿಂದ ಗುರುತಿಸಿಕೊಂಡಿದೆ. ಹಾಗೆ ಆರ್ಥಿಕವಾಗಿ ಬೆಳವಣಿಗೆ ಕಾಣುತ್ತಿದೆ. ಈ ಸಂದರ್ಭದಲ್ಲಿ ವೈವಿಧ್ಯತೆಯಲ್ಲಿ ಬಿರುಕು ಮೂಡದಂತೆ ಯುವಜನತೆ ಎಚ್ಚರ ವಹಿಸಬೇಕು. ವೈವಿಧ್ಯತೆ ಭಾರತೀಯರನ್ನು ವ್ಯಾಖ್ಯಾನಿಸಬೇಕು, ವಿಭಜಿಸಬಾರದು ಎಂದರು.
ಅಸಮಾನತೆ ಎಂಬುದು ನಮ್ಮ ದೇಶದ ಅಭಿವೃದ್ಧಿಗೆ ಬೀಳುತ್ತಿರುವ ದೊಡ್ಡ ಪೆಟ್ಟು. ಶಿಕ್ಷಣ, ಅರೋಗ್ಯ, ಆರ್ಥಿಕ, ಆದಾಯಗಳಂತಹ ಕ್ಷೇತ್ರದಲ್ಲಿ ಪ್ರಮುಖವಾಗಿ ಅಸಮಾನತೆ ಹೆಚ್ಚಾಗಿದೆ. ಭಾರತದಲ್ಲಿ ಬಡತನ ಕಡಿಮೆಯಾಗಿದೆ ಆದರೆ ಅಸಮಾನತೆ ಹೆಚ್ಚಾಗಿದೆ, ಆದ್ದರಿಂದ ಅಸಮಾನತೆಯ ಸಾಮಾಜಿಕ ವ್ಯವಸ್ಥೆ ಬದಲಾಗಬೇಕಿದೆ ಎಂದು ಪದವಿ ಪಡೆದ ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.ಸುಸ್ಥಿರಾಭಿವೃದ್ಧಿ ಕಾಪಾಡುವುದು ಬಹಳ ಮುಖ್ಯವಾಗಿದೆ. ಅಂದರೆ ಪ್ರಕೃತಿ ರಕ್ಷತಿ ರಕ್ಷಿತಃ ಅರ್ಥ ಪ್ರಕೃತಿಯನ್ನು ಯಾರು ರಕ್ಷಿಸುತ್ತಾರೋ, ಅವರನ್ನು ಪ್ರಕೃತಿ ರಕ್ಷಿಸುತ್ತದೆ. ಜಪಾನ್, ಯುರೋಪ್ ದೇಶಗಳಲ್ಲಿ ಜನಸಂಖ್ಯೆ ಕಡಿಮೆಯಾಗಿದ್ದು, ಚೀನಾ ಜನಸಂಖ್ಯೆ ಸುಸ್ಥಿರವಾಗಿದೆ. ಈಗಾಗಾಲೇ ಭಾರತ 1.5 ಬಿಲಿಯನ್ ಜನಸಂಖ್ಯೆ ಹೊಂದಿದ್ದು, 2050ರ ವೇಳೆಗೆ 300 ಮಿಲಿಯನ್ಗೆ ಏರಲಿದೆ. ಆದ ಕಾರಣ ಮುಂದಿನ ಪೀಳಿಗೆಯ ಭವಿಷ್ಯಕ್ಕೆ ಪರಿಸರವನ್ನು ಕಾಪಾಡುವುದು ಮತ್ತು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಸಾಹೇ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ಕೆ ಬಿ ಲಿಂಗೇಗೌಡ, ಅವರು ಸಾಹೇ ವಿಶ್ವವಿದ್ಯಾನಿಲಯ ಪ್ರಗತಿನೋಟದ ವರದಿಯನ್ನು ಮಂಡಿಸಿದರು.
ಪಾವಗಡದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಸಂಸ್ಥಾಪಕರಾದ ಶ್ರೀ ಸ್ವಾಮಿ ಜಪಾನಂದಜಿ ಮಹಾರಾಜ್ ಹಾಗೂ ವಿಜ್ಞಾನಿ ಭಾರತೀಯ ವಿಜ್ಞಾನ ಸಂಸ್ಥೆಯ ಏರೋಸ್ಪೇಸ್ ಎಂಜಿನಿಯರಿಂಗ್ನ ವಿಶ್ರಾಂತ ಪ್ರಾಧ್ಯಾಪಕ ಡಾ.ಕೆ.ಪಿ.ಜೆ.ರೆಡ್ಡಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.