ಸಮಗ್ರ ಕೃಷಿ ಪದ್ಧತಿಯಿಂದ ಹೆಚ್ಚಿನ ಆದಾಯ ಪಡೆಯಿರಿ

KannadaprabhaNewsNetwork |  
Published : Sep 02, 2025, 01:00 AM IST
01ಕೆಪಿಆರ್ಸಿಆರ್ 01:  | Kannada Prabha

ಸಾರಾಂಶ

ಕೃಷಿ ಭೂಮಿಯಿಂದ ಕೇವಲ ಬೆಳೆಗಳನ್ನು ಬೆಳೆಯಲು ಸೀಮಿತವಾಗದೇ ಅದರೊಂದಿಗೆ ಸಮಗ್ರ ಕೃಷಿಯನ್ನು ಅಳವಡಿಸಿಕೊಂಡು ಹೆಚ್ಚಿನ ಆದಾಯ ಪಡೆಯಬೇಕು ಎಂದು ಮಲ್ಲಟ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಮಾರುತಿ ನಾಯಕ ಸಲಹೆ ನೀಡಿದರು.

ಸಿರವಾರ: ಕೃಷಿ ಭೂಮಿಯಿಂದ ಕೇವಲ ಬೆಳೆಗಳನ್ನು ಬೆಳೆಯಲು ಸೀಮಿತವಾಗದೇ ಅದರೊಂದಿಗೆ ಸಮಗ್ರ ಕೃಷಿಯನ್ನು ಅಳವಡಿಸಿಕೊಂಡು ಹೆಚ್ಚಿನ ಆದಾಯ ಪಡೆಯಬೇಕು ಎಂದು ಮಲ್ಲಟ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಮಾರುತಿ ನಾಯಕ ಸಲಹೆ ನೀಡಿದರು.

ತಾಲೂಕಿನ ವಡವಟ್ಟಿ ಗ್ರಾಮದಲ್ಲಿ ರೈತ ಸಂಪರ್ಕ ಕೇಂದ್ರ ಮಲ್ಲಟ, ಜಿಲ್ಲಾ ಕೃಷಿ ತರಬೇತಿ ಕೇಂದ್ರ ದಡೆಸೂಗೂರು ಸಂಯುಕ್ತಾಶ್ರಯದಲ್ಲಿ ಸೋಮವಾರ ನಡೆದ ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರೈತರು ಸಮಗ್ರ ಕೃಷಿಗಳಾದ ಬೆಳೆ, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕ ಸೇರಿದಂತೆ ಹಲವಾರು ಬಗೆಯ ಸಮಗ್ರ ಕೃಷಿಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ರೈತರಿಗೆ ಸಮಗ್ರ ಕೃಷಿ ಪದ್ದತಿ, ಹತ್ತಿ, ತೊಗರಿ ಹಾಗೂ ಭತ್ತದ ಬೆಳೆಗಳ ರೋಗ ಹಾಗೂ ಕೀಟಗಳ ಸಮಗ್ರ ಹತೋಟಿ ಕ್ರಮಗಳ ಕುರಿತು ಹಾಗೂ ಕೃಷಿ ಇಲಾಖೆಯಿಂದ ರೈತರಿಗೆ ಇರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು.

ಕೆನರಾ ಬ್ಯಾಂಕಿನ ಹಣಕಾಸು ಕೌನ್ಸಲರ್ ಸುಮಲತಾ ಮಾತನಾಡಿದರು. ದಡೇಸೂಗುರು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಸುಪ್ರೀತ ಪಾಟೀಲ್ ತರಬೇತಿ ಕೇಂದ್ರದಿಂದ ರೈತರಿಗೆ ಇರುವ ಕೃಷಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಮಲ್ಲಟ ರೈತ ಸಂಪರ್ಕ ಕೇಂದ್ರದ ತಾಂತ್ರಿಕ ವ್ಯವಸ್ಥಾಪಕ ನಾಗರಾಜ ಕಂಬಾರ, ಕೃಷಿ ತರಬೇತಿ ಕೇಂದ್ರದ ಮಲ್ಲಮ್ಮ, ಸಿಬ್ಬಂದಿ ಆಂಜನೇಯ, ಗಿರೀಶ, ಮಲ್ಲು, ಶೇಖರ ಹಾಗೂ ವಡವಟ್ಟಿ ಭಾಗದ ರೈತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ