ಮುಧೋಳದಲ್ಲಿ ಘಟಪ್ರಭ ಅವಾಂತರ

KannadaprabhaNewsNetwork |  
Published : Jul 30, 2024, 12:41 AM IST
ಪೊಟೋ ಜು.29ಎಂಡಿಎಲ್ 1ಎ, 1ಬಿ, 1ಸಿ. ಮುಧೋಳ-ಚಿಂಚಖಂಡಿ ಸೇತುವೆ ತುಂಬಿ ಹರಿಯುತ್ತಿದೆ, ಉತ್ತೂರಿನ ಬಸಯ್ಯ ಅಜ್ಜನವರ ಮಠ ಜಲಾವೃತಗೊಂಡಿದೆ, ಒಂಟಗೋಡಿ ಗ್ರಾಮದ ಶಾಲೆ ಯೊಂದು ಜಲಾವೃತಗೊಂಡಿದೆ. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಮುಧೋಳ ಮುಧೋಳ ತಾಲೂಕಿನಲ್ಲಿ ಘಟಪ್ರಭಾ ನದಿಯ ಆರ್ಭಟ ಮುಂದುವರಿದಿದ್ದು, ಹಲವಾರು ಅವಾಂತರಗಳನ್ನು ಸೃಷ್ಟಿ ಮಾಡಿವೆ. ಸೇತುವೆ ಜಲಾವೃತವಾಗಿ ಪ್ರಮುಖ ನಗರಗಳ ರಸ್ತೆ ಸಂಚಾರವೇ ಬಂದ್‌ ಆದಂತಾಗಿದ್ದು, ನದಿಪಾತ್ರದಲ್ಲಿನ ಜಮೀನುಗಳು ಸಂಪೂರ್ಣ ಜಲಾವೃತವಾಗಿವೆ. ಹಿಡಕಲ್ ಜಲಾಶಯದಿಂದ ಘಟಪ್ರಭ ನದಿಗೆ ಸೋಮವಾರವೂ ಹೆಚ್ಚಿನ ನೀರು ಬಿಟ್ಟಿದ್ದು, ಇನ್ನೇರಡು ದಿನಗಳಲ್ಲಿ ಸೇತುವೆ ಮುಳುಗಡೆಯಾಗಿ ವಾಹನ ಸಂಚಾರ ಸ್ಥಗಿತಗೊಳ್ಳಲಿದೆ.

ಕನ್ನಡಪ್ರಭ ವಾರ್ತೆ ಮುಧೋಳ

ಮುಧೋಳ ತಾಲೂಕಿನಲ್ಲಿ ಘಟಪ್ರಭಾ ನದಿಯ ಆರ್ಭಟ ಮುಂದುವರಿದಿದ್ದು, ಹಲವಾರು ಅವಾಂತರಗಳನ್ನು ಸೃಷ್ಟಿ ಮಾಡಿವೆ. ಸೇತುವೆ ಜಲಾವೃತವಾಗಿ ಪ್ರಮುಖ ನಗರಗಳ ರಸ್ತೆ ಸಂಚಾರವೇ ಬಂದ್‌ ಆದಂತಾಗಿದ್ದು, ನದಿಪಾತ್ರದಲ್ಲಿನ ಜಮೀನುಗಳು ಸಂಪೂರ್ಣ ಜಲಾವೃತವಾಗಿವೆ. ಹಿಡಕಲ್ ಜಲಾಶಯದಿಂದ ಘಟಪ್ರಭ ನದಿಗೆ ಸೋಮವಾರವೂ ಹೆಚ್ಚಿನ ನೀರು ಬಿಟ್ಟಿದ್ದು, ಇನ್ನೇರಡು ದಿನಗಳಲ್ಲಿ ಸೇತುವೆ ಮುಳುಗಡೆಯಾಗಿ ವಾಹನ ಸಂಚಾರ ಸ್ಥಗಿತಗೊಳ್ಳಲಿದೆ. ಉತ್ತೂರಿನ ಬಸಯ್ಯ ಅಜ್ಜನವರ ಮಠ ಜಲಾವೃತಗೊಂಡಿದ್ದು, ಒಂಟಗೋಡಿ ಗ್ರಾಮದ ಶಾಲೆಯೊಂದು ಜಲಾವೃತಗೊಂಡಿದೆ. ಇನ್ನು, ಘಟಪ್ರಭೆ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವದರಿಂದ ನದಿಪಾತ್ರದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ನೂರಾರು ಎಕರೆ ಭೂಮಿ ಜಲಾವೃತಗೊಂಡಿದ್ದರಿಂದ ರೈತರ ಬೆಳೆಗಳು ನೀರು ಪಾಲಾಗಿವೆ.

ಸದ್ಯ ಲೋಕಾಪೂರ, ಬಾಗಲಕೋಟ, ರಾಮದುರ್ಗ, ಸವದತ್ತಿ, ಧಾರವಾಡ, ಯರಗಟ್ಟಿ, ಬೆಳಗಾವಿ ಸೇರಿದಂತೆ ಇತರೆ ಊರುಗಳಿಗೆ ಸಂಪರ್ಕ ಕಲ್ಪಿಸುವ ಮುಧೋಳ-ಚಿಂಚಖಂಡಿ ಸೇತುವೆ ಮೇಲೆ ಸೋಮವಾರ ಮಧ್ಯಾಹ್ನ ಘಟಪ್ರಭ ನದಿ ನೀರು ಹರಿಯುತ್ತಿರುವುದರಿಂದ ಈ ಮಾರ್ಗದ ಮೂಲಕ ಸಂಚರಿಸುವ ಎಲ್ಲ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಅಲ್ಲದೆ ಯಾದವಾಡ, ರೂಗಿ, ಜಾಲಿಬೇರಿ, ಉತ್ತೂರ, ಚನ್ನಾಳ, ರಂಜಣಗಿ, ಒಂಟಗೋಡಿ, ಮಲ್ಲಾಪೂರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಧೋಳ-ಯಾದವಾಡ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಭಾನುವಾರದಿಂದಲೇ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಇದರಿಂದ ಈ ಸೇತುವೆಗಳ ಮೂಲಕ ಸಂಪರ್ಕ ಕಲ್ಪಿಸುವ ಗ್ರಾಮಗಳಿಗೆ ತೆರಳಲು ಸುತ್ತುವರಿದು ಬರಬೇಕಿದೆ. ಅಲ್ಲದೇ, ಪ್ರವಾಹದಿಂದ ರೈತರು ಬೆಳೆದ ಬೆಳಾಗಿದ್ದು, ಸರ್ಕಾರ ಸೂಕ್ತ ಪರಿಹಾರ ಘೋಷಣೆ ಮಾಡಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ.

ಪ್ರವಾಹ ಪೀಡಿತ ಗ್ರಾಮಗಳಲ್ಲಿ ನೋಡಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ಸಂತ್ರಸ್ಥರಿಗೆ ಮತ್ತು ಜಾನುವಾರುಗಳಿಗೆ ಎಲ್ಲ ರೀತಿಯ ಸೌಲಭ್ಯ ಮತ್ತು ಸೌಕರ್ಯ ಒದಗಿಸಲು ಸಿದ್ದರಾಗಿದ್ದಾರೆ, ತಾಲೂಕು ಮತ್ತು ಜಿಲ್ಲಾಡಳಿತ ಪ್ರವಾಹ ಎದುರಿಸಲು ಸಕಲ ಸಿದ್ದತೆ ಮಾಡಿಕೊಂಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!