ಕನ್ನಡಪ್ರಭ ವಾರ್ತೆ ಚಾಮರಾಜನಗರ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡು ಎರಡುವರೆ ವರ್ಷವಾಗಿದ್ದು, ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಚಿವರು ವಿಫಲರಾಗಿದ್ದು, ರೈತರೊಂದಿಗೆ ಸಭೆ ನಡೆಸಲು ಹಲವು ಬಾರಿ ಮನವಿ ನೀಡಿದ್ದರೂ ರೈತರೊಂದಿಗೆ ಸಭೆ ನಡೆಸಿಲ್ಲ, ಶೀಘ್ರದಲ್ಲೇ ರೈತರೊಂದಿಗೆ ಸಭೆ ನಡೆಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾಗಿ ನಾಮಕಾವಸ್ತೆಗೆ ಮಾತ್ರ ಜಿಲ್ಲೆಗೆ ಆಗಮಿಸಿ ಹೋಗುತ್ತಿದ್ದಾರೆ. ಅಭಿವೃದ್ಧಿ ಕೆಲಸಗಳು ಜಿಲ್ಲೆಯಲ್ಲಿ ನಡೆಯುತ್ತಿಲ್ಲ, ಜಿಲ್ಲಾ ಉಸ್ತುವಾರಿ ಸಚಿವರ ಸ್ಥಾನದಿಂದ ಇವರನ್ನು ತೆಗೆದುಹಾಕಿ ಜಿಲ್ಲೆಯ ಜನಪ್ರತಿನಿಧಿಯೊಬ್ಬರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಿದರೆ ಸ್ಥಳೀಯ ಸಮಸ್ಯೆಗಳ ಅರಿವಿನಿಂದ ಅಭಿವೃದ್ಧಿ ಕೆಲಸಗಳು ಸಮಸ್ಯೆಗಳು ಬಗೆಹರಿಯುತ್ತವೆ ಎಂದರು.ಚಾಮರಾಜನಗರ, ಗುಂಡ್ಲುಪೇಟೆ ತಾಲೂಕಿನಲ್ಲಿರುವ ಸರ್ಕಾರಿ ಗೋಮಾಳದಲ್ಲಿ ಕ್ರಷರ್ಗಳು ಅಕ್ರಮವಾಗಿ ನಡೆಯುತ್ತಿದ್ದು, ಸಚಿವರು ಅಕ್ರಮ ಕ್ರಷರ್ಗಳಿಗೆ ಬೆಂಬಲವಾಗಿ ನಿಂತಿದ್ದಾರೆ. ನ್ಯಾಯಾಲಯ ರದ್ದುಪಡಿಸಲು ಆದೇಶ ನೀಡಿದರೂ ಕ್ರಷರ್ಗಳು ನಿಂತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಅಕ್ರಮ ಕ್ರಷರ್ಗೆ ಏಜೆಂಟಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಜ.26ರಂದು ಜಿಲ್ಲಾ ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಜ.26ರ ಮುಂಚಿತವಾಗಿ ಶೀಘ್ರದಲ್ಲೇ ರೈತರ ಸಭೆ ಕರೆಯದಿದ್ದರೆ ಸಚಿವರಿಗೆ ಘೇರಾವ್ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಉಪಾಧ್ಯಕ್ಷರಾದ ಪುಟ್ಟೇಗೌಡ, ಪಾಳ್ಯ ಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಮೈಲಾಜಿಪುರ ಕುಮಾರ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ನಾಗಪ್ಪ, ಜಿಲ್ಲಾ ಸಂಚಾಲಕ ಜಗದೀಶ್, ಹೋಬಳಿ ಅಧ್ಯಕ್ಷ ಸುಂದರ್ ಇದ್ದರು.