ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದಲ್ಲಿ ತಯಾರಾಗುವ ಸೀರೆಗಳಿಗೆ ಜಿಐ ಟ್ಯಾಗ್ ಪಡೆಯುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸಲಿದ್ದು, ಸೂರತ್ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.
ಪವರ್ಲೂಮ್ ರಿಸರ್ವೇಷನ್ ಆಕ್ಟ್ ತಿದ್ದುದಪಡಿಗೆ ಕೇಂದ್ರ ಸರ್ಕಾರದ ಬಳಿ ನಿಯೋಗ ತೆರಳಲಾಗುವುದು. ರಾಜ್ಯ ಸರ್ಕಾರದ ಇತಿಮಿತಿಯಲ್ಲಿ ಸಾಧ್ಯವಿರುವ ನೆರವು ನೀಡಲಾಗುವುದು. ಕೇಂದ್ರ ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸಗಳ ಬಗ್ಗೆ ನಿಯೋಗ ತೆರಳಿ ಒತ್ತಡ ತರಲಾಗುವುದು ಎಂದು ಹೇಳಿದರು.
ದೊಡ್ಡಬಳ್ಳಾಪುರಕ್ಕೆ ಬರುವ ಸೂರತ್ ಸೀರೆಗಳನ್ನು ನಿಷೇಧ ಮಾಡಬೇಕು ಎಂಬ ಬೇಡಿಕೆ ಸ್ಥಳೀಯ ನೇಕಾರರ ಹಿತರಕ್ಷಣೆ ದೃಷ್ಟಿಯಿಂದ ಸಾಧುವಾಗಿದೆ. ಆದರೆ ಕಾನೂನಿನಲ್ಲಿ ಅವಕಾಶ ಇದೆಯೇ? ನಿಷೇಧ ಮಾಡಬಹುದೇ ಎಂಬ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಸಂಗ್ರಹ ಮಾಡಲಿದ್ದು, ಅವಕಾಶವಿದ್ದರೆ ಖಂಡಿತ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದರು.ದೊಡ್ಡಬಳ್ಳಾಪುರದಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಮಳಿಗೆಗಳ ನಿರ್ಮಾಣ ಹಾಗೂ ನೇಕಾರರ ಭವನ ನಿರ್ಮಾಣ ಮಾಡಬೇಕು ಎಂಬ ಬೇಡಿಕೆಯನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದು, ಈ ಯೋಜನೆಗೆ ಜಾಗ ಗುರುತಿಸಲಾಗುವುದು ಎಂದು ಹೇಳಿದರು.
ಮಗ್ಗಗಳಿಗೆ ವಿದ್ಯುತ್ ಸಬ್ಸಿಡಿ ಕೊಡಬೇಕು ಎಂಬ ಬೇಡಿಕೆ ಬಂದ ಕಾರಣದಿಂದಲೇ ರಾಜ್ಯ ಸರ್ಕಾರ 10 ಎಚ್ಪಿವರೆಗಿನ ಮಗ್ಗಗಳಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡುತ್ತಿದೆ. ಆದರೆ ಈಗ ರೇಪಿಯರ್ ಮಗ್ಗಗಳಿಗೆ
ದೊಡ್ಡಬಳ್ಳಾಪುರ ಟೆಕ್ಸ್ಟೈಲ್ ವೀವರ್ಸ್ ಅಸೋಸಿಯೇಷನ್ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ದೊಡ್ಡಬಳ್ಳಾಪುರದ ಸೀರೆಗಳ ಉತ್ಪಾದನಾ ವೆಚ್ಚ ₹1500 ಇದ್ದರೆ ಸೂರತ್ ಸೀರೆಗಳ ಉತ್ಪಾದನಾ ವೆಚ್ಚ ₹600 ರಿಂದ ₹700 ವರೆಗೆ ಇದೆ. ಸೂರತ್ ಸೀರೆಗಳು ಗರಿಷ್ಠ ಪ್ರಮಾಣದಲ್ಲಿ ಬರುತ್ತಿರುವುದರಿಂದ ದೊಡ್ಡಬಳ್ಳಾಪುರ ನೇಕಾರರ ಸ್ಥಿತಿ ಶೋಚನೀಯವಾಗಿದೆ. ಈ ನೇಕಾರರ ಉಳಿವಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಸಚಿವ ಶಿವಾನಂದ ಪಾಟೀಲ ಅವರು ನೆರವಿಗೆ ಬರುವುದಾಗಿ ಭರವಸೆ ನೀಡಿದ್ದಾರೆ. ಕಾಯ್ದೆ ತಿದ್ದುಪಡಿಗೆ ಅವರ ಸಲಹೆಯಂತೆ ಕೇಂದ್ರದ ಬಳಿ ನಿಯೋಗ ತೆರಳುವುದು ಸೂಕ್ತ ಎಂದು ಹೇಳಿದರು.
ಕೋಟ್...........
- ಶಿವಾನಂದ ಪಾಟೀಲ, ಜವಳಿ ಸಚಿವ
5ಕೆಡಿಬಿಪಿ5- ದೊಡ್ಡಬಳ್ಳಾಪುರ ನೇಕಾರರ ಸಮಸ್ಯೆ ಪರಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಅವರು ಬೆಂಗಳೂರಿನ ವಿಕಾಸಸೌಧದಲ್ಲಿ ಸಭೆ ನಡೆಸಿದರು. ಶಾಸಕ ಧೀರಜ್ ಮುನಿರಾಜು, ಮಾಜಿ ಶಾಸಕ ವೆಂಕಟರಮಣಯ್ಯ ಇದ್ದರು.
--5ಕೆಡಿಬಿಪಿ6- ಬೆಂಗಳೂರಿನಲ್ಲಿ ಜವಳಿ ಸಚಿವ ಶಿವಾನಂದ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ದೊಡ್ಡಬಳ್ಳಾಪುರ ನೇಕಾರರ ಸಭೆಯಲ್ಲಿ ಹಲವು ಮುಖಂಡರು ಭಾಗವಹಿಸಿದ್ದರು.