ಹಳೆ ವಿದ್ಯಾರ್ಥಿಗಳೊಂದಿಗೆ ಗಿರಿ ದೇವನೂರು ಸಂವಾದ ಸರಣಿ

KannadaprabhaNewsNetwork |  
Published : May 02, 2025, 11:46 PM IST
2ಎಚ್ಎಸ್ಎನ್7 : ಹಾಲಿ ವಿದ್ಯಾರ್ಥಿಗಳೊಂದಿಗೆ  ಸಂವಾದ ನಡೆಸಿದ ಮಾಜಿ ವಿದ್ಯಾರ್ಥಿ ಹಾಗೂ ರೀ ಆಲ್ಫಾ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರಿ ದೇವನೂರು. | Kannada Prabha

ಸಾರಾಂಶ

ಎಂಜಿನಿಯರಿಂಗ್ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆ ಹಾಗೂ ರೋಬೋಟಿಕ್ಸ್‌ಗೆ ಸಂಬಂಧಿಸಿದ ವಿಷಯಗಳನ್ನು ಅರಿಯಲು ಹೆಚ್ಚಿನ ಒತ್ತು ನೀಡಬೇಕು ಎಂದು ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ ಮತ್ತು ರೀ ಆಲ್ಫಾ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರಿ ದೇವನೂರು ಅವರು ಸಲಹೆ ನೀಡಿದರು. ಕಂಪ್ಯೂಟರ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿರುವವರು ಕೃತಕ ಬುದ್ಧಿಮತ್ತೆ ಹಾಗೂ ಮೆಕ್ಯಾನಿಕಲ್‌ನಂತಹ ಕೋರ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿರುವವರು ರೋಬೋಟಿಕ್ಸ್ ಮೇಲೆ ಗಮನ ಕೇಂದ್ರೀಕರಿಸುವುದು ಸೂಕ್ತ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಎಂಜಿನಿಯರಿಂಗ್ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆ ಹಾಗೂ ರೋಬೋಟಿಕ್ಸ್‌ಗೆ ಸಂಬಂಧಿಸಿದ ವಿಷಯಗಳನ್ನು ಅರಿಯಲು ಹೆಚ್ಚಿನ ಒತ್ತು ನೀಡಬೇಕು ಎಂದು ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ ಮತ್ತು ರೀ ಆಲ್ಫಾ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರಿ ದೇವನೂರು ಅವರು ಸಲಹೆ ನೀಡಿದರು.

ನಗರದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಎಂಇ-ರೈಸ್ ಫೌಂಡೇಶನ್ ವತಿಯಿಂದ ಪ್ರಾರಂಭಿಸಿರುವ ಹಳೆ ವಿದ್ಯಾರ್ಥಿಗಳೊಂದಿಗಿನ ಸಂವಾದ ಸರಣಿಯ ಮೊದಲ ಸಂಚಿಕೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಂಪ್ಯೂಟರ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿರುವವರು ಕೃತಕ ಬುದ್ಧಿಮತ್ತೆ ಹಾಗೂ ಮೆಕ್ಯಾನಿಕಲ್‌ನಂತಹ ಕೋರ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿರುವವರು ರೋಬೋಟಿಕ್ಸ್ ಮೇಲೆ ಗಮನ ಕೇಂದ್ರೀಕರಿಸುವುದು ಸೂಕ್ತ ಎಂದು ತಿಳಿಸಿದರು.ಕೃತಕ ಬುದ್ಧಿಮತ್ತೆ ಹೊಸ ವಿಷಯವೇನಲ್ಲ. ೧೯೯೦ರಲ್ಲಿಯೇ ಮಲೆನಾಡು ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ವೆಂಕಟೇಶಮೂರ್ತಿ ಅವರು ನಮಗೆ ಕೃತಕ ಬುದ್ಧಿಮತ್ತೆ ವಿಷಯ ಬೋಧಿಸಿದ್ದರು. ಇಂದು ಅದರ ಬಳಕೆ ವ್ಯಾಪಕವಾಗುತ್ತಿದೆ ಎಂದರು.ಪ್ರೋಗ್ರಾಮಿಂಗ್ ಕೆಲಸಗಳು ಎಸ್‌ಟಿಡಿ/ಐಎಸ್‌ಡಿ ಬೂತ್‌ಗಳಿದ್ದ ಹಾಗೆ. ಈಗ ಪ್ರಚಲಿತದಲ್ಲಿದ್ದರೂ ಮುಂಬರುವ ದಿನಗಳಲ್ಲಿ ಇನ್ನಿಲ್ಲವಾಗಬಹುದು ಎಂದು ಹೇಳಿದರು. ವಿದ್ಯಾರ್ಥಿಯಾಗಿದ್ದಾಗ ಕಾಲೇಜು ಗ್ರಂಥಾಲಯದಲ್ಲಿ ಇಂಗ್ಲಿಷ್ ಪತ್ರಿಕೆ ಹಾಗೂ ನಿಯತಕಾಲಿಕೆಗಳನ್ನು ಓದುತ್ತಿದ್ದೆ. ಅದು ನನಗೆ ಅಮೆರಿಕಕ್ಕೆ ತೆರಳಿ ಉದ್ಯಮಿಯಾಗಲು ಪ್ರೇರಣೆ ಒದಗಿಸಿತು ಎಂದು ವಿದ್ಯಾರ್ಥಿ ದಿನಗಳನ್ನು ಮೆಲುಕು ಹಾಕಿದರು.ಸಂವಾದ ಕಾರ್ಯಕ್ರಮದ ಸಂಯೋಜಕರಾದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಕಾರ್ಪೊರೇಟ್ ವಿಷಯಗಳಿಗೆ ಸಂಬಂಧಿಸಿದ ಡೀನ್ ಡಾ.ಗೀತಾ ಕಿರಣ್ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಕೃಷ್ಣಸ್ವಾಮಿ ಸುಬ್ಬಾರಾವ್, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಂವಾದದ ಭಾಗವಾಗಿ ಗಿರಿ ದೇವನೂರು ಅವರು ನೀಡಿದ ಉಪನ್ಯಾಸ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಯೂಟ್ಯೂಬ್ ಚಾನೆಲ್‌ನಲ್ಲಿ ಲಭ್ಯವಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗದ್ದಲದ ನಡುವೆ, ಚರ್ಚೆಯೇ ಇಲ್ಲದೆ ದ್ವೇಷ ಭಾಷಣ ತಡೆ ಮಸೂದೆ ಪಾಸ್‌
ನಗರದ 75 ಜಂಕ್ಷನ್‌ ಅಭಿವೃದ್ಧಿಗೆ ಗ್ರಹಣ!