ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಮಹಾರಾಣಿ ಮಹಿಳಾ ಮತ್ತು ನಿರ್ವಹಣಾ ಕಾಲೇಜು ವತಿಯಿಂದ ಆಯೋಜಿಸಿದ್ದ ಸಾಂಸ್ಕೃತಿಕ ವೇದಿಕೆ 2025-2026 ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮೈಸೂರಿನ ಸರ್ವಾಂಗೀಣ ಅಭಿವೃದ್ಧಿಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಂತಹ ಮಹಾನ್ ಚೇತನಗಳ ದೂರದೃಷ್ಟಿಯೇ ಮೂಲ ಕಾರಣ. ಅವರ ಕೊಡುಗೆಯಿಂದಾಗಿ ಇಂದು ಮೈಸೂರು ಮಾದರಿ ನಗರವಾಗಿ ಬೆಳೆದಿದೆ. ಇಂದು ನಾವು ಸ್ವತಂತ್ರವಾಗಿ ವ್ಯವಹರಿಸಲು ಮತ್ತು ಮಾತನಾಡಲು ಶಕ್ತಿ ನೀಡಿದವರು ಡಾ.ಬಿ.ಆರ್.ಅಂಬೇಡ್ಕರ್. ಅವರು ನಮಗೆ ನೀಡಿದ ಬೃಹತ್ ಸಂವಿಧಾನವೇ ನಮ್ಮೆಲ್ಲರ ಶಕ್ತಿ. ಇಂದು ಸರ್ವೋಚ್ಚ ನ್ಯಾಯಾಲಯದಿಂದ ಹಿಡಿದು ಸಾಮಾನ್ಯ ಮಠಗಳವರೆಗೆ ಪ್ರತಿಯೊಂದು ಕಾರ್ಯಕ್ರಮದಲ್ಲೂ ಸಂವಿಧಾನದ ಪ್ರಸ್ತಾವನೆ ಓದುವುದು ಕಡ್ಡಾಯವಾಗಿದೆ. ಇದು ನಮ್ಮ ಸಂವಿಧಾನಕ್ಕಿರುವ ಅಪ್ರತಿಮ ಮೌಲ್ಯವನ್ನು ಎತ್ತಿ ತೋರಿಸುತ್ತದೆ ಎಂದರು.ಡಾ.ಬಿ.ಆರ್.ಆಂಬೇಡ್ಕರ್ ಅವರು ಕೇವಲ ಪ.ಜಾತಿ ಮತ್ತು ಪ.ಪಂಗಡಗಳ ಪರವಾಗಿ ಮಾತ್ರವಲ್ಲದೆ, ಮಹಿಳೆಯರ ಮೇಲಿನ ಶೋಷಣೆಯ ವಿರುದ್ಧವೂ ನಿರಂತರವಾಗಿ ಹೋರಾಡಿದವರು. ಸತಿ ಪದ್ಧತಿಯಂತಹ ಕ್ರೂರ ಸಂಪ್ರದಾಯ ವಿರೋಧಿಸಿದರ, ಮನುಸ್ಮೃತಿಯಲ್ಲಿದ್ದ ಅಸಮಾನತೆಯ ವ್ಯವಸ್ಥೆಗಳನ್ನು ಖಂಡಿಸಿದರು, ಮಹಿಳಾ ಶಿಕ್ಷಣ ಮತ್ತು ಹಕ್ಕುಗಳಿಗಾಗಿ ಪ್ರಬಲವಾಗಿ ಧ್ವನಿ ಎತ್ತಿದರು. ಇಂದು ಬಹುತೇಕ ಪರೀಕ್ಷೆಗಳ ಫಲಿತಾಂಶದಲ್ಲಿ ಹೆಣ್ಣುಮಕ್ಕಳು ಮೇಲುಗೈ ಸಾಧಿಸುತ್ತಿರುವುದಕ್ಕೆ ಮತ್ತು ಸಬಲೆಯರಾಗಿರುವುದಕ್ಕೆ ಅಂಬೇಡ್ಕರ್ ಅವರು ಅಂದು ನಡೆಸಿದ ಹೋರಾಟಗಳೇ ಕಾರಣ ಎಂದರು.
ಶಾಸಕ ಕೆ. ಹರೀಶ್ ಗೌಡ ಅಧ್ಯಕ್ಷತೆವಹಿಸಿ ಮಾತನಾಡಿ, ಮಹಾರಾಣಿ ಕಾಲೇಜಿನಂತಹ ಬೃಹತ್ ಶಿಕ್ಷಣ ಸಂಸ್ಥೆಯಲ್ಲಿ ಕಲೆ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ಈ ಸಂಸ್ಥೆಯು ನಮಗೆ ದೊರೆಯಲು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿಯೇ ಮೂಲ ಕಾರಣ ಎಂದು ಸ್ಮರಿಸಿದರು.
ಜಯದೇವ್ ಆಸ್ಪತ್ರೆಯ ಪ್ರಾಧ್ಯಾಪಕರು ಹಾಗೂ ವೈದ್ಯಕೀಯ ಅಧೀಕ್ಷಕ ಡಾ.ಕೆ.ಎಸ್. ಸದಾನಂದ ಮಾತನಾಡಿ, ಈ ರೋಮಾಂಚಕ ಸಂಸ್ಥೆಯಾದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ಕಲಾ ಕಾಲೇಜಿನ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ನನಗೆ ಅಪಾರ ಸಂತೋಷವಾಗುತ್ತಿದೆ. ಇಂದಿನ ಕಾರ್ಯಕ್ರಮವು ಕೇವಲ ಚಟುವಟಿಕೆಗಳ ಸಮಾರೋಪವಲ್ಲ, ಬದಲಾಗಿ ಸಮರ್ಪಣೆ, ತಂಡದ ಕೆಲಸ, ಶಿಸ್ತು ಮತ್ತು ಯುವಶಕ್ತಿಯ ಚೈತನ್ಯದ ಆಚರಣೆಯಾಗಿದೆ ಎಂದರು.
ಕ್ರೀಡೆಗಳು ನಮಗೆ ಶಿಸ್ತು, ಸ್ಥಿತಿ ಸ್ಥಾಪಕತ್ವ ಮತ್ತು ತಂಡದ ಕೆಲಸದ ಮೌಲ್ಯವನ್ನು ಕಲಿಸುತ್ತವೆ. ಸಾಂಸ್ಕೃತಿಕ ಚಟುವಟಿಕೆಗಳು ಸೃಜನಶೀಲತೆ, ಆತ್ಮವಿಶ್ವಾಸ ಮತ್ತು ಅಭಿವ್ಯಕ್ತಿಯನ್ನು ಹೊರತರುತ್ತವೆ. ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ನಂತಹ ಉಪಕ್ರಮಗಳು ಸಹಾನುಭೂತಿ, ಸಾಮಾಜಿಕ ಜವಾಬ್ದಾರಿ ಮತ್ತು ಮಾನವೀಯತೆಗೆ ಸೇವೆಯನ್ನು ಪೋಷಿಸುತ್ತವೆ. ಎನ್.ಸಿ.ಸಿ ಮತ್ತು ರೇಂಜರ್ಸ್ ನಾಯಕತ್ವ, ಧೈರ್ಯ ಮತ್ತು ರಾಷ್ಟ್ರೀಯ ಹೆಮ್ಮೆಯ ಪ್ರಜ್ಞೆಯನ್ನು ಹುಟ್ಟುಹಾಕುತ್ತವೆ ಎಂದರು.
ಶೈಕ್ಷಣಿಕ ಶ್ರೇಷ್ಠತೆಯಿಂದ ಮಾತ್ರವಲ್ಲದೆ ಸಹಾನುಭೂತಿ, ಶಿಸ್ತು ಮತ್ತು ಸಮಗ್ರತೆಯಂತಹ ಮೌಲ್ಯಗಳೊಂದಿಗೆ ನಿಮ್ಮ ಭವಿಷ್ಯವನ್ನು ನಿರ್ಮಿಸಿ. ನೀವು ನಮ್ಮ ರಾಷ್ಟ್ರದ ಭವಿಷ್ಯದ ನಾಯಕರು, ಮತ್ತು ಸಮಾಜಕ್ಕೆ ನಿಮ್ಮ ಕೊಡುಗೆ ಉತ್ತಮ ನಾಳೆಯನ್ನು ರೂಪಿಸುತ್ತದೆ. ಈ ಅದ್ಭುತ ಸಮಾರಂಭವನ್ನು ನಾವು ಮುಕ್ತಾಯಗೊಳಿಸುತ್ತಿದ್ದಂತೆ, ಏಕತೆ, ಸೇವೆ ಮತ್ತು ಶ್ರೇಷ್ಠತೆಯ ಮನೋಭಾವವನ್ನು ಮುಂದಕ್ಕೆ ಕೊಂಡೊಯ್ಯೋಣ. ನೀವೆಲ್ಲರೂ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಮಿಂಚುತ್ತಲೇ ಇರಲಿ ಎಂದರು.