ಅಲೆಮಾರಿ ಸಮುದಾಯಕ್ಕೆ ಶೇ. 1ರಷ್ಟು ಮೀಸಲಾತಿ ನೀಡಲು ಆಗ್ರಹ

KannadaprabhaNewsNetwork |  
Published : Oct 09, 2025, 02:01 AM IST
8ಎಚ್‌ವಿಆರ್5 | Kannada Prabha

ಸಾರಾಂಶ

ಅಲೆಮಾರಿ ಸಮುದಾಯದ 59 ಜಾತಿಗಳಿಗೆ ಶೇ. 1ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮುಖಾಂತರ ಸಿಎಂ ಸಿದ್ದರಾಮಯ್ಯ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ಹಾವೇರಿ: ಅಲೆಮಾರಿ ಸಮುದಾಯದ 59 ಜಾತಿಗಳಿಗೆ ಶೇ. 1ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮುಖಾಂತರ ಸಿಎಂ ಸಿದ್ದರಾಮಯ್ಯ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ಜಾತಿಗಳ ಮೀಸಲಾತಿ ವರ್ಗೀಕರಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು 2024ರ ಆಗಸ್ಟ್ 1ರಂದು ಸುಪ್ರೀಂ ಕೋರ್ಟಿನ 7 ನ್ಯಾಯಾಧೀಶರ ಪೀಠ ಐತಿಹಾಸಿಕ ತೀರ್ಪು ನೀಡಿದೆ. ಪರಿಶಿಷ್ಟ ಜಾತಿಗಳಲ್ಲಿ ಹಿಂದುಳಿದಿರುವಿಕೆ ಆಧಾರದಲ್ಲಿ ನಿಖರ ದತ್ತಾಂಶ ಸಂಗ್ರಹಿಸಿ ವರ್ಗೀಕರಣ ಮಾಡಿ ಒಳಮೀಸಲಾತಿ ಕಲ್ಪಿಸಲು ಆದೇಶಿಸಿದೆ. ಮಾದಿಗರಿಗೆ ಮತ್ತು ಮಾದಿಗರ ಸಂಬಂಧಿತ ಸಮಾಜದ ಹೋರಾಟಕ್ಕೆ ಸುಪ್ರೀಂ ಕೋರ್ಟ್ ತೀರ್ಪಿನ ಆಧಾರದಲ್ಲಿ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಆಯೋಗವು 101 ಪರಿಶಿಷ್ಟ ಜಾತಿಗಳ ಹಿಂದುಳಿದಿರುವಿಕೆಯನ್ನು ಗುರುತಿಸಿ ಸೂತ್ರ ರೂಪಿಸಿತು. ಆದರೆ ರಾಜ್ಯ ಸಚಿವ ಸಂಪುಟವು ಆಯೋಗದ ಸೂತ್ರವನ್ನು ಮಾರ್ಪಡಿಸಿ ವರ್ಗೀಕರಿಸಿತು. ಅರೆಮಾರಿ ಹಾಗೂ ಅರೆಅಲೆಮಾರಿ ಜಾತಿಗಳಿಗೆ ಸರ್ಕಾರದ ಈ ಕ್ರಮ ಮರಣಶಾಸನವಾಗಿ ಪರಿಣಮಿಸಿದೆ ಎಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

101 ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಔದ್ಯೋಗಿಕವಾಗಿ ಹಿಂದುಳಿದಿರುವ ಚಿನ್ನದಾಸ, ಬುಡಜಂಗಮ, ಸುಡುಗಾಡುಸಿದ್ದ, ದಕ್ಕಲರು, ಮಾಲದಾಸರು, ಹೊಲಿಯ ದಾಸರು, ಡಂಬರ್ ಸೇರಿದಂತೆ ಹಿಂದುಳಿದ 59 ಅಲೆಮಾರಿ ಸಣ್ಣ ಜಾತಿಗಳನ್ನು ಅತಿ ಕಡಿಮೆ ಹಿಂದುಳಿದಿರುವ “ಸಿ” ವರ್ಗದ ಸ್ಪಷ್ಟ ಜಾತಿಗಳೊಟ್ಟಿಗೆ ಸೇರಿಸಿರುವುದು ಸುಪ್ರೀಂ ಕೋರ್ಟಿನ ನಿರ್ದೇಶನದ ಉಲ್ಲಂಘನೆ ಹಾಗೂ ಅಪಮಾನಿಸಿದಂತಾಗಿದೆ. ಅಲ್ಲದೆ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಮೂರು ಜಾತಿಗಳ ಗೊಂದಲವನ್ನು ಕೂಡಲೇ ನಿವಾರಿಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಮನವಿ ಸಲ್ಲಿಕೆ ವೇಳೆ ಡಿಎಸ್‌ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ, ಜಿಲ್ಲಾಧ್ಯಕ್ಷ ಮಂಜಪ್ಪ ಮರೋಳ, ಅಲೆಮಾರಿ ಸಮಾಜದ ಜಿಲ್ಲಾಧ್ಯಕ್ಷ ವಿಭೂತಿ ಶೆಟ್ಟಿ, ಮುಖಂಡರಾದ ಜಗದೀಶ ಹರಿಜನ, ನವೀನ ಶಿದ್ದಣ್ಣನವರ, ಕೃಷ್ಣಾ ಶಿಕಸಾಲ, ಈರಪ್ಪ ಮೂಡಿ ಅನೇಕರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!