ಬಿಎಸ್ವೈ ಅಭಿಮಾನೋತ್ಸವಕ್ಕೆ ಸಂಭ್ರಮದ ಸ್ಪರ್ಶ ನೀಡಿ: ಮಾಜಿ ಸಚಿವ ಶ್ರೀರಾಮುಲು

KannadaprabhaNewsNetwork |  
Published : Apr 29, 2026, 01:15 AM IST
ಚಿತ್ರದುರ್ಗ ಎರಡನೇ ಪುಟದ ಲೀಡ್     | Kannada Prabha

ಸಾರಾಂಶ

ರೈತನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕಾರಣಕ್ಕೆ ಬಂದು 50 ವರ್ಷ ತುಂಬಿದ ಹಿನ್ನೆಲೆ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಪ್ರದೇಶ ಸೇರಿದಂತೆ ನಗರ ಪ್ರದೇಶದ ಜನ ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸಬೇಕು. ಕಾರ್ಯಕ್ರಮಕ್ಕೆ ಸಂಭ್ರಮದ ಸ್ಪರ್ಶ ನೀಡಬೇಕಂದು ಮಾಜಿ ಸಚಿವ ಬಿ.ಶ್ರೀರಾಮುಲು ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ರೈತನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕಾರಣಕ್ಕೆ ಬಂದು 50 ವರ್ಷ ತುಂಬಿದ ಹಿನ್ನೆಲೆ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಪ್ರದೇಶ ಸೇರಿದಂತೆ ನಗರ ಪ್ರದೇಶದ ಜನ ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸಬೇಕು. ಕಾರ್ಯಕ್ರಮಕ್ಕೆ ಸಂಭ್ರಮದ ಸ್ಪರ್ಶ ನೀಡಬೇಕಂದು ಮಾಜಿ ಸಚಿವ ಬಿ.ಶ್ರೀರಾಮುಲು ಮನವಿ ಮಾಡಿದರು.

ನಗರದ ಛೇಂಬರ್ ಆಫ್ ಕಾಮರ್ಸ್‌ನ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಯೋಜಿಸಿದ್ದ ಬಿಎಸ್‌ವೈ ಅಭಿಮಾನೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಬೇರುಮಟ್ಟದಿಂದ ರಾಜಕಾರಣ ಆರಂಭಿಸಿದ ಯಡಿಯೂರಪ್ಪ ಅವರು ಹಂತಹಂತವಾಗಿ ಹೋರಾಟ ಮಾಡುತ್ತ ಇಡೀ ನಾಡು ಮೆಚ್ಚುವಂತಹ ನಾಯಕನಾಗಿದ್ದು ದೊಡ್ಡ ಇತಿಹಾಸ. ಸಮಾಜದ ಎಲ್ಲ ಜನರ ಪರವಾಗಿ ತಮ್ಮ ಜೀವನವಿಡೀ ಹೋರಾಡಿದ ಧೀಮಂತ ನಾಯಕ. ನಾಡಿನ ಜನ ಸಮುದಾಯದ ಸಂಕಷ್ಟ ನಿವಾರಣೆಗೆ ಅನೇಕ ಜನಪರ ಕಾರ್ಯಕ್ರಮಗಳ ಜಾರಿಗೊಳಿಸುವ ಮೂಲಕ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ ಎಂದು ಹೇಳಿದರು.

50 ವರ್ಷಗಳ ಕಾಲ ರಾಜಕಾರಣ ಸುಲಭವಾದುದಲ್ಲ. ಅನೇಕ ಕಷ್ಟಗಳನ್ನು ಎದುರಿಸಿ ಯಶಸ್ಸು ಪಡೆದು ಇತರರಿಗೆ ಮಾದರಿ ಆಗಿದ್ದಾರೆ. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮ ಚಿತ್ರದುರ್ಗ ಜಿಲ್ಲೆಯಲ್ಲಿ ಆಯೋಜಿಸಿರುವುದು ನಮ್ಮ ಪಾಲಿಗೆ ಬಂದ ಸುವರ್ಣ ಅವಕಾಶವಾಗಿದೆ. ಅಪರೂದ ಈ ಕಾರ್ಯಕ್ರಮ ಸಾಕ್ಷೀಕರಿಸಲು ಅಪಾರ ಸಂಖ್ಯೆಯಲ್ಲಿ ಧಾವಸಿಬೇಕು. ಕಾರ್ಯಕ್ರಮಕ್ಕೊಂದು ಐತಿಹಾಸಿಕ ಸನ್ನಿವೇಶ ಸೃಷ್ಟಿಸಬೇಕೆಂದು ಶ್ರೀರಾಮುಲು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮಾತನಾಡಿ, ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಮಟ್ಟದಿಂದಲೂ ಸಾಕಷ್ಟು ಜನರು ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿಬೇಕು. ಸುದೀರ್ಘ ಐವತ್ತು ವರ್ಷಗಳ ರಾಜಕೀಯ ಬದುಕು ಯುವಕರಿಗೆ ಪ್ರೇರಣೆಯಾಗಲಿದೆ. ಚಿತ್ರದುರ್ಗದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಲಕ್ಷೋಪಲಕ್ಷ ಜನರು ಆಗಮಿಸುತ್ತಾರೆ. ರಾಜ್ಯದಲ್ಲಿ ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಲಿದೆ. ಈಗಾಗಲೇ ಭೂಮಿ ಪೂಜೆ ಕಾರ್ಯಕ್ರಮ ಇಂತಹ ಒಂದು ಸಂದೇಶವನ್ನು ರವಾನಿಸಿದೆ ಎಂದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಪ್ರೀತಂಗೌಡ ಮಾತನಾಡಿ, ಯಡಿಯೂರಪ್ಪ ಅಂದರೆ ಒಂದು ದೊಡ್ಡ ಶಕ್ತಿ. ಬಿಜೆಪಿಯನ್ನು ತಳಮಟ್ಟದಿಂದ ಕಟ್ಟಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿ ಅಧಿಕಾರಕ್ಕೆ ಬರುವಂತೆ ಮಾಡುವಲ್ಲಿ ಅವಿರತ ಶ್ರಮಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಅವರು ಕಾರಣರಾಗಿದ್ದಾರೆ. ರಾಜ್ಯದ ಮೂಲೆಮೂಲೆಗಳಿಂದ ಕಾರ್ಯಕರ್ತರು, ಅಭಿಮಾನಿಗಳು ಏ.9ರಂದು ನಡೆಯುವ ಅಭಿಮಾನೋತ್ಸವಕ್ಕೆ ಅಭಿಮಾನದಿಂದಲೇ ಬರುತ್ತಿದ್ದಾರೆ ಎಂದು ತಿಳಿಸಿದರು.

ಬಾಳೇಕಾಯಿ ರಾಮ್ ದಾಸ್, ಎ.ಮುರುಳಿ, ಮುಖಂಡರಾದ ಸೂರನಹಳ್ಳಿ ಶ್ರೀನಿವಾಸ್, ಸೋಮಶೇಖರ್ ಮಂಡೀಮಠ್, ಶಿವಪುತ್ರಪ್ಪ, ತಾಲೂಕು ಅಧ್ಯಕ್ಷ ಬಿ.ಎಂ. ಸುರೇಶ್, ಹನುಮಂತೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಪಿ.ಎಂ ಮಂಜುನಾಥ್, ವೆಂಕಟೇಶ್ ಯಾದವ್, ಮಾಧುರಿ ಗಿರೀಶ್, ಬಿ.ಎಸ್. ಶಿವಪುತ್ರಪ್ಪ, ಆದಿ ಬಾಸ್ಕರ್ ಶೆಟ್ಟಿ ಇತರರು ಇದ್ದರು. ಡಾ.ಪಿ.ಎಂ.ಮಂಜುನಾಥ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟ್ರಾಫಿಕ್‌ ಸಮಸ್ಯೆ ನಿಯಂತ್ರಣ ಕ್ರಮ ವಹಿಸಿ
ಇತ್ತೀಚಿನ ಖಾಯಿಲೆಗಳಿಗೆ ಕ್ರೀಡೆಗಳು ರಾಮಬಾಣ: ಅಶೋಕ ಮೆಹ್ತಾ