ದೇಶದ ಭವಿಷ್ಯಕ್ಕಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ

KannadaprabhaNewsNetwork |  
Published : Nov 15, 2025, 01:00 AM IST
    ಸಿಕೆಬಿ-2 ನಗರ ಹೊರವಲಯದ ಜಿಲ್ಲಾಡಳಿತ ಭವನದ ಮುಂಭಾಗ  ಮಕ್ಕಳ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತ ಭವನ ವೀಕ್ಷಿಸಲು ಬಂದಿದ್ದ ನಗರದ ಪೂರ್ಣ ಪ್ರಜ್ಞ ಶಾಲೆಯ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಶುಭಾಶಯಗಳನ್ನು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮತ್ತು ಅಪರ ಜಿಲ್ಲಾದಿಕಾರಿ ಡಾ.ಎನ್.ಭಾಸ್ಕರ್ ತಿಳಿಸಿದರು | Kannada Prabha

ಸಾರಾಂಶ

ಇಂದಿನ ಮಕ್ಕಳೇ ನಾಳಿನ ರಾಷ್ಟ್ರದ ರೂವಾರಿಗಳು. ಹೀಗಿರುವಾಗ ಈ ಮಕ್ಕಳನ್ನು ದೇಶದ ಆಸ್ತಿಯನ್ನಾಗಿ ಮಾಡುವುದು ಬಹಳ ಮುಖ್ಯ. ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಒಳ್ಳೆಯ ಶಿಕ್ಷಣ ನೀಡುವುದು ಬಹಳ ಮುಖ್ಯ. ಅಲ್ಲದೆ ಮಕ್ಕಳು ದೇಶದ ಭವಿಷ್ಯ, ಅವರನ್ನು ಉತ್ತಮವಾಗಿ ನೋಡಿಕೊಳ್ಳುವುದರ ಜೊತೆಗೆ ಅಗತ್ಯ ಶಿಕ್ಷಣವನ್ನು ಪೂರೈಸಬೇಕು.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಇಂದಿನ ಮಕ್ಕಳ ಪಾತ್ರವು ಬಹಳ ಮಹತ್ತರವಾದದ್ದು, ಆದ್ದರಿಂದ ಮಕ್ಕಳ ಉಜ್ವಲ ಭವಿಷ್ಯದ ದೃಷ್ಟಿಯಿಂದ ಮಕ್ಕಳ ಹಕ್ಕುಗಳು ಮತ್ತು ಶಿಕ್ಷಣದ ಮಹತ್ವವನ್ನು ಸಾರುವ ಸಲುವಾಗಿ ನ. 14 ರಂದು ದೇಶಾದ್ಯಂತ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೇಳಿದರು.

ನಗರ ಹೊರವಲಯದ ಜಿಲ್ಲಾಡಳಿತ ಭವನದ ಮುಂಭಾಗ ಶುಕ್ರವಾರ ಮಕ್ಕಳ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತ ಭವನ ವೀಕ್ಷಿಸಲು ಬಂದಿದ್ದ ನಗರದ ಪೂರ್ಣ ಪ್ರಜ್ಞ ಶಾಲೆಯ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ ಮಾತನಾಡಿ, 1954 ರಲ್ಲಿ ವಿಶ್ವಸಂಸ್ಥೆಯು ನವೆಂಬರ್‌ 20 ರಂದು ಸಾರ್ವತ್ರಿಕ ಮಕ್ಕಳ ದಿನಾಚರಣೆಯನ್ನು ಆಚರಿಸಲು ಘೋಷಿಸಿತು ಎಂದರು.

ನೆಹರು ಜನ್ಮದಿನಾಚರಣೆ

ಭಾರತವು ಇದೇ ದಿನ ಈ ದಿನವನ್ನು ಆಚರಿಸುತ್ತಿತ್ತು. ಆದರೆ 1964 ರಲ್ಲಿ ಪಂಡಿತ್‌ ಜವಾಹರಲಾಲ್ ನೆಹರು ಅವರ ನಿಧನದ ನಂತರ ಭಾರತೀಯ ಸಂಸತ್ತು ನೆಹರೂರವರ ಮಕ್ಕಳ ಮೇಲಿನ ಪ್ರೀತಿಯನ್ನು ಸ್ಮರಿಸಲು ಅವರ ಜನ್ಮ ಜಯಂತಿಯನ್ನು ಮಕ್ಕಳ ದಿನವಾಗಿ ಆಚರಿಸುವ ನಿರ್ಣಯವನ್ನು ಅಂಗೀಕರಿಸಿತು. ಅಂದಿನಿಂದ ಪ್ರತಿವರ್ಷ ನವೆಂಬರ್‌ 14 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಮಾತನಾಡಿ, ಇಂದಿನ ಮಕ್ಕಳೇ ನಾಳಿನ ರಾಷ್ಟ್ರದ ರೂವಾರಿಗಳು. ಹೀಗಿರುವಾಗ ಈ ಮಕ್ಕಳನ್ನು ದೇಶದ ಆಸ್ತಿಯನ್ನಾಗಿ ಮಾಡುವುದು ಬಹಳ ಮುಖ್ಯ. ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಒಳ್ಳೆಯ ಶಿಕ್ಷಣ ನೀಡುವುದು ಬಹಳ ಮುಖ್ಯ. ಅಲ್ಲದೆ ಮಕ್ಕಳು ದೇಶದ ಭವಿಷ್ಯ, ಅವರನ್ನು ಉತ್ತಮವಾಗಿ ನೋಡಿಕೊಳ್ಳುವುದರ ಜೊತೆಗೆ ಅಗತ್ಯ ಶಿಕ್ಷಣವನ್ನು ಪೂರೈಸಬೇಕು ಎಂಬುದು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರು ಅವರ ಧ್ಯೇಯವಾಗಿತ್ತು ಎಂದರು.

ಮಕ್ಕಳ ಬಗ್ಗೆ ಅಪಾರವಾದ ಪ್ರೀತಿಯನ್ನು ಹೊಂದಿದ್ದ ನೆಹರು ಜನ್ಮ ದಿನವನ್ನು ಮಕ್ಕಳ ಹಕ್ಕುಗಳು ಮತ್ತು ಶಿಕ್ಷಣದ ಮಹತ್ವವನ್ನು ಸಾರುವ ಸಲುವಾಗಿ ಭಾರತದಲ್ಲಿ ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ ಎಂದರು.

ಎತ್ತಿನ ಬಂಡಿಯಲ್ಲಿ ಪ್ರಯಾಣ

ಪೂರ್ಣ ಪ್ರಜ್ಞಾ ಶಾಲೆಯ ಕಾರ್ಯದರ್ಶಿ ಶೈಲಜಾ ವೆಂಕಟೇಶ್ ಮಾತನಾಡಿ, ಸದಾ ಪಠ್ಯ ಚಟುವಟಿಗೆಗಳಲ್ಲಿ ಕಾಲ ಕಳೆಯುವ ಮಕ್ಕಳಿಗೆ ಬಾಹ್ಯ ಜ್ಞಾನ ವೃದ್ದಿಗಾಗಿ ನಮ್ಮ ಸಂಸ್ಥೆಯಲ್ಲಿ ಮಕ್ಕಳಿಗೆ ನಾಟಕ, ಹಾಡುಗಾರಿಕೆ, ಕ್ರೀಡಾ ಸ್ಪರ್ಧೆ, ಭಾಷಣ, ಛದ್ಮವೇಷ, ರಸಪ್ರಶ್ನೆ ಸೇರಿದಂತೆ ವಿವಿಧ ಸ್ಪರ್ಧೆ ಮತ್ತು ಕಾರ್ಯಕ್ರಮಗಳನ್ನು ಆಯೋಸಿದ್ದೆವು ಎಂದರು.

ಜವಾಬ್ದಾರಿ ಮತ್ತು ನಾಯಕತ್ವ

ನಮ್ಮಿಂದ ಕಣ್ಮರೆಯಾಗುತ್ತಿರುವ ಆಧುನಿಕ ಮಾನವನ ಪ್ರಥಮ ಸಾರಿಗೆ ವಾಹನ ಎತ್ತಿನ ಬಂಡಿಗಳನ್ನು ತರಿಸಿ ಅದರಲ್ಲಿ ಮಕ್ಕಳು ನಗರದ ಪ್ರಮುಖ ರಸ್ತೆಗಳಲ್ಲಿ ಪ್ರಯಾಣಿಸಿ, ಎತ್ತಿನ ಬಂಡಿಯ ಪ್ರಯಾಣದ ಅನುಭವ ಪಡೆದರು. ಈ ದಿನ ನಡೆದ ಚಟುವಟಿಕೆಗಳು ಮಕ್ಕಳಿಗೆ ಮನರಂಜನೆ ನೀಡುವುದಲ್ಲದೆ, ಜವಾಬ್ದಾರಿ ಮತ್ತು ನಾಯಕತ್ವದ ಮಹತ್ವವನ್ನು ಅನುಭವಿಸಲು ಸಹಾಯ ಮಾಡುತ್ತದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪೂರ್ಣ ಪ್ರಜ್ಞ ಶಾಲೆಯ ಅಧ್ಯಕ್ಷ ಎನ್.ವೆಂಕಟೇಶ್, ಶಾಲಾ ಮುಖ್ಯೋಪಾಧ್ಯಾಯಿನಿ ಅನಿತಾ, ಶಾಲೆಯ ಭೋಧಕ ಮತ್ತು ಭೋಧಕೇತರ ಸಿಬ್ಬಂಧಿ, ವಿದ್ಯಾರ್ಥಿಗಳು, ಪೋಷಕರು ಇದ್ದರು.

PREV

Recommended Stories

ತಿಮ್ಮಕ್ಕನಿಗೆ ಮಕ್ಕಳ ಕೊರಗು ನೀಗಿಸಿದ ಸಾಲು ಮರಗಳು
ಗಾಂಧಿ ಮೈದಾನದ ತ್ಯಾಜ್ಯವೆಲ್ಲ ತುಂಗೆ ಒಡಲಿಗೆ