ಮಕ್ಕಳಿಗೆ ಸಂಸ್ಕಾರದ ಜತೆ ಉತ್ತಮ ಶಿಕ್ಷಣ ನೀಡಿ: ಸಿದ್ದರಾಮಾನಂದ ಶ್ರೀ

KannadaprabhaNewsNetwork |  
Published : Dec 16, 2025, 02:30 AM IST
ಸ | Kannada Prabha

ಸಾರಾಂಶ

ಪ್ರತಿಯೊಬ್ಬರು ಪಕ್ಷಾತೀತವಾಗಿ ಸಮಾಜ ಕಟ್ಟಬೇಕಿದೆ.

ಹಗರಿಬೊಮ್ಮನಹಳ್ಳಿ: ಪ್ರತಿಯೊಬ್ಬರು ಪಕ್ಷಾತೀತವಾಗಿ ಸಮಾಜ ಕಟ್ಟಬೇಕಿದೆ. ಮಕ್ಕಳಿಗೆ ಸಂಸ್ಕಾರದ ಜತೆಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸಮಾಜದ ವಿದ್ಯಾರ್ಥಿಗಳಿಗೆ ವಸತಿ ನಿಲಯ ಆರಂಭಿಸಬೇಕು ಎಂದು ತಿಂಥಣಿ ಬ್ರಿಡ್ಜ್ ಕನಕಗುರು ಪೀಠದ ಸಿದ್ದರಾಮಾನಂದ ಮಹಾಸ್ವಾಮಿ ತಿಳಿಸಿದರು.

ಪಟ್ಟಣದಲ್ಲಿ ತಾಲೂಕು ಕುರುಬರ ಸಂಘದಿಂದ ನಡೆದ ಕನಕದಾಸರ ೫೩೮ನೇ ಜಯಂತ್ಯುತ್ಸವ ಮತ್ತು ಕನಕ ಸಮುದಾಯ ಭವನದ ಭೂಮಿಪೂಜೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಹಾಲುಮತ ಸಮಾಜದ ಎಲ್ಲರಿಗೂ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಶ್ರಮಿಸಬೇಕು. ಇತರೆ ಸಮಾಜಗಳೊಂದಿಗೆ ಪರಸ್ಪರ ಬಾಂಧವ್ಯದಿAದ ಇದ್ದು, ಸಮಾಜದ ಹೆಸರು ಉಳಿಸುವ ಕೆಲಸ ಮಾಡಬೇಕು ಎಂದರು.

ಶಾಸಕ ಕೆ.ನೇಮರಾಜ ನಾಯ್ಕ ಮಾತನಾಡಿ, ಹಾಲುಮತ ಸಮಾಜದ ಸಮಗ್ರ ಪ್ರಗತಿಗೆ ಅಗತ್ಯ ನೆರವು ನೀಡಲಾಗುವುದು. ಸುಸಜ್ಜಿತ ಸಮುದಾಯ ಭವನ ನಿರ್ಮಿಸುವ ನಿಟ್ಟಿನಲ್ಲಿ ಕೋಟಿ ರು. ಅನುದಾನ ಒದಗಿಸಲಾಗಿದೆ ಎಂದರು.

ನಂದಿಪುರ ಡಾ.ಮಹೇಶ್ವರ ಸ್ವಾಮೀಜಿ ಮುಖಂಡ ಬಸವರಾಜ ಮಾತನಾಡಿದರು. ತಾಲೂಕು ಕುರುಬರ ಸಂಘದ ಅಧ್ಯಕ್ಷ ಶಿವರಾಜ ಮೈನಳ್ಳಿ ಅಧ್ಯಕ್ಷತೆ ವಹಿಸಿದ್ದರು. ಕೊಟ್ರಯ್ಯ ಒಡೆಯರ್, ಸಮಾಜದ ಮುಖಂಡರಾದ ಮುಟುಗನಹಳ್ಳಿ ಕೊಟ್ರೇಶ್, ಸೊನ್ನದ ಮಹೇಶ, ಮೈಲಾರಪ್ಪ, ಬಣಕಾರ ಗೋಣೆಪ್ಪ, ಬಂಡಾರಿ ಭರ್ಮಪ್ಪ, ಕೋಗಳಿ ಹನುಮಂತಪ್ಪ, ಝಳಿಕಿ ಗುರುಬಸಪ್ಪ ಇತರರಿದ್ದರು. ತಾಲೂಕು ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ.ಆಂಜನೇಯ, ಶಿಕ್ಷಕಿ ಶಾರದಾ ಮಂಜುನಾಥ ನಿರ್ವಹಿಸಿದರು. ಇದಕ್ಕೂ ಮುನ್ನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ೫೦೧ ಕುಂಭಗಳೊಂದಿಗೆ ಕನಕದಾಸರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು.

ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಡೆದ ಕನಕದಾಸರ ೫೩೮ನೇ ಜಯಂತ್ಯುತ್ಸವ ನಿಮಿತ್ತ ಪ್ರಮುಖ ಬೀದಿಗಳಲ್ಲಿ ಕನಕದಾಸರ ಭಾವಚಿತ್ರದ ಮೆರವಣಿಗೆಗೆ ಶಾಸಕ ಕೆ.ನೇಮರಾಜ ನಾಯ್ಕ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!