ಬೆಳಗಾವಿ ಜಿಲ್ಲೆಗೆ ನಾಲ್ಕೈದು ಮಂತ್ರಿ ಸ್ಥಾನ ನೀಡಿ

KannadaprabhaNewsNetwork |  
Published : May 31, 2026, 03:15 AM IST
ಬೆಳಗಾವಿ  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಬಳಿಕ ರಾಜ್ಯದಲ್ಲಿ ಮಂತ್ರಿ ಸ್ಥಾನಕ್ಕೆ ಲಾಬಿ ಜೋರಾಗಿ ಕೇಳಿ ಬರುತ್ತಿದೆ. ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆ ಬೆಳಗಾವಿ 18 ವಿಧಾನಸಭಾ ಕ್ಷೇತ್ರವನ್ನು ಒಳಗೊಂಡು, ಮೂರು ಜಿಲ್ಲೆಯ ಆಗುವಷ್ಟು ದೊಡ್ಡದಾಗಿದೆ. ಅದರಂತೆ ಜಿಲ್ಲೆಯಲ್ಲಿ ಇಬ್ಬರು ಮಂತ್ರಿಗಳನ್ನು ಹೊಂದಿದ್ದು, ಬೆಳಗಾವಿ ನಗರದಿಂದ ಮಂತ್ರಿ ಸ್ಥಾನಕ್ಕೆ ಶಾಸಕ ಆಸೀಫ್ ಸೇಠ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ದಲಿತ ಸಂಘಟನೆಯ ಮುಖಂಡ ಮಲ್ಲೇಶ್ ಚೌಗಲೇ ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಬಳಿಕ ರಾಜ್ಯದಲ್ಲಿ ಮಂತ್ರಿ ಸ್ಥಾನಕ್ಕೆ ಲಾಬಿ ಜೋರಾಗಿ ಕೇಳಿ ಬರುತ್ತಿದೆ. ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆ ಬೆಳಗಾವಿ 18 ವಿಧಾನಸಭಾ ಕ್ಷೇತ್ರವನ್ನು ಒಳಗೊಂಡು, ಮೂರು ಜಿಲ್ಲೆಯ ಆಗುವಷ್ಟು ದೊಡ್ಡದಾಗಿದೆ. ಅದರಂತೆ ಜಿಲ್ಲೆಯಲ್ಲಿ ಇಬ್ಬರು ಮಂತ್ರಿಗಳನ್ನು ಹೊಂದಿದ್ದು, ಬೆಳಗಾವಿ ನಗರದಿಂದ ಮಂತ್ರಿ ಸ್ಥಾನಕ್ಕೆ ಶಾಸಕ ಆಸೀಫ್ ಸೇಠ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ದಲಿತ ಸಂಘಟನೆಯ ಮುಖಂಡ ಮಲ್ಲೇಶ್ ಚೌಗಲೇ ಆಗ್ರಹಿಸಿದರು.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವಾರು ದಶಕಗಳಿಂದ ಬೆಳಗಾವಿ ನಗರದದಿಂದ ಮಂತ್ರಿ ಸ್ಥಾನಕ್ಕೆ ಬೇಡಿಕೆ ಇದೆ. ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಅಸೀಫ್ ಸೇಠ್ ಜಾತಿ ಧರ್ಮಗಳನ್ನು ಲೆಕ್ಕಿಸದೆ, ಬಡ ಶ್ರೀಮಂತರು ಎನ್ನದೆ, ನಿರಂತರ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ಸಣ್ಣ ಪುಟ್ಟ ಜಿಲ್ಲೆಗಳಿಗೆ ಮಂತ್ರಿಗಳನ್ನು ಮಾಡುವ ಸರ್ಕಾರ ಬೆಳಗಾವಿಗೆ ಕನಿಷ್ಠ ನಾಲ್ಕೈದು ಜನರನ್ನಾದರು ಮಂತ್ರಿಗಳನ್ನಾಗಿ ಮಾಡಬೇಕು. ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ, ನೂತನ ಕ್ಯಾಬಿನೆಟ್ ಸಭೆಯಲ್ಲಿ ಶಾಸಕ ಆಸೀಫ್ ಸೇಠ್ ಅವರನ್ನು ಮಂತ್ರಿಯನ್ನಾಗಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಒಂದು ವೇಳೆ ಬೆಳಗಾವಿ ನಗರದಿಂದ ಶಾಸಕ ಆಸೀಫ್ ಸೇಠ್ ಅವರನ್ನು ಮಂತ್ರಿ ಮಾಡಲಿಲ್ಲ ಅಂದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಈ ವೇಳೆ ಸಿದ್ದರಾಯ್ ಮೇತ್ರಿ, ಪಿಂಟು ಗುಂಡಣ್ಣವರ್, ಲತಾ ಮಾನೆ, ಪರಶುರಾಮ ಮುಕನವರ ಸೇರಿದಂತೆ ದಲಿತ ಕಾಂಗ್ರೆಸ್ ದಾಧಿಕಾರಿಗಳು, ಮುಖಂಡರು, ಮಹಿಳಾ ಪದಾಧಿಕಾರಿಗಳು, ಕಾರ್ಯರ್ತರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾತಂತ್ರ್ಯ ನಂತರ ಇಂಡಿ ಮತಕ್ಷೇತ್ರಕ್ಕೆ ಸಚಿವಗಿರಿ?
ಆರ್.ಬಿ. ತಿಮ್ಮಾಪೂರಗೆ ಡಿಸಿಎಂ ಸ್ಥಾನ ನೀಡಲು ಆಗ್ರಹ