ಚನ್ನಗಿರಿ ಪಟ್ಟಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ: ಸಂಸದೆ

KannadaprabhaNewsNetwork |  
Published : Mar 01, 2025, 01:00 AM IST
ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಅಭಿನಂಧನೆ ಸಲ್ಲಿಸಿ ಮಾಧ್ಯಮದವರೊಂದಿಗೆ ಮಾತನಾಡುತ್ತೀರುವ ಸಂಸದೆ ಡಾ.ಪ್ರಭಮಲ್ಲಿಕಾರ್ಜುನ್ | Kannada Prabha

ಸಾರಾಂಶ

ಪಟ್ಟಣದ ಸ್ವಚ್ಛತೆ, ಶುದ್ಧ ಕುಡಿಯುವ ನೀರು ಮತ್ತು ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತ ಪಟ್ಟಣದ ನಾಗರೀಕರಿಗೆ ಮೂಲಸೌಲಭ್ಯಗಳನ್ನು ಒದಗಿಸಬೇಕು. ಆ ಮೂಲಕ ಉತ್ತಮ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.

-ಪುರಸಭೆ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ । ಗಣ್ಯರ ಅಭಿನಂದನೆ - - - ಕನ್ನಡಪ್ರಭ ವಾರ್ತೆ ಚನ್ನಗಿರಿ

ಪಟ್ಟಣದ ಸ್ವಚ್ಛತೆ, ಶುದ್ಧ ಕುಡಿಯುವ ನೀರು ಮತ್ತು ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತ ಪಟ್ಟಣದ ನಾಗರೀಕರಿಗೆ ಮೂಲಸೌಲಭ್ಯಗಳನ್ನು ಒದಗಿಸಬೇಕು. ಆ ಮೂಲಕ ಉತ್ತಮ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಶುಕ್ರವಾರ ಪಟ್ಟಣದ ಪುರಸಭೆಯ 2ನೇ ಅವಧಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಪುರಸಭೆಗೆ ಅಧ್ಯಕ್ಷ-ಉಪಾಧ್ಯಕ್ಷರಾಗಿ ಮಹಿಳೆಯರೇ ಆಯ್ಕೆ ಆಗಿರುವುದರಿಂದ ಸ್ಥಳೀಯ ಆದಾಯ ವೃದ್ಧಿಸಿಕೊಂಡು ಪುರಸಭೆ ಪ್ರಗತಿದಾಯಕವಾಗಿ ನಡೆಯುವಂತೆ ಮಾಡಬೇಕು ಎಂದರು.

ಚನ್ನಗಿರಿ ಪಟ್ಟಣದ ಹೊರವಲಯದಲ್ಲಿ ಕೆ.ಎಸ್.ಆರ್.ಟಿ.ಸಿ. ಡಿಪೋ ಕಾಮಗಾರಿ ಕೆಲಸ ಸಂಪೂರ್ಣಗೊಂಡಿದೆ. ಇದರ ಉದ್ಘಾಟನೆ ಯಾವಾಗ ಎಂದು ಮಾಧ್ಯಮದವರು ಸಂಸದರನ್ನು ಕೇಳಿದರು. ಆಗ ಈ ಬಗ್ಗೆ ಮಾಹಿತಿಯನ್ನು ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಂಸದರು ಭರವಸೆ ನೀಡಿದರು.

ಶಾಸಕ ಬಸವರಾಜ ವಿ.ಶಿವಗಂಗಾ ಮಾತನಾಡಿ, ಚನ್ನಗಿರಿ ಪುರಸಭೆಗೆ ಇಲ್ಲಿಯವರೆಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಇರಲಿಲ್ಲ. ಈ ದಿನದಿಂದ ಅಧ್ಯಕ್ಷ-ಉಪಾಧ್ಯಕ್ಷರು ಆಯ್ಕೆಗೊಂಡಿದ್ದು ಪಟ್ಟಣದ ಸ್ವಚ್ಛತೆಯಿಂದ ಹಿಡಿದು ಶುದ್ಧ ಕುಡಿಯುವ ನೀರು ಪೂರೈಕೆ, ಬೀದಿದೀಪ ಮತ್ತು ಪಟ್ಟಣದ ಅಭಿವೃದ್ಧಿ ಕುರಿತಂತೆ ಸಭೆಯಲ್ಲಿ ತೀರ್ಮಾನಿಸಿ, ಅಭಿವೃದ್ಧಿಗೆ ಶ್ರಮಿಸುವಂತೆ ಎಂದು ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಸೂಚಿಸಿ, ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್, ಕಾಂಗ್ರೆಸ್ ಸದಸ್ಯರು ಹಾಜರಿದ್ದರು.

- - - -28ಕೆಸಿಎನ್‌ಜಿ2.ಜೆಪಿಜಿ:

ಚನ್ನಗಿರಿ ಪುರಸಭೆ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದ 13 ಜಿಲ್ಲೆಗಳಲ್ಲಿ ಬೇಸಿಗೆ ಮಳೆ
ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ