ದೇವರಾಜ ಅರಸುಗೆ ಕರ್ನಾಟಕ ರತ್ನ ನೀಡಿ

KannadaprabhaNewsNetwork |  
Published : Dec 03, 2024, 12:31 AM IST
ದೇವರಾಜ ಅರಸುಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿಬೇಕು ಎಂದು ಕೋರಿ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಸೋಮವಾರ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರುಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿಬೇಕು ಎಂದು ಕೋರಿ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಸೋಮವಾರ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದರು.ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಒಕ್ಕೂಟದ ಮುಖಂಡರು, ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಅವರು ಜಾರಿಗೆ ತಂದ ಕ್ರಾಂತಿಕಾರಿ ಯೋಜನೆಗಳು, ಜನಪರ ಕಾರ್ಯಕ್ರಮಗಳು ಹಿಂದುಳಿದವರು, ಶೋಷಿತರಿಗೆ ನೆರವಾಗಿವೆ. ಧ್ವನಿ ಇಲ್ಲದ ವರ್ಗದ ಧ್ವನಿಯಾಗಿ ಅರಸು ಅವರು ಹಲವಾರು ಕಾರ್ಯಕ್ರಮಗಳ ಮೂಲಕ ನಾಡಿಗೆ ಕೊಡುಗೆ ನೀಡಿದ್ದಾರೆ ಎಂದಿದ್ದಾರೆ.ಹಿಂದುಳಿದ ವರ್ಗಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯ ಜಾರಿಗೆ ತಂದು ಸಾಮಾಜಿಕ ನ್ಯಾಯವನ್ನು ಅನುಷ್ಠಾನಗೊಳಿಸಿದ್ದರು. ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಲು ಕಾರಣಕರ್ತರು. ಇವರ ಸೇವೆ ಸದಾ ಸ್ಮರಣೀಯ. ಇಂತಹ ಮಹನೀಯರಿಗೆ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಅವರ ಸೇವೆಯನ್ನು ಗೌರವಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಮನವಿಗೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದರು.ದೇವರಾಜ ಅರಸು ಅವರು ಹುಟ್ಟಿದ ಮನೆಯನ್ನು ದುರಸ್ತಿಗೊಳಿಸಬೇಕು, ಅವರ ಸಮಾಧಿಯನ್ನು ಸ್ಮಾರಕವಾಗಿ ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿದರು.ಜಿಲ್ಲೆಯಲ್ಲಿ ಪರಿಶಿಷ್ಟ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು, ತುಮಕೂರು ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ಸ್ಥಾಪಿಸಲು ಸಾಧ್ಯವಾಗಿಲ್ಲ, ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯನ್ನು ಸ್ಥಾಪಿಸಲು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡುವಂತೆ ಕೋರಿದರು.ಶಾಸಕ ಟಿ.ಬಿ.ಜಯಚಂದ್ರ, ದಲಿತ ಸಂಘರ್ಷ ಸಮಿತಿಯ ಮುಖಂಡರಗಳಾದ ಕೊಟ್ಟ ಶಂಕರ್, ಮರಳೂರು ಕೃಷ್ಣಮೂರ್ತಿ,ಕೇಬಲ್ ರಘುಕುಮಾರ್, ಗಾಂಧಿರಾಜ್ ,ಕಿರಣ್ ,ರಮೇಶ್ ,ಗೋಪಾಲ್, ಹಿಂದುಳಿದ ವರ್ಗಗಳ ಒಕ್ಕೂಟದ ಗೌರವಾಧ್ಯಕ್ಷ ಟಿ.ಎನ್.ಮಧುಕರ್, ಜಿಲ್ಲಾಧ್ಯಕ್ಷ ಧನಿಯಾಕುಮಾರ್, ಗೌರವ ಸಲಹೆಗಾರರಾದ ವೆಂಕಟಸ್ವಾಮಿ, ಪಿ.ಮೂರ್ತಿ, ಪ್ರಧಾನ ಕಾರ್ಯದರ್ಶಿ ಮಲ್ಲಸಂದ್ರ ಶಿವಣ್ಣ, ಉಪಾಧ್ಯಕ್ಷ ಡಿ.ಎಂ.ಸತೀಶ್, ಪದಾಧಿಕಾರಿಗಳಾದ ಹರೀಶ್ ಆಚಾರ್ಯ, ಮಂಜೇಶ್ ಒಲಿಂಪಿಕ್, ಗುರುರಾಘವೇಂದ್ರ, ಡಮರುಗೇಶ್, ಶಾಂತಕುಮಾರ್, ತೇಜಸ್, ತೇಜೇಶ್ ಮೊದಲಾದವರು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ ಮನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಗಳಿಂದ ಮಕ್ಕಳ ಶಿಕ್ಷಣ ಕಸಿಯುವ ಹುನ್ನಾರ
ಭಾರತದ ಭವಿಷ್ಯ ವರ್ಗ ಕೋಣೆಯಲ್ಲಿದೆ