ಕೆರೆ ನಿರ್ಮಾಣಕ್ಕೆ ಭೂಮಿ ನೀಡಿ, ಅಭಿವೃದ್ಧಿಗೆ ಸಹಕರಿಸಿ: ಬಸವರಾಜ ರಾಯರಡ್ಡಿ

KannadaprabhaNewsNetwork |  
Published : Jul 09, 2024, 12:54 AM IST
8ಕೆಕೆಆರ್1:ಕುಕನೂರು ತಾಲೂಕಿನ ತಾಲೂಕಿನ ಚಿಕೇನಕೊಪ್ಪ ಗ್ರಾಮದಲ್ಲಿ 38 ಕೆರೆ ನಿರ್ಮಾಣ ಯೋಜನೆಗೆ ಜಮೀನು ಲಭ್ಯತೆಯ ಬಗ್ಗೆ ಹಿರಿಯರು, ರೈತ ಪ್ರತಿನಿಧಿಗಳೊಂದಿಗೆ ಜರುಗಿದ  ಚರ್ಚಾ ಸಭೆಯನ್ನೂದ್ದೇಶಿಸಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಮಾತನಾಡಿದರು. | Kannada Prabha

ಸಾರಾಂಶ

ರಾಜ್ಯದಲ್ಲಿ ಈ ಸಲ ಯಲಬುರ್ಗಾ ಕ್ಷೇತ್ರದಲ್ಲಿ ಕೆರೆ ನಿರ್ಮಿಸಲು ಅನುದಾನ ಹಾಗೂ ಅವಕಾಶ ಸಿಕ್ಕಿರುವುದು ಕ್ಷೇತ್ರದ ಜನತೆಯ ಸುವರ್ಣ ಅವಕಾಶ ಆಗಿದೆ.

38 ಕೆರೆ ನಿರ್ಮಾಣ ಯೋಜನೆಗೆ ಜಮೀನು ಲಭ್ಯತೆಯ ಬಗ್ಗೆ ಚರ್ಚಾ ಸಭೆಯಲ್ಲಿ ಸಿಎಂ ಆರ್ಥಿಕ ಸಲಹೆಗಾರ ಹೇಳಿಕೆ

ಕನ್ನಡಪ್ರಭ ವಾರ್ತೆ ಕುಕನೂರು

ರಾಜ್ಯದಲ್ಲಿ ಈ ಸಲ ಯಲಬುರ್ಗಾ ಕ್ಷೇತ್ರದಲ್ಲಿ ಕೆರೆ ನಿರ್ಮಿಸಲು ಅನುದಾನ ಹಾಗೂ ಅವಕಾಶ ಸಿಕ್ಕಿರುವುದು ಕ್ಷೇತ್ರದ ಜನತೆಯ ಸುವರ್ಣ ಅವಕಾಶ ಆಗಿದೆ. ಕೆರೆ ನಿರ್ಮಾಣಕ್ಕೆ ರೈತರು ಜಮೀನು ನೀಡಿ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

ತಾಲೂಕಿನ ಚಿಕೇನಕೊಪ್ಪ, ಬಿನ್ನಾಳ, ಯರೆಹಂಚಿನಾಳ ಗ್ರಾಮದಲ್ಲಿ ₹970 ಕೋಟಿ ಅನುದಾನದಲ್ಲಿ 38 ಕೆರೆ ನಿರ್ಮಾಣ ಯೋಜನೆಗೆ ಜಮೀನು ಲಭ್ಯತೆಯ ಬಗ್ಗೆ ಹಿರಿಯರು, ರೈತ ಪ್ರತಿನಿಧಿಗಳೊಂದಿಗೆ ಜರುಗಿದ ಚರ್ಚಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕೂಡಲಸಂಗಮದ ನಾರಾಯಣಪುರದಿಂದ ಯಲಬುರ್ಗಾ ಕ್ಷೇತ್ರಕ್ಕೆ 150 ಕಿಮೀ ದೂರದಿಂದ 600 ಪೀಟ್ ಎತ್ತರದಲ್ಲಿರುವ ನಮ್ಮ ಕ್ಷೇತ್ರಕ್ಕೆ ನೀರು ಬರುವುದು ಸುಲಭದ ಮಾತಲ್ಲ. ಬಜೆಟಿನಲ್ಲಿ ಕೆರೆ ತುಂಬಿಸಲು ₹970 ಕೋಟಿ ಅನುದಾನ ಮಂಜೂರು ಮಾಡಿಸಿದ್ದೇನೆ. ರಾಜ್ಯದಲ್ಲಿಯೇ ನಮ್ಮ ಕ್ಷೇತ್ರದ ಕೆರೆ ತುಂಬಿಸಲು ಅನುದಾನ ಸಿಕ್ಕಿದೆ. ಮತ್ತೆಲ್ಲೂ ಇಲ್ಲ. ರಾಜ್ಯ ಸರ್ಕಾರ ಜನಪರ ಯೋಜನೆಗೆ ಹೆಚ್ಚಿನ ಅನುದಾನ ನೀಡುತ್ತಿದೆ. ಹಗ್ಗದ ಮೇಲೆ ನಡೆಯುತ್ತಿದ್ದರೂ ನಮ್ಮ ಯಲಬುರ್ಗಾ ಕ್ಷೇತ್ರಕ್ಕೆ ಭರಪೂರ ಅನುದಾನ ತಂದಿದ್ದೇನೆ. ಕ್ಷೇತ್ರದ ಅಭಿವೃದ್ಧಿಗೆ ಅಣಿಯಾಗಿದ್ದೇನೆ ಎಂದರು.

ನೂತನ ಕೆರೆ ನಿರ್ಮಾಣಕ್ಕೆ ರೈತರು, ಜನರು ಸರ್ಕಾರದ ಭೂ ಸ್ವಾಧೀನ ಬೆಲೆಯಲ್ಲಿ ಭೂಮಿ ನೀಡಬೇಕು. ಇದಕ್ಕೆ ಎಲ್ಲರ ಸಹಕಾರ ಬೇಕು. ಸಿಎಂ, ಡಿಸಿಎಂ ಕೇಳಿಕೊಂಡು ಕೆರೆ ನಿರ್ಮಿಸುತ್ತೇವೆ. ಹಿಂದೆ ರಾಜ ಮಹಾರಾಜರ ಕಾಲದಲ್ಲಿ ಕೆರೆ ನಿರ್ಮಾಣ ಮಾಡುತ್ತಿದ್ದರು. ಸದ್ಯ ಆ ಕಾಲ ಕ್ಷೇತ್ರಕ್ಕೆ ಬಂದಿದೆ. ಇದೊಂದು ನಿಜಕ್ಕೂ ಸುವರ್ಣ ಅವಕಾಶ. ಇದನ್ನು ಕಳೆದುಕೊಳ್ಳುವುದು ಬೇಡ. ಪಕ್ಷಾತೀತವಾಗಿ ಅಭಿವೃದ್ಧಿಗೆ ಸಹಕರಿಸೋಣ. 38 ಕೆರೆ ನಿರ್ಮಾಣಕ್ಕೆ ಗ್ರಾಮವೊಂದಕ್ಕೆ 50 ಎಕರೆ ಜಮೀನು ಬೇಕು. ರೈತರು ತ್ವರಿತವಾಗಿ ಭೂಮಿ ನೀಡಿ ಎಂದರು.

ಚಿಕೇನಕೊಪ್ಪ, ಬಿನ್ನಾಳ, ಯರೇಹಂಚಿನಾಳ ಗ್ರಾಮದಲ್ಲಿ ಕಲ್ಯಾಣ ಮಂಟಪ ಮಂಜೂರು ಆಗಿದ್ದು, ಅವುಗಳಿಗೂ ಜಮೀನು ಅಗತ್ಯವಿದೆ. ಚಿಕೇನಕೊಪ್ಪ ಶಾಲೆ, ಬಿನ್ನಾಳದಲ್ಲಿ ಬಸ್ ನಿಲ್ದಾಣಕ್ಕೆ ಜಾಗಬೇಕು. ಜನರು ಭೂಮಿ ನೀಡಲು ಮುಂದಾಗಬೇಕು ಎಂದರು.

ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ ಅಭಿಯಂತರ ಮಂಜುನಾಥ ಮಾತನಾಡಿ, ಈ ಕೆರೆ ನಿರ್ಮಾಣದ ಅವಕಾಶ ಕಳೆದುಕೊಳ್ಳಬೇಡಿ. ಕೂಡಲಸಂಗಮದ ನಾರಾಯಣಪುರ ಹಿನ್ನೀರಿನಿಂದ ನೀರು ತಂದು ಕುಡಿಯಲು ಹಾಗೂ ನೀರಿನ ಅಭಾವ ನೀಗಿಸಲು, ಅಂತರ್ಜಲ ಮಟ್ಟ ಹೆಚ್ಚಿಸಲು ಬಸವರಾಜ ರಾಯರಡ್ಡಿ ದೊಡ್ಡ ಯೋಜನೆ ತಂದಿದ್ದಾರೆ. ಜನರು ಸಹಕಾರ ನೀಡಿ ಅವಕಾಶ ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.

ಎಡಿಸಿ ಮಹೇಶ ಮಾಲಗಿತ್ತಿ, ತಹಸೀಲ್ದಾರ್ ಪ್ರಾಣೇಶ, ತಾಪಂ ಇಒ ಸಂತೋಷ ಬಿರಾದಾರ ಪಾಟೀಲ್, ಸಿಪಿಐ ಮೌನೇಶ್ವರ ಪಾಟೀಲ್, ನವಲಿ ಹಿರೇಮಠ, ಕುಕನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಗೌಡ ಚಂಡೂರು, ಯಲಬುರ್ಗಾ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಯಂಕಣ್ಣ ಯರಾಶಿ, ಕೆರಿಬಸಪ್ಪ ನಿಡಗುಂದಿ, ನಾರಾಯಣಪ್ಪ ಹರಪನ್ಹಳ್ಳಿ, ಮಂಜುನಾಥ ಕಡೇಮನಿ, ವಕ್ತಾರರಾದ ಸಂಗಮೇಶ ಗುತ್ತಿ, ಶಿವನಗೌಡ ದಾನರೆಡ್ಡಿ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅದ್ಧೂರಿಯಾಗಿ ನಡೆದ ಶ್ರೀಚೆಲುವನಾರಾಯಣಸ್ವಾಮಿ ತೆಪ್ಪೋತ್ಸವ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್ ದರದಲ್ಲಿ ಏರಿಕೆ