ಕನ್ನಡಪ್ರಭ ವಾರ್ತೆ ಮೈಸೂರು
ನಗರದ ನ್ಯಾಯಾಲಯ ಆವರಣದ ಮೈಸೂರು ವಕೀಲರ ಸಂಘಕ್ಕೆ ಗುರುವಾರ ಭೇಟಿ ನೀಡಿ ಸನ್ಮಾನ ಸ್ವೀಕರಿಸಿ ಮತಯಾಚಿಸಿದ ಅವರು, ನಾನು ಪಾರ್ಲಿಮೆಂಟ್ ನಲ್ಲಿ ಸುಮ್ಮನೆ ಕುಳಿತು ಬರುವುದಿಲ್ಲ. ರಾಜ್ಯದ ಜನತೆಯ ಪರವಾಗಿ, ರಾಜ್ಯದ ಅಭಿವೃದ್ಧಿಯ ಪರವಾಗಿ ಮಾತನಾಡುತ್ತೇನೆ. ತಾವೆಲ್ಲರೂ ಮತ ನೀಡಿ ನನ್ನನು ಗೆಲ್ಲಿಸಿದ್ದಲ್ಲಿ ಸದಾ ಜನರ ಪರವಾಗಿದ್ದು, ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುತ್ತೇನೆ ಎಂದರು.
ಮೈಸೂರು ಮತ್ತು ಕೊಡಗು ಜಿಲ್ಲೆಯು ಪ್ರವಾಸೋದ್ಯಮ ಸ್ಥಳವನ್ನಾಗಿ ನಿರ್ಮಿಸಲು ಉತ್ತಮವಾದ ಸ್ಥಳವಾಗಿದೆ. ಇದರ ಜೊತೆಗೆ ಒಂದು ಲಕ್ಷ ಜನರಿಗೆ ಉದ್ಯೋಗವನ್ನು ಸೃಷ್ಟಿಸುವ ವಾತಾವರಣವಿದೆ. ಆದರೆ, ಈ ಕಾರ್ಯಕ್ಕೆ ಹಿಂದಿನ ಸಂಸದರು ಪ್ರಯತ್ನಿಸಲಿಲ್ಲ. ಈ ಮಹತ್ವದ ಕಾರ್ಯವನ್ನು ಮಾಡುವಲ್ಲಿ ನಾನು ಪ್ರಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಅವರು ಹೇಳಿದರು.ಸಂವಿಧಾನದ ಆಶಯಂತೆ ಕಾಂಗ್ರೆಸ್ ಸರ್ಕಾರ ಕೆಲಸ: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶಾಸಕ ತನ್ವೀರ್ ಶೇಠ್ ಮಾತನಾಡಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ದೊರೆಯಬೇಕು ಎಂಬಂತಹ ಮೂಲ ಉದ್ದೇಶವನ್ನು ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ಸರ್ಕಾರವನ್ನು ನಡೆಸುತ್ತಿದೆ. ಸಮಾಜದ ಬಡತನವನ್ನು ನಿರ್ಮೂಲನೆ ಮಾಡಿ, ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಬೇಕು. ಶಿಕ್ಷಣದ ಸೌಲಭ್ಯ ಎಲ್ಲರಿಗೂ ಸಿಗಬೇಕು ಎಂಬಂತಹ ಸಂವಿಧಾನದ ಆಶಯಂತೆ ಕಾಂಗ್ರೆಸ್ ಸರ್ಕಾರ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಸ್. ಲೋಕೇಶ್, ಕಾರ್ಯದರ್ಶಿ ಎ.ಜಿ. ಸುಧೀರ್, ಉಪಾಧ್ಯಕ್ಷ ಚಂದ್ರಶೇಖರ್, ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಮಾಜಿ ಕಾರ್ಯದರ್ಶಿ ಎಸ್. ಉಮೇಶ್, ಹಿರಿಯ ವಕೀಲರಾದ ಚಂದ್ರಮೌಳಿ,