ಗಂಗಾವತಿ:
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕೈದು ದಿನಗಳಿಂದ ಪಾಕಿಸ್ತಾನ ವಿರುದ್ಧ ಭಾರತ ಸಮರ ಸಾರಲು ಸಿದ್ಧವಾಗಿದೆ. ಇದಕ್ಕೆ ಪಕ್ಷಾತೀತ ಬೆಂಬಲವು ಸಿಕ್ಕಿದೆ. ಆದರೆ, ಸಿದ್ದರಾಮಯ್ಯ ಯುದ್ಧ ಬೇಡ ಎನ್ನುತ್ತಿದ್ದಾರೆ. ಇವರಿಗೆ ಬುದ್ಧಿ ಸ್ಥಿರವಿಲ್ಲದಾಗಿದ್ದು, ಮೆಡಿಕಲ್ ಟ್ರೀಟ್ಮೆಂಟ್ ಕೊಡಿಸಿದರೆ ಸರಿಹೋಗುತ್ತದೆ ಎಂದು ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ, ಡಿಸಿಎಂ ಡಿ.ಕೆ. ಶಿವಕುಮಾರ ಪ್ರಧಾನಿ ನರೇಂದ್ರ ಮೋದಿ ಕೈಗೊಳ್ಳುವ ನಿರ್ಧಾರ ಬೆಂಬಲಿಸಿದ್ದಾರೆ. ಇದು ಜಾತ್ಯತೀತ ಮತ್ತು ಪಕ್ಷಾತೀತ ನಿರ್ಣಯ. ಆದರೆ, ಮುಖ್ಯಮಂತ್ರಿಗಳು ಮಾತ್ರ ಪಾಕಿಸ್ತಾನದ ಮೇಲೆ ವ್ಯಾಮೋಹ ತೋರಿಸಿ ಓಲೈಕೆಗೆ ಮುಂದಾಗಿದ್ದಾರೆ ಎಂದು ಕಿಡಿಕಾರಿದರು.ಕಾಂಗ್ರೆಸ್ ನಾಯಕರು ಯುದ್ಧಕ್ಕೆ ಬೆಂಬಲಿಸುವಾಗ ಮುಖ್ಯಮಂತ್ರಿ ಪಾಕಿಸ್ತಾನಕ್ಕೆ ಬೆಂಬಲಿಸಿರುವುದು ಮೂರ್ಖತನದ ಪರಮಾವಧಿ ಎಂದಿರುವ ಅವರು, ಮುಖ್ಯಮಂತ್ರಿ ಭಾರತದಲ್ಲಿರುವ ಮುಸ್ಲಿಂ ಸಮುದಾಯವನ್ನು ಪ್ರೀತಿಸಲಿ. ಆದರೆ, ಪಾಕಿಸ್ತಾನದವರ ಮೇಲೆ ವ್ಯಾಮೋಹ ಏಕೆ? ಎಂದು ಪ್ರಶ್ನಿಸಿದ್ದಾರೆ.
ಓಲೈಕೆ ರಾಜಕಾರಣದಿಂದಾಗಿ ಹಿಂದೂಗಳು ಸಾವಿಗೀಡಾಗುತ್ತಿದ್ದಾರೆ. ಕಾಶ್ಮೀರದಲ್ಲಿ ಅಮಾಯಕ ಹಿಂದೂ ಪುರುಷರನ್ನು ಕುಟುಂಬಸ್ಥರ ಎದುರಲ್ಲೇ ಗುಂಡಿಕ್ಕಿ ಕೊಂದಿರುವುದನ್ನು ಸಹಿಸುವುದಿಲ್ಲ. ಉಗ್ರಗಾಮಿಗಳ ದುಷ್ಕೃತ್ಯಕ್ಕೆ ತಕ್ಕ ಪಾಠ ಕಲಿಸುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಡಿರುವ ಶಪಥಕ್ಕೆ ನಾವು ಸಂಪೂರ್ಣ ಬೆಂಬಲಿಸುತ್ತೇವೆ ಎಂದರು.